LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಬೆಂಗಳೂರು ನಗರವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ: ಪರೋಕ್ಷವಾಗಿ ಖಾತೆ ಬಿಟ್ಟುಕೊಡಲ್ಲ ಎಂದ ಕೃಷ್ಣಬೈರೇಗೌಡ

Advertisement
Advertisement

ಬೆಂಗಳೂರು: ಸಚಿವ ಸಂಪುಟ ಪುನರ್‌ರಚನೆ ಬಳಿಕ ಬೆಂಗಳೂರು ಅಭಿವೃದ್ಧಿ ಖಾತೆ ಪಡೆದಿರುವ ಸಚಿವ ಕೃಷ್ಣ ಬೈರೇಗೌಡ  ಈ ಜವಾಬ್ದಾರಿ ಸುಲಭವಾಗಿಲ್ಲ ಎಂದು ಹೇಳಿದ್ದಾರೆ. ಬೆಂಗಳೂರಿನ ಜನರ ಜೀವನಮಟ್ಟ ಸುಧಾರಿಸುವುದೇ ತಮ್ಮ ಮೊದಲ ಗುರಿ ಎಂದು ತಿಳಿಸಿದ್ದಾರೆ.

ಖಾತೆ ಹಂಚಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ತಾವು ಕಂದಾಯ ಇಲಾಖೆಯಲ್ಲಿ ಆರಂಭಿಸಿರುವ ಕೆಲಸಗಳನ್ನು ಪೂರ್ಣಗೊಳಿಸಲು ಅವಕಾಶ ನೀಡುವಂತೆ ಮನವಿ ಮಾಡಿದ್ದೆ. ಆದರೆ ಪಕ್ಷದ ನಾಯಕತ್ವ ಬೆಂಗಳೂರು ಅಭಿವೃದ್ಧಿ ಖಾತೆ ನೀಡಿದೆ ಎಂದು ಹೇಳಿದರು. 

ಬೆಂಗಳೂರು ಅಭಿವೃದ್ಧಿ ಇಲಾಖೆ ದೊಡ್ಡ ಸವಾಲಿನ ಜವಾಬ್ದಾರಿ. ನಗರ ಹಲವು ಜಟಿಲ ಸಮಸ್ಯೆಗಳನ್ನು ಎದುರಿಸುತ್ತಿದೆ. ಎಲ್ಲ ಸಮಸ್ಯೆಗಳನ್ನು ಪರಿಹರಿಸುತ್ತೇವೆ ಎಂದು ಈಗಲೇ ಭರವಸೆ ನೀಡಲು ಸಾಧ್ಯವಿಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಉಪ ಮುಖ್ಯಮಂತ್ರಿಯಾಗಿದ್ದಾಗ ಡಿ.ಕೆ.ಶಿವಕುಮಾರ್ ಅವರು ಬೆಂಗಳೂರು ಅಭಿವೃದ್ಧಿಗೆ ಹಲವು ಮಹತ್ವಾಕಾಂಕ್ಷಿ ಯೋಜನೆಗಳಿಗೆ ಅಡಿಪಾಯ ಹಾಕಿದ್ದಾರೆ. ಟನಲ್ ರಸ್ತೆ, ಎಲಿವೇಟೆಡ್ ಕಾರಿಡಾರ್ ಸೇರಿದಂತೆ ಹಲವು ಯೋಜನೆಗಳ ಕೆಲಸ ಆರಂಭಿಸಿದ್ದಾರೆ. ಕೆಲವೊಂದು ಕೆಲಸಗಳನ್ನು ಡಿ.ಕೆ. ಶಿವಕುಮಾರ್ ಅವರಿಂದ ಮಾತ್ರ ಮುನ್ನಡೆಸಲು ಸಾಧ್ಯವಾಗಿದೆ ಎಂದು ಕೃಷ್ಣ ಬೈರೇಗೌಡ ಮೆಚ್ಚುಗೆ ವ್ಯಕ್ತಪಡಿಸಿದರು.

ಬೆಂಗಳೂರು ನಗರದ ಕಸ ನಿರ್ವಹಣೆ, ಟ್ರಾಫಿಕ್ ಸಮಸ್ಯೆ ಹಾಗೂ ಖಾತೆ ಸಮಸ್ಯೆಗಳಂತಹ ದಿನನಿತ್ಯದ ಸಮಸ್ಯೆಗಳ ಕಡೆ ಹೆಚ್ಚು ಗಮನ ಹರಿಸಲಾಗುವುದು ಎಂದು ಹೇಳಿದರು. ಬೆಂಗಳೂರು ಬಹಳಷ್ಟು ಹದಗೆಟ್ಟಿದೆ. ಎಲ್ಲವನ್ನೂ ಒಂದೇ ರಾತ್ರಿ ಸರಿಪಡಿಸಲು ಸಾಧ್ಯವಿಲ್ಲ. ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಜನರೂ ಸರ್ಕಾರಕ್ಕೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು. 

ಬೆಂಗಳೂರು ರಾಜ್ಯದ ಆರ್ಥಿಕ ಶಕ್ತಿ ಕೇಂದ್ರ. ಚಿನ್ನದ ಮೊಟ್ಟೆ ಇಡುವ ಕೋಳಿಯಂತೆ ಈ ನಗರವನ್ನು ಮತ್ತಷ್ಟು ಬಲಪಡಿಸುವ ಅಗತ್ಯವಿದೆ. ಅಭಿವೃದ್ಧಿ ಯೋಜನೆಗಳ ಜೊತೆಗೆ ಜನರ ದೈನಂದಿನ ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳುವುದು ನಮ್ಮ ಗುರಿ ಎಂದು ಕೃಷ್ಣ ಬೈರೇಗೌಡ ಹೇಳಿದರು. ಇದೇ ವೇಳೆ ಬೆಂಗಳೂರು ಅಭಿವೃದ್ದಿ ಇಲಾಖೆ ನೀಡದ ಕಾರಣ ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡಿರುವ ಬಗ್ಗೆ ಪ್ರಶ್ನಿಸಿದಾಗ ಕೃಷ್ಣ ಬೈರೇಗೌಡ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ – KPSC ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ಆರೋಪ – ಕಾಸು ಕೊಟ್ರೆ ತಪಾಸಣೆಯೆ ಇಲ್ವಂತೆ!ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ ಬಂಧನಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಇರ್ಫಾನ್ ಅರೆಸ್ಟ್‌ಬೆಂಗಳೂರಿನಲ್ಲಿ ಮತ್ತೆ ತ್ರಿವಳಿ ಕೊಲೆ – ತಾಯಿ, ಅಜ್ಜಿ, ಮಾವನನ್ನು ಕೊಂದು ಪರಾರಿಯಾಗಬೇಕಿದ್ದವ ಸೂಸೈಡ್‌ಪ್ರಶಾಂತ್ ಕಿಶೋರ್ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಯನ್ನು ಬಿಜೆಪಿ ದಿಢೀರ್‌ ಬದಲಾಯಿಸಿದ್ದು ಯಾಕೆ?ತೆಲಂಗಾಣದಲ್ಲಿ ಪೋಕ್ಸೋ ಆರೋಪಿಯಿಂದ ಮಾರಣಹೋಮ – ಪತ್ನಿ, ಮಕ್ಕಳು, ಸಂತ್ರಸ್ತೆ ಸೇರಿ 6 ಜನರ ಬರ್ಬರ ಹತ್ಯೆಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ – ಚಿಕ್ಕೋಡಿ ವ್ಯಾಪ್ತಿಯ 3 ಪ್ರಮುಖ ಸೇತುವೆಗಳು ಸಂಚಾರಕ್ಕೆ ಮುಕ್ತ