LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅಸಮಾಧಾನಗೊಂಡಿದ್ದೇನೆ, ಕೊಟ್ಟ ಮಾತು ತಪ್ಪಿದ್ದಕ್ಕೆ ಮಂತ್ರಿ ಸ್ಥಾನಕ್ಕೆ ರಾಜೀನಾಮೆ – ಡಿಕೆಶಿಗೆ ರಾಮಲಿಂಗಾರೆಡ್ಡಿ ಶಾಕ್‌

Advertisement
Advertisement

ಬೆಂಗಳೂರು: ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಅಧಿಕಾರ ವಹಿಸಿಕೊಂಡ ಕೇವಲ ಎರಡೇ ದಿನಕ್ಕೆ ಸರ್ಕಾರಕ್ಕೆ ಬಂಡಾಯದ ಬಿಸಿ ತಟ್ಟಿದೆ. ತಮಗೆ ಇಷ್ಟವಿಲ್ಲದ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದಕ್ಕೆ ತೀವ್ರ ಆಕ್ರೋಶ ಹೊರಹಾಕಿರುವ ಹಿರಿಯ ನಾಯಕ ರಾಮಲಿಂಗಾರೆಡ್ಡಿ  ಅವರು ಕೋರಮಂಗಲದ ತಮ್ಮ ಕಚೇರಿಯಲ್ಲಿ ಕಾರ್ಯಕರ್ತರ ಮುಂದುಗಡೆ ಸಚಿವ ಸ್ಥಾನಕ್ಕೆ ಅಧಿಕೃತವಾಗಿ ರಾಜೀನಾಮೆ ಘೋಷಿಸಿದ್ದಾರೆ.

ಯಾರ ಮನವೊಲಿಕೆಗೂ ಬಗ್ಗದ ರೆಡ್ಡಿ, “ನನ್ನ ನಿರ್ಧಾರ ಅಚಲ, ಯಾರನ್ನೂ ಭೇಟಿಯಾಗುವ ಪ್ರಶ್ನೆಯೇ ಇಲ್ಲ” ಎಂದು ಹಠ ಹಿಡಿದಿರುವುದು ಡಿಕೆಶಿ ಪಾಲಿಗೆ ಆರಂಭದಲ್ಲೇ ಅತಿ ದೊಡ್ಡ ತಲೆನೋವಾಗಿ ಪರಿಣಮಿಸಿದೆ.

ರಾಮಲಿಂಗಾರೆಡ್ಡಿ ಅವರು ಕೇವಲ ಖಾತೆಗಾಗಿ ರಾಜೀನಾಮೆ ನೀಡುತ್ತಿಲ್ಲ, ಬದಲಿಗೆ ತಮಗೆ ಕೊಟ್ಟ ಮಾತು ತಪ್ಪಿದ್ದಕ್ಕಾಗಿ ಈ ನಿರ್ಧಾರಕ್ಕೆ ಬಂದಿದ್ದಾರೆ. ನಾನು ನನ್ನ ಆತ್ಮಸಾಕ್ಷಿಗೆ ವಿರುದ್ಧವಾಗಿ ಕೆಲಸ ಮಾಡಲು ಸಾಧ್ಯವಾಗದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

2023ರಲ್ಲಿ ಸಿದ್ದರಾಮಯ್ಯ ಸಂಪುಟ ರಚನೆ ವೇಳೆ ನನಗೆ ಬೆಂಗಳೂರು ನಗರಾಭಿವೃದ್ಧಿ ಖಾತೆ ನೀಡುವುದಾಗಿ ಡಿಕೆಶಿ ಹಾಗೂ ಭೈರತಿ ಸುರೇಶ್ ಭರವಸೆ ನೀಡಿದ್ದರು. ಆದರೆ ಸಾರಿಗೆ ಖಾತೆ ನೀಡಲಾಯಿತು. ಆಗ ನಾನು ಬೇಸರಗೊಂಡಾಗ, ಮುಂದೆ ತಾವೇ ಸಿಎಂ ಆದಾಗ ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನೇ ಕೊಡುವುದಾಗಿ ಡಿಕೆಶಿ ನನ್ನ ಕೋರಮಂಗಲದ ನಿವಾಸಕ್ಕೆ ಬಂತು ಮಾತು ಕೊಟ್ಟಿದ್ದರು. ಆದರೆ ಈಗ ಸಿಎಂ ಆದ ಬೆನ್ನಲ್ಲೇ ಜಲಸಂಪನ್ಮೂಲ ಖಾತೆ ನೀಡಿದ್ದಾರೆ. ಇದಕ್ಕೆ ನನ್ನ ಮನಸ್ಸು ಒಪ್ಪುತ್ತಿಲ್ಲಎಂದು ರೆಡ್ಡಿ ತೀವ್ರ ಬೇಸರ ಹೊರಹಾಕಿದ್ದಾರೆ.

ಕೋರಮಂಗಲದ ಕಚೇರಿಯಲ್ಲಿ ಮಾಧ್ಯಮಗಳ ಮುಂದೆಯೇ ರಾಜೀನಾಮೆ ಪತ್ರ ಸಿದ್ಧಪಡಿಸುವ ವೇಳೆ ಹೈಡ್ರಾಮಾ ನಡೆಯಿತು. ಯೂತ್ ಕಾಂಗ್ರೆಸ್ ನಾಯಕ ಮನೋಹರ್ ಅವರು, “ಅಧ್ಯಕ್ಷರು (ಡಿಕೆ ಶಿವಕುಮಾರ್) ಮಾತನಾಡುತ್ತಾರೆ, ದಯವಿಟ್ಟು ದುಡುಕಬೇಡಿ” ಎಂದು ಮನವೊಲಿಸಲು ಯತ್ನಿಸಿದಾಗ ರಾಮಲಿಂಗಾರೆಡ್ಡಿ ತೀವ್ರ ಆಕ್ರೋಶಗೊಂಡರು. ‌ 

“ಮನೋಹರ್ ನನಗೆ ಕೋಪ ಬರಿಸಬೇಡಿ, ನನ್ನ ನಿರ್ಧಾರ ಮುಗಿದ ಕಥೆ. ನೀವು ಮೊದಲು ಹೊರಗೆ ಹೋಗಿ, ನಾನು ಮಾತನಾಡಬೇಕು” ಎಂದು ಗದರಿದ್ದಾರೆ. ಅಲ್ಲದೆ, “ನನ್ನ ಮಗಳು ಅಥವಾ ಕುಟುಂಬದವರ ಬಳಿಯೂ ನಾನು ಈ ಬಗ್ಗೆ ಚರ್ಚಿಸಿಲ್ಲ. 1973 ರಲ್ಲಿ ವಿದ್ಯಾರ್ಥಿ ನಾಯಕನಾಗಿ ರಾಜಕೀಯಕ್ಕೆ ಬಂದು 53 ವರ್ಷಗಳಿಂದ ಪಕ್ಷದಲ್ಲಿದ್ದೇನೆ. 9 ಬಾರಿ ಶಾಸಕನಾಗಿದ್ದೇನೆ. ನಾನಾಗಿಯೇ ಯಾರ ಬಳಿಗೂ ಹೋಗಿ ರಾಜೀನಾಮೆ ಪತ್ರ ಕೊಡುವುದಿಲ್ಲ, ಇಲ್ಲಿಂದಲೇ ಘೋಷಿಸುತ್ತಿದ್ದೇನೆ” ಎಂದು ಖಡಕ್‌ ಆಗಿ ಹೇಳಿದ ಪ್ರಸಂಗ ನಡೆಯಿತು.
 
ಹಿರಿಯ ನಾಯಕನೇ ಹೀಗೆ ಬಹಿರಂಗವಾಗಿ ಬಂಡಾಯದ ಬಾವುಟ ಹಾರಿಸಿರುವುದು ಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ದೊಡ್ಡ ಹಿನ್ನಡೆಯಾಗಿದೆ. ಆರಂಭದಲ್ಲೇ ಆಪ್ತ ವಲಯದ ಈ ಅಸಮಾಧಾನ ಇತರ ಸಚಿವರಿಗೂ ಹರಡಿದರೆ ಸರ್ಕಾರದ ಮೇಲೆ ಹಿಡಿತ ಸಾಧಿಸುವುದು ಕಷ್ಟವಾಗಬಹುದು ಎಂಬ ಆತಂಕ ಹೈಕಮಾಂಡ್ ಅನ್ನು ಕಾಡಲಾರಂಭಿಸಿದೆ. ವರಿಷ್ಠರು ಸಚಿವ ರಾಮಲಿಂಗಾರೆಡ್ಡಿ ಅವರನ್ನು ಹೇಗೆ ತಣ್ಣಗಾಗಿಸುತ್ತಾರೆ ಎಂಬುದನ್ನು ಕಾದುನೋಡಬೇಕಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ – KPSC ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ಆರೋಪ – ಕಾಸು ಕೊಟ್ರೆ ತಪಾಸಣೆಯೆ ಇಲ್ವಂತೆ!ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ ಬಂಧನಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಇರ್ಫಾನ್ ಅರೆಸ್ಟ್‌ಬೆಂಗಳೂರಿನಲ್ಲಿ ಮತ್ತೆ ತ್ರಿವಳಿ ಕೊಲೆ – ತಾಯಿ, ಅಜ್ಜಿ, ಮಾವನನ್ನು ಕೊಂದು ಪರಾರಿಯಾಗಬೇಕಿದ್ದವ ಸೂಸೈಡ್‌ಪ್ರಶಾಂತ್ ಕಿಶೋರ್ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಯನ್ನು ಬಿಜೆಪಿ ದಿಢೀರ್‌ ಬದಲಾಯಿಸಿದ್ದು ಯಾಕೆ?ತೆಲಂಗಾಣದಲ್ಲಿ ಪೋಕ್ಸೋ ಆರೋಪಿಯಿಂದ ಮಾರಣಹೋಮ – ಪತ್ನಿ, ಮಕ್ಕಳು, ಸಂತ್ರಸ್ತೆ ಸೇರಿ 6 ಜನರ ಬರ್ಬರ ಹತ್ಯೆಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ – ಚಿಕ್ಕೋಡಿ ವ್ಯಾಪ್ತಿಯ 3 ಪ್ರಮುಖ ಸೇತುವೆಗಳು ಸಂಚಾರಕ್ಕೆ ಮುಕ್ತ