LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ

Advertisement
Advertisement
ಹಾಸನ: ರಾಕಿಂಗ್ ಸ್ಟಾರ್ ಯಶ್  ತಾಯಿ ಮನೆ ಸಮೀಪದ ನಿವೇಶನ ಮಾಲೀಕತ್ವ‌ ಜಟಾಪಟಿ ಮತ್ತೆ ಸುದ್ದಿಯಾಗಿದೆ. ಯಶ್‌ ತಾಯಿ ಮನೆ ಬಳಿಯ ಕಾಂಪೌಂಡ್‌ ಕೆಡವಿಸಿದ್ದ ಮಾಲೀಕನ ಜೊತೆ ಪುಷ್ಪಾ ಅರುಣ್‌ಕುಮಾರ್‌  ವಾಗ್ವಾದ ನಡೆಸಿದ್ದಾರೆ.

ಸೈಟ್ ಬಳಿ ಆಗಮಿಸಿರುವ ಯಶ್ ತಾಯಿ ಪುಷ್ಪಾ ಕಾಂಪೌಂಡ್‌ ನಿರ್ಮಾಣಕ್ಕೆ ಮುಂದಾಗಿದ್ದರು. ಇದೇ ವೇಳೆ ಸೈಟ್ ಬಳಿ ದೇವರಾಜು ಆಗಮಿಸಿದ್ದಾರೆ. ದೇವರಾಜು ಅವರಿಗೆ ದಾಖಲೆಗಳನ್ನು ತೋರಿಸು ಎಂದ ಪುಷ್ಪಾ ಅವರು ಕೇಳಿದ್ದಾರೆ. ಈ ವೇಳೆ ಇಬ್ಬರ ನಡುವೆ ವಾಗ್ವಾದ ನಡೆದಿದೆ. ಇದನ್ನೂ ಓದಿ:

ಮೊದಲು ದಾಖಲೆಗಳನ್ನು ಕೊಡು ಎಂದು ಪುಷ್ಪಾ ಅವರು ಪ್ರಶ್ನಿಸಿದ್ದಾರೆ. ಸೆಲೆಬ್ರಿಟಿ ನನ್ನ ಮಗ, ನಾನಲ್ಲ. ನಾನು ಇಲ್ಲಿ ಹುಟ್ಟಿ ಬೆಳೆದವಳು. ಸೈಟ್ ಒಳಗೆ ಕಾಲಿಡಬೇಡ ಎಂದ ಪುಷ್ಪಾ ಏರುದನಿಯಲ್ಲಿ ಮಾತನಾಡಿದ್ದಾರೆ. ನೀವು ಈ ರೀತಿ ಮಾತನಾಡಬಾರದು ಎಂದ ದೇವರಾಜು ಹೇಳಿದ್ದಾರೆ.

ರೌಡಿಗಳನ್ನು ಕರೆದುಕೊಂಡು ರೌಡಿಸಂ ಮಾಡ್ತೀಯಾ. ನಾನು ಎಸ್ಪಿಗೆ ದೂರು ಕೊಡ್ತೀನಿ. ಇನ್ಮುಂದೆ ಇಲ್ಲಿಗೆ ಕಾಲಿಟ್ಟರೆ ಸುಮ್ಮನ್ನಿರಲ್ಲ ಎಂದು ಯಶ್‌ ತಾಯಿ ಎಚ್ಚರಿಕೆ ಕೊಟ್ಟಿದ್ದಾರೆ. ಅಕ್ರಮ ಕಾಂಪೌಂಡ್ ನಿರ್ಮಾಣ ಆರೋಪ ಪ್ರಕರಣದಲ್ಲಿ ನಟ ಯಶ್ ತಾಯಿ ಪುಷ್ಪಾ ಅವರಿಗೆ ಕೋರ್ಟ್ ಶಾಕ್ ಕೊಟ್ಟಿತ್ತು. ಬೇರೆಯವರ ಜಾಗದಲ್ಲಿ ನಿರ್ಮಿಸಿದ್ದಾರೆ ಎನ್ನಲಾದ ಕಾಂಪೌಂಡ್‌ನ್ನು ಧ್ವಂಸಗೊಳಿಸಲಾಗಿತ್ತು. ಹಾಸನ (Hassan) ನಗರದ ವಿದ್ಯಾನಗರದಲ್ಲಿ ಪುಷ್ಪಾ ಅವರ ಮನೆ ಇದೆ. ಇವರು ನಿರ್ಮಿಸಿದ್ದ ಕಾಂಪೌಂಡ್‌ನ್ನು ಮೂಲ ಮಾಲೀಕ ಧ್ವಂಸಗೊಳಿಸಿದ್ದರು. ಜೆಸಿಬಿ ಮೂಲಕ ಕಾಂಪೌಂಡ್ ನೆಲಸಮಗೊಳಿಸಿದ್ದರು. 1,500 ಅಡಿ ಜಾಗವನ್ನು ಒತ್ತುವರಿ ಮಾಡಿದ ಆರೋಪ ಇವರ ಮೇಲಿತ್ತು. ಕೋರ್ಟ್ ಅನುಮತಿಯ ಮೇರೆಗೆ ಕಾಂಪೌಂಡ್ ತೆರವುಗೊಳಿಸಲಾಗಿತ್ತು.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ – KPSC ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ಆರೋಪ – ಕಾಸು ಕೊಟ್ರೆ ತಪಾಸಣೆಯೆ ಇಲ್ವಂತೆ!ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ ಬಂಧನಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಇರ್ಫಾನ್ ಅರೆಸ್ಟ್‌ಬೆಂಗಳೂರಿನಲ್ಲಿ ಮತ್ತೆ ತ್ರಿವಳಿ ಕೊಲೆ – ತಾಯಿ, ಅಜ್ಜಿ, ಮಾವನನ್ನು ಕೊಂದು ಪರಾರಿಯಾಗಬೇಕಿದ್ದವ ಸೂಸೈಡ್‌ಪ್ರಶಾಂತ್ ಕಿಶೋರ್ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಯನ್ನು ಬಿಜೆಪಿ ದಿಢೀರ್‌ ಬದಲಾಯಿಸಿದ್ದು ಯಾಕೆ?ತೆಲಂಗಾಣದಲ್ಲಿ ಪೋಕ್ಸೋ ಆರೋಪಿಯಿಂದ ಮಾರಣಹೋಮ – ಪತ್ನಿ, ಮಕ್ಕಳು, ಸಂತ್ರಸ್ತೆ ಸೇರಿ 6 ಜನರ ಬರ್ಬರ ಹತ್ಯೆಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ – ಚಿಕ್ಕೋಡಿ ವ್ಯಾಪ್ತಿಯ 3 ಪ್ರಮುಖ ಸೇತುವೆಗಳು ಸಂಚಾರಕ್ಕೆ ಮುಕ್ತ