LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಹೆದ್ದಾರಿಗೆ ಉರುಳಿ ಬಿದ್ದ ಬಾಯ್ಲರ್ ಟ್ಯಾಂಕ್; ತಪ್ಪಿದ ಅನಾಹುತ

Advertisement
Advertisement

ಮಂಡ್ಯ: ಬಾಯ್ಲರ್ ಟ್ಯಾಂಕ್ ಹೊತ್ತೊಯ್ಯುತ್ತಿದ್ದ ಬೃಹತ್ ಲಾರಿಯೊಂದು ಮರಕ್ಕೆ ಡಿಕ್ಕಿಯಾಗಿ, ಬಾಯ್ಲರ್ ರಸ್ತೆಗೆ ಉರುಳಿಬಿದ್ದ ಘಟನೆ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲೂಕಿನ ಮುರುಕನಹಳ್ಳಿ ಸಮೀಪ ಮೈಸೂರು-ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ​

ರಾಜಸ್ಥಾನದಿಂದ ನಂಜನಗೂಡು ಕೈಗಾರಿಕಾ ಪ್ರದೇಶಕ್ಕೆ ಬಾಯ್ಲರ್ ಟ್ಯಾಂಕ್ ಅನ್ನು ಸಾಗಿಸಲಾಗುತ್ತಿತ್ತು. ಮುರುಕನಹಳ್ಳಿ ಬಳಿ ಬರುತ್ತಿದ್ದಂತೆ ಲಾರಿಯಲ್ಲಿದ್ದ (Lorry) ಬಾಯ್ಲರ್ ಟ್ಯಾಂಕ್ ರಸ್ತೆ ಬದಿಯ ಮರಕ್ಕೆ ತಗುಲಿದ ಪರಿಣಾಮ ಹೆದ್ದಾರಿಗೆ ಅಡ್ಡಲಾಗಿ ಉರುಳಿದೆ. 

ಅಪಘಾತದಿಂದಾಗಿ ಮೈಸೂರು-ಚನ್ನರಾಯಪಟ್ಟಣ ರಾಜ್ಯ ಹೆದ್ದಾರಿಯಲ್ಲಿ ಕೆಲಕಾಲ ಸಂಪೂರ್ಣ ಸಂಚಾರ ಸ್ತಬ್ಧವಾಯಿತು. ಬೆಳಗಿನ ಜಾವದ ವೇಳೆಯಾಗಿದ್ದರಿಂದ ಕಚೇರಿಗೆ ತೆರಳುವವರು, ಸಾರ್ವಜನಿಕರು ಹಾಗೂ ಇತರೆ ವಾಹನ ಸವಾರರು ಸಂಚರಿಸಲಾಗದೆ ಪರದಾಡುವಂತಾಯಿತು. 

ಈ ವೇಳೆ ಸ್ಥಳೀಯ ಜನರು ಬದಲಿ ಮಾರ್ಗದಲ್ಲಿ ಸಂಚರಿಸಲು ಮುಂದಾದರು. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಕೆ.ಆರ್ ಪೇಟೆ ಗ್ರಾಮಾಂತರ ಠಾಣೆಯ ಪೊಲೀಸರು, ಸ್ಥಳೀಯರ ನೆರವಿನಿಂದ ರಸ್ತೆಗೆ ಬಿದ್ದಿದ್ದ ಬಾಯ್ಲರ್ ಟ್ಯಾಂಕನ್ನ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು. ಕೆ.ಆರ್.ಪೇಟೆ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಲೆ ಮಹದೇಶ್ವರ ವನ್ಯಧಾಮದಲ್ಲಿ ಬೇಟೆಗಾರನಿಗೆ ಗುಂಡೇಟುಪತ್ನಿ ಅಗಲಿಕೆ ನೋವಲ್ಲಿ ರಾತ್ರಿಯಿಡೀ ಕಣ್ಣೀರಿಟ್ಟು ಪತಿ ಸಾವುಹೆದ್ದಾರಿಗೆ ಉರುಳಿ ಬಿದ್ದ ಬಾಯ್ಲರ್ ಟ್ಯಾಂಕ್; ತಪ್ಪಿದ ಅನಾಹುತ5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆಸಿದ್ದರಾಮಯ್ಯ ರಾಜಕೀಯ ನಿವೃತ್ತಿ ಆಗಲ್ಲ: ಬೇಳೂರು ಗೋಪಾಲಕೃಷ್ಣಈ ವಾರದೊಳಗೆ ಸಚಿವ ಸಂಪುಟ ವಿಸ್ತರಣೆ ಪೂರ್ಣ: ಡಿಕೆಶಿKPSC ನಲ್ಲಿ 400 ಹುದ್ದೆಗಳಿಗೆ 800 ಕೋಟಿ ಡೀಲ್‌ ಆಗಿದೆ: ಆರ್‌. ಅಶೋಕ್‌ ಬಾಂಬ್‌KPSC ನೇಮಕಾತಿಗೆ ಸುಳ್ಳು ಪ್ರಮಾಣಪತ್ರ ಸಲ್ಲಿಕೆ ಆರೋಪ – ಕೇಸ್‌ ರದ್ದು ಕೋರಿ ಅರ್ಜಿ ಸಲ್ಲಿಸಿದ್ದ ಸುಮಾ ಸಾಹುಕಾರ್‌ಗೆ ಹೈಕೋರ್ಟ್ ತರಾಟೆಶಿವಮೊಗ್ಗದ ಲಾಡ್ಜ್‌ನಲ್ಲಿ ಕ್ರಷರ್ ಉದ್ಯಮಿ ಆತ್ಮಹತ್ಯೆರಾಧಾಕೃಷ್ಣ ನೀರು ಸರಬರಾಜು ಯೋಜನೆ ವಿರೋಧಿಸಿ ಪ್ರತಿಭಟನೆ