LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕ ಸಹಕಾರ ಮಹಾ ಮಂಡಲದ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಆಯ್ಕೆ

Advertisement
Advertisement
Advertisement

ಬೆಂಗಳೂರು: ಕರ್ನಾಟಕ ಸಹಕಾರ ಮಹಾ ಮಂಡಲ  ಚುನಾವಣೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ನೇತೃತ್ವದ ತಂಡ ಗೆಲುವು ಸಾಧಿಸಿದ್ದು, ಅಧ್ಯಕ್ಷರಾಗಿ ಜಿ.ಟಿ ದೇವೇಗೌಡ  ಆಯ್ಕೆಯಾಗಿದ್ದಾರೆ.

ಜಿ.ಟಿ. ದೇವೇಗೌಡ ಅವರಿಗೆ ಅಧ್ಯಕ್ಷ ಸ್ಥಾನ ನೀಡುವ ವಿಚಾರಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಕೂಡ ಒಪ್ಪಿಗೆ ನೀಡಿದ್ದಾರೆ. ಚುನಾವಣೆಗೂ ಮುನ್ನ ಮುಖ್ಯಮಂತ್ರಿ ನಿವಾಸದಲ್ಲಿ ಈ ಸಂಬಂಧ ಮಹತ್ವದ ಸಭೆ ನಡೆದಿತ್ತು. ಸಭೆಯಲ್ಲಿ ಸಹಕಾರ ಸಚಿವ ಕೆ.ಎನ್. ರಾಜಣ್ಣ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು. ಜಿ.ಟಿ. ದೇವೇಗೌಡ ಅವರ ಆಯ್ಕೆಗೆ ಸಿಎಂ ಡಿಕೆಶಿ ಸಹಮತ ವ್ಯಕ್ತಪಡಿಸಿದ್ದರು. 

ಇದೀಗ ಸಹಕಾರ ಮಹಾ ಮಂಡಲದ ಅಧ್ಯಕ್ಷ ಸ್ಥಾನ ಜಿ.ಟಿ. ದೇವೇಗೌಡ ಅವರಿಗೆ ಒಲಿದಿರುವುದು ರಾಜ್ಯ ರಾಜಕೀಯದಲ್ಲಿ ಹಲವು ಚರ್ಚೆಗಳಿಗೆ ಕಾರಣವಾಗಿದೆ. ಜೆಡಿಎಸ್‌ನಿಂದ ಇತ್ತೀಚಿನ ದಿನಗಳಲ್ಲಿ ಅಂತರ ಕಾಯ್ದುಕೊಂಡಿರುವ ಜಿ.ಟಿ. ದೇವೇಗೌಡ ಅವರು ಕಾಂಗ್ರೆಸ್‌ನತ್ತ ಮುಖ ಮಾಡಲಿದ್ದಾರೆಯೇ ಎಂಬ ಪ್ರಶ್ನೆಯೂ ಮುನ್ನೆಲೆಗೆ ಬಂದಿದೆ. 

ಇದೀಗ ಜಿಟಿ ದೇವೇಗೌಡರನ್ನು ಆಯ್ಕೆ ಮಾಡಿ ಡಿಕೆಶಿ ರಾಜಕೀಯ ಚೆಕ್‌ಮೆಟ್ ಕೊಟ್ಟಿದ್ದಾರೆ. ಅಧ್ಯಕ್ಷ ಸ್ಥಾನ ಮೂಲಕ ಕಾಂಗ್ರೆಸ್ ಕಡೆ ಜಿಟಿಡಿ ಮುಖ ಮಾಡ್ತಾರಾ ಎಂಬ ಚರ್ಚೆ ಶುರುವಾಗಿದೆ. ಮುಂದಿನ ಚುನಾವಣೆಗೆ ಕಾಂಗ್ರೆಸ್ ಸೇರ್ಪಡೆ ಆಗ್ತಾರಾ ಎಂಬ ಚರ್ಚೆ ಇದೀಗ ರಾಜಕೀಯ ವಲಯದಲ್ಲಿ ಜೋರಾಗಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಾಂಗ್ರೆಸ್ ಮದ ಇಳಿಸುವ ಶಕ್ತಿ ಬಿಜೆಪಿಗಿದೆ – ಗುಡುಗಿದ ವಿಜಯೇಂದ್ರಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ: ಖಾದರ್‌ ಸ್ಫೋಟಕ ಹೇಳಿಕೆವಿಶ್ವವಿಖ್ಯಾತ ಮೈಸೂರು ದಸರಾ ಮೊದಲ ಹಂತದ ಗಜಪಯಣಕ್ಕೆ ಚಾಲನೆವಿಜಯಪುರ | ಭೂತನಾಳ ಕೆರೆಯಲ್ಲಿ 6 ಶವ ಪತ್ತೆ – ಕೌಟುಂಬಿಕ ಕಲಹಕ್ಕೆ ಆತ್ಮಹತ್ಯೆ ಶಂಕೆಸಾಮಾಜಿಕ ಜಾಲತಾಣಗಳ ಮೇಲೆ ಖಾಕಿ ಕಣ್ಣು, ಸುಳ್ಳು ಸುದ್ದಿ ಹಬ್ಬಿಸಿದ್ರೆ ಕಠಿಣ ಕ್ರಮ: ಚಾ.ನಗರ ಎಸ್‌ಪಿ ಎಚ್ಚರಿಕೆಪತ್ನಿ ಫೋಟೋ ಸ್ಟೇಟಸ್‌ಗೆ, ಅನೈತಿಕ ಸಂಬಂಧ ಶಂಕೆ – ಕುಡುಗೋಲಿನಿಂದ ಕೊಚ್ಚಿ ವ್ಯಕ್ತಿಯ ಹತ್ಯೆಗೈದ ದಂಪತಿಕರ್ನಾಟಕ ಸಹಕಾರ ಮಹಾ ಮಂಡಲದ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡ ಆಯ್ಕೆSIR ಆಕ್ಷೇಪಣೆ ಅವಧಿ ವಿಸ್ತರಣೆಗೆ ಡಿಕೆ ಮನವಿ – ಕೇಂದ್ರ ಚುನಾವಣಾ ಆಯೋಗಕ್ಕೆ 2 ಪುಟಗಳ ಪತ್ರರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ: ಗೋವಿಂದ ಕಾರಜೋಳರೇಷ್ಮೆ ಉತ್ಪಾದನೆಯಲ್ಲಿ ಭಾರತ ಅಗ್ರಸ್ಥಾನಕ್ಕೇರಲಿ: ಗೋವಿಂದ ಕಾರಜೋಳ