LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್‌ ಜೀಪ್‌ ಬೆನ್ನಟ್ಟಿದ ಪುಂಡಾನೆ – ಕೂದಲೆಳೆ ಅಂತರದಲ್ಲಿ ಪಾರಾದ ಮಹಿಳಾ ಪಿಎಸ್‌ಐ

Advertisement
Advertisement
Advertisement

ಹಾಸನ: ಕಾಡಾನೆ  ಸೆರೆ ಕಾರ್ಯಾಚರಣೆ ವೇಳೆ ಪೊಲೀಸ್  ಜೀಪನ್ನು ಒಂಟಿ ಸಲಗ ಅಟ್ಟಾಡಿಸಿದ ಘಟನೆ ಬೇಲೂರು ತಾಲೂಕಿನ ಕೋಗೋಡು ಗ್ರಾಮದ ಬೇಡಿ ಎಸ್ಟೇಟ್‌ ಬಳಿ ನಡೆದಿದೆ. ಜೀಪಿನಲ್ಲಿದ್ದ ಪಿಎಸ್‌ಐ ಶೋಭಾ ಅವರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಕಾರ್ಯಾಚರಣೆಯ ಭದ್ರತೆಗಾಗಿ ಅರೆಹಳ್ಳಿ ಪಿಎಸ್‌ಐ ಶೋಭಾ ಅವರು ಸ್ಥಳಕ್ಕೆ ತೆರಳಿದ್ದರು. ಈ ವೇಳೆ, ಕಾಡಾನೆ ರಸ್ತೆ ದಾಟುವಾಗ ಅಲ್ಲಿದ್ದ ಪಿಎಸ್‌ಐ ಜೀಪ್‌ನ್ನು ಅಟ್ಟಾಡಿಸಿದೆ. ಬಳಿಕ ಒಂದು ಕಾಫಿ ತೋಟದಿಂದ ಮತ್ತೊಂದು ಕಾಫಿ ತೋಟಕ್ಕೆ ಆನೆ ಓಡಿಹೋಗಿದೆ

ಏಳು ಸಾಕಾನೆಗಳ ನೇತೃತ್ವದಲ್ಲಿ ಕೆ.ಪಿ ಕಾಲರ್‌ 2 ಸೆರೆಗೆ ಕಾರ್ಯಾಚರಣೆ ನಡೆಯುತ್ತಿದೆ. ಮಹೇಂದ್ರ, ಅಜ್ಜಯ್ಯ, ಪ್ರಶಾಂತ್, ಧನಂಜಯ, ಏಕಲವ್ಯ, ಈಶ್ವರ, ಲಕ್ಷ್ಮಣ ಸೇರಿ ಏಳು ಆನೆಗಳು ಕಾರ್ಯಾಚರಣೆಯಲ್ಲಿ ಭಾಗಿಯಾಗಿವೆ. ಅಲ್ಲದೇ ಸುಮಾರು 300ಕ್ಕೂ ಹೆಚ್ಚು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದಾರೆ. ಆದರೆ ಕಾರ್ಯಾಚರಣೆ ತಂಡದ ಕಣ್ತಪ್ಪಿಸಿ ಕೆ.ಪಿ ಕಾಲರ್ ಓಡಾಡುತ್ತಿ‌ದೆ.

ಒಂಟಿಸಲಗ ಇರುವ ಸ್ಥಳ ಪತ್ತೆ ಹಚ್ಚಲು ಇಟಿಎಫ್ ಸಿಬ್ಬಂದಿ ತೆರಳಿದ್ದಾರೆ. ಡ್ರೋನ್ ಮೂಲಕ ಆನೆಯ ಚಲನವಲನ ವೀಕ್ಷಣೆ ಮಾಡಿ ಕಾರ್ಯಾಚರಣೆ ನಡೆಸಲಾಗುತ್ತಿದೆ. ಆನೆಗೆ ಅರವಳಿಕೆ ನೀಡಲು ಸಿಬ್ಬಂದಿ ಹರಸಾಹಸಪಡುತ್ತಿದ್ದಾರೆ. ಕಾರ್ಯಾಚರಣೆ ಗಮನಿಸಲು ಸ್ಥಳಕ್ಕೆ ಡಿಸಿ ಲತಾಕುಮಾರಿ ಆಗಮಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್ಮೃತರ ಕುಟುಂಬಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನಮೈಸೂರು ದಸರೆಗೆ ದುಬಾರೆಯ 5 ಆನೆಗಳ ಪಯಣಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ- UP ವಿದ್ಯಾರ್ಥಿನಿಯ ಅರ್ಜಿ ವಜಾಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ – 19 ದಿನದಲ್ಲಿ 2.81 ಕೋಟಿ ಕಾಣಿಕೆ ಸಂಗ್ರಹಹನೂರು ಎನ್‌ಕೌಂಟರ್‌ ಪ್ರಕರಣ ಸಿಐಡಿಗೆ ಹಸ್ತಾಂತರಅಕ್ಕಿಯನ್ನು ಎಥೆನಾಲ್‌ ಉತ್ಪಾದಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿರುವುದೇಕೆ?- ಪ್ರಿಯಾಂಕ್ ಖರ್ಗೆಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ“ಮನೆಗೆಲಸ ಮಾಡು, ವೃದ್ಧ ಪೋಷಕರನ್ನು ನೋಡಿಕೊಂಡಿರು”- ಪತ್ನಿಗೆ ಪತಿ ಆದೇಶಿಸುವಂತಿಲ್ಲಭ್ರಷ್ಟಾಚಾರ ಆರೋಪಿಗೆ ರಾಜಾತಿಥ್ಯ – ನ್ಯಾಯಾಧೀಶರ ದಿಢೀರ್ ರೇಡ್‌ನಲ್ಲಿ ಅಕ್ರಮ ಬಯಲು