LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರೇಯಸಿ ಆತ್ಮಹತ್ಯೆ ಬೆನ್ನಲ್ಲೇ ನೇಣಿಗೆ ಕೊರಳೊಡ್ಡಿದ ಪ್ರಿಯಕರ

Advertisement
Advertisement
Advertisement

ಧಾರವಾಡ: ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ಸುದ್ದಿ ತಿಳಿದು ಪ್ರಿಯಕರ ಸಹ ನೇಣಿಗೆ ಶರಣಾದ ಘಟನೆ ದಾನೇಶ್ವರಿ ನಗರದ ಪಿಜಿ ಯೊಂದರಲ್ಲಿ ನಡೆದಿದೆ.

ಧಾರವಾಡ  ತಾಲೂಕಿನ ಕೋಟಬಾಗಿ ಗ್ರಾಮದ ತರುಣ್ ಸಾಗರ್ ಕುರಕುರಿ (21) ಆತ್ಮಹತ್ಯೆಗೆ ಶರಣಾದ ಯುವಕ. ಈತ ನಗರದ ವಾಚ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ. ಆ.12 ರಂದು ಈತನ ಪ್ರೇಯಸಿ ಮೇಘಾ ಗುಬ್ಬನ್ನವರ್ (20) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಳು.

ಮನೆಯಲ್ಲಿ ಹೆಚ್ಚು ಮೊಬೈಲ್ ಬಳಸುತ್ತಿದ್ದೀಯ ಎಂದು ಬೈದಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡಿದ್ದಳು ಎನ್ನಲಾಗಿದೆ. ಈಕೆಯ ಆತ್ಮಹತ್ಯೆ ಸುದ್ದಿ ಕೇಳಿ ಸ್ನೇಹಿತನ ರೂಮ್‌ನಲ್ಲಿ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ.

ತರುಣ್, ಗೆಳೆಯನ ರೂಮ್‌ನಲ್ಲಿ ಬಂದು ತಂಗಿದ್ದ‌. ಕಳೆದ ರಾತ್ರಿ ಗೆಳೆಯನ ಮುಂದೆ ಹುಡುಗಿ ಜೊತೆ ಜಗಳವಾಗಿದೆ, ಆಕೆಯ ಸಹೋದರನಿಗೆ ಈ ವಿಷಯ ಗೊತ್ತಾಗಿದೆ ಎಂದು ಹೇಳಿದ್ದ ಎನ್ನಲಾಗಿದೆ.

ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಮೇಘಾ ಹಾಗೂ ತರುಣ್ ಮಧ್ಯೆ ಪ್ರೇಮ ಕಹಾನಿ ಇತ್ತು ಎಂಬುದು ಇದೀಗ ಗೊತ್ತಾಗಿದೆ. ಈ‌ ಬಗ್ಗೆ ತರಣ್ ಸಾಗರ್ ಪೋಷಕರಿಗೆ ಕೇಳಿದರೆ ಪ್ರೇಮದ‌ ಬಗ್ಗೆ ಗೊತ್ತಿರಲಿಲ್ಲ. ಬೆಳಗ್ಗೆ ಫೋನ್‌ ಎತ್ತದೇ ಇದ್ದಾಗ ಹುಡುಕಾಟ ನಡೆಸಿದಾಗ, ಪ್ರಕರಣ ಬೆಳಕಿಗೆ ಬಂದಿದೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ವಿದ್ಯಾಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮಂಡ್ಯದಲ್ಲಿ ಭಿಕ್ಷುಕಿ ನಿಧನ – ಮೃತಳ ಮನೆಯಲ್ಲಿ ಮೂಟೆಗಟ್ಟಲೆ ಹಣ ಪತ್ತೆಎಸ್‌ಐಆರ್‌ನಲ್ಲಿ ಮ್ಯಾಪಿಂಗ್ ಆಗದೇ ಇರುವವರಿಗೆ ಜಾರಿಯಾಗಲಿದೆ ನೋಟಿಸ್ಹಳೆಯಂಗಡಿಯಲ್ಲಿ ಪಾಳುಬಿದ್ದ ಬಸ್ ತಂಗುದಾಣಕ್ಕೆ ‘ಮೀಡಿಯಾ ಮನಸುಗಳು’ ತಂಡದಿಂದ ಕಾಯಕಲ್ಪಕಾಲು ಜಾರಿ ಹಳಿ ಮೇಲೆ ಬಿದ್ದ ವ್ಯಕ್ತಿ; ರೈಲು ಹರಿದು ಸ್ಥಳದಲ್ಲೇ ಸಾವುಪಾಗಲ್‌ ಪ್ರೇಮಿಯಿಂದ ಟಾರ್ಚರ್‌ – ಕೆರೆಗೆ ಹಾರಿ ಸಾಗರದ ಯುವತಿ ಆತ್ಮಹತ್ಯೆರಾಜ್ಯದಲ್ಲಿ ಹಂದಿ ಜ್ವರ ಪ್ರಕರಣಗಳ ಸಂಖ್ಯೆ ಹೆಚ್ಚಳ – 4,125 ಕೇಸ್ ದಾಖಲು; ಆರೋಗ್ಯ ಇಲಾಖೆ ಅಲರ್ಟ್ಪುತ್ತೂರಿನಲ್ಲಿ ಕಳೆದ ಕೆಲವು ತಿಂಗಳಿಂದ ತಾಲಿಬಾನ್‌ ಸಂಸ್ಕೃತಿ ಇದೆ: ನಳಿನ್ ಕುಮಾರ್ ಕಟೀಲ್ಹನುಮಾನ್ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆ ತಂದವನ ವಿರುದ್ಧ ಪ್ರಕರಣ ದಾಖಲಿಸಿ, ಗಡಿಪಾರು ಮಾಡಬೇಕು: ಬೊಮ್ಮಾಯಿಕಾಂಗ್ರೆಸ್‌ನದ್ದು ಸೂಟ್‌ಕೇಸ್ ಬೃಂದಾವನ, ರಾಜ್ಯದ ಇತಿಹಾಸದಲ್ಲೇ ನೈಸ್ ಹಗರಣ ಬಹುದೊಡ್ಡ ಅಕ್ರಮ: ಹೆಚ್‌ಡಿಕೆಮಂಗಳೂರಲ್ಲಿ ಮೀನುಗಾರಿಕಾ ಬೋಟ್‌ ಮುಳುಗಡೆ – 6 ಮೀನುಗಾರರ ರಕ್ಷಣೆ