LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

10 ನಿಮಿಷದಲ್ಲಿ ಹೀಗೆ ಮೋದಕ ತಯಾರಿಸಿ!

Advertisement
Advertisement
ಗಣೇಶನಿಗೆ ಪ್ರಿಯವಾದ ತಿನಿಸುಗಳಲ್ಲಿ ಮೋದಕವು ಒಂದು. ಸುಲಭವಾಗಿ ಮೋದಕವನ್ನು ಮಾಡಬಹುದು ಎಂಬುದು ಬಹುತೇಕರಿಗೆ ತಿಳಿದಿಲ್ಲ. ಬರೀ 10 ನಿಮಿಷದಲ್ಲಿ ಮೋದಕವನ್ನು ತಯಾರಿಸುವ ಬಗೆ ಇಲ್ಲಿದೆ.

ಮೊದಲಿಗೆ ಒಂದು ಬೌಲ್​ ತೆಗೆದುಕೊಂಡು ಅದಕ್ಕೆ ಒಂದು ಕಪ್​ ಮೈದಾ ಹಿಟ್ಟು, ಒಂದು ಕಪ್​ ಗೋದಿ ಹಿಟ್ಟು, ರುಚಿಗೆ ತಕ್ಕ ಉಪ್ಪು, ಸಕ್ಕರೆ ಸೇರಿಸಿ. ಬಳಿಕ 2 ಚಮಚ ತುಪ್ಪವನ್ನು ಬಿಸಿ ಮಾಡಿ ಅದಕ್ಕೆ ಸೇರಿಸಿ. ಬಳಿಕ ಚೆನ್ನಾಗಿ ಮಿಶ್ರಣ ಮಾಡಿ. ದನದ ತುಪ್ಪದ ಬದಲು ಎಣ್ಣೆಯನ್ನು ಬಳಸಬಹುದಾಗಿದೆ.

2 ರಿಂದ ಮೂರು ನಿಮಿಷ ಚೆನ್ನಾಗಿ ಮಿಶ್ರಣ ಮಾಡಿ. ಬಳಿಕ ಕೊಂಚ ನೀರು ಸೇರಿಸುತ್ತಾ ಉಂಡೆ ಕಟ್ಟಲು ಆಗುವಂತೆ ಮಿಶ್ರಣ ಮಾಡಬೇಕು. ಬರಿ ಗೋಧಿ ಹಿಟ್ಟಿನಲ್ಲೂ ಮೋದಕ ತಯಾರಿಸಬಹುದಾಗಿದೆ. ಒಂದು ವೇಳೆ ಹಿಟ್ಟು ಕೈಯಲ್ಲಿ ಅಂಟಿಕೊಂಡರೆ ಕೈಗೆ ತೆಂಗಿನ ಎಣ್ಣೆ ಸವರಿ ಸರಿಯಾಗಿ ಮಿಶ್ರಣ ಮಾಡಿ. ಬಳಿಕ 14 ರಿಂದ 15 ನಿಮಿಷ ಹಾಗೆಯೇ ಬಿಡಿ.

ಮತ್ತೊಂದು ಬಾಣಲೆ ತೆಗೆದುಕೊಂಡು ಹೂರ್ಣ ತಯಾರಿಸಬೇಕು. ಅದಕ್ಕಾಗಿ ಹದ ಬಿಸಿಯಲ್ಲಿರುವ ಬಾಣಲೆಗೆ ಒಂದೂವರೆ ಕಪ್​ ತೆಂಗಿನ ತುರಿ, ಒಂದು ಕಪ್​ ಚೆನ್ನಾಗಿ ಹುಡಿ ಮಾಡಿದ ಬೆಲ್ಲ ಸೇರಿಸಿ ಮಿಶ್ರಣ ಮಾಡಿ. ಬೆಂಕಿಯ ಬಿಸಿಗೆ ಬೆಲ್ಲ ಕರಗಲು ಪ್ರಾರಂಭವಾಗುತ್ತದೆ. ಬೆಲ್ಲ ಕರಗಿದ ಬಳಿಕ  ಬಾಣಲೆಯನ್ನು ಬೆಂಕಿಯಿಂದ ಕೆಳಗಿಳಿಸಿ. ಬೇಕಿದ್ದರೆ ಕೊಂಚ ಏಲಕ್ಕಿ, ಡ್ರೈ ಫ್ರುಟ್ಸ್, ತುಪ್ಪ ಸೇರಿಸಬಹುದು. ​

ಇಷ್ಟಾದ ಬಳಿಕ ಮಿಶ್ರಣ ಮಾಡಿದ ಹಿಟ್ಟನ್ನು ಕೊಂಚ ಮೈದಕ್ಕೆ ಅದ್ದಿ ಚಪಾತಿಯಂತೆ ಲಟ್ಟಿಸಬೇಕು. ಬೇಕಾದ ಗಾತ್ರಕ್ಕೆ ಹಿಟ್ಟನ್ನು ಲಟ್ಟಿಸಬಹುದು. ಬಳಿಕ ತಯಾರಿಸಿಟ್ಟ ಹೂರ್ಣವನ್ನು ಅದರ ಮಧ್ಯಕ್ಕೆ ಇಟ್ಟು ಕೈಯಲ್ಲೇ ತಿರುಗಿಸುತ್ತಾ ಸರಿಯಾದ ಆಕಾರಕ್ಕೆ ತರಬೇಕು. ಬಳಿಕ ಕುದಿಯುವ ಎಣ್ಣೆಗೆ ಅದನ್ನು ಬಿಡಬೇಕು. ಸರಿಯಾಗಿ ಬೆಂದ ಬಳಿಕ ಎಣ್ಣೆಯಿಂದ ಮೇಲೆತ್ತಬೇಕು. ಈವಾಗ ಮೋದಕ ರೆಡಿ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ – KPSC ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ಆರೋಪ – ಕಾಸು ಕೊಟ್ರೆ ತಪಾಸಣೆಯೆ ಇಲ್ವಂತೆ!ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ ಬಂಧನಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಇರ್ಫಾನ್ ಅರೆಸ್ಟ್‌ಬೆಂಗಳೂರಿನಲ್ಲಿ ಮತ್ತೆ ತ್ರಿವಳಿ ಕೊಲೆ – ತಾಯಿ, ಅಜ್ಜಿ, ಮಾವನನ್ನು ಕೊಂದು ಪರಾರಿಯಾಗಬೇಕಿದ್ದವ ಸೂಸೈಡ್‌ಪ್ರಶಾಂತ್ ಕಿಶೋರ್ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಯನ್ನು ಬಿಜೆಪಿ ದಿಢೀರ್‌ ಬದಲಾಯಿಸಿದ್ದು ಯಾಕೆ?ತೆಲಂಗಾಣದಲ್ಲಿ ಪೋಕ್ಸೋ ಆರೋಪಿಯಿಂದ ಮಾರಣಹೋಮ – ಪತ್ನಿ, ಮಕ್ಕಳು, ಸಂತ್ರಸ್ತೆ ಸೇರಿ 6 ಜನರ ಬರ್ಬರ ಹತ್ಯೆಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ – ಚಿಕ್ಕೋಡಿ ವ್ಯಾಪ್ತಿಯ 3 ಪ್ರಮುಖ ಸೇತುವೆಗಳು ಸಂಚಾರಕ್ಕೆ ಮುಕ್ತ