LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತಕ್ಕೆ Su-57 ಸ್ಟೆಲ್ತ್ ಫೈಟರ್ ಜೆಟ್ ಆಫರ್‌ ನೀಡಿದ ಪುಟಿನ್‌

Advertisement
Advertisement

ನವದೆಹಲಿ: ಭಾರತೀಯ ವಾಯುಪಡೆಗೆ (IAF) ‘ತೇಜಸ್‌’ ಲಘು ಯುದ್ಧ ವಿಮಾನಗಳ ಸೇರ್ಪಡೆಯ ಯಶಸ್ಸಿನ ನಂತರ, ಕೇಂದ್ರ ಸರ್ಕಾರ ಸಾವಿರ ಕೋಟಿ ವೆಚ್ಚದಲ್ಲಿ 5ನೇ ತಲೆಮಾರಿನ ಯುದ್ಧ ವಿಮಾನಗಳನ್ನ ದೇಶೀಯವಾಗಿ ನಿರ್ಮಿಸುವ ಕಾರ್ಯಕ್ಕೆ ಮುಂದಾಗಿದೆ. ಈ ಹೊತ್ತಿನಲ್ಲೇ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಭಾರತಕ್ಕೆ ಬಿಗ್‌ ಆಫರ್‌ವೊಂದನ್ನ ನೀಡಿದ್ದಾರೆ.

ಸುಖೋಯ್ Su-57 5ನೇ ತಲೆಮಾರಿನ ಸ್ಟೆಲ್ತ್‌ ಯುದ್ಧವಿಮಾನಕ್ಕೆ  ಸಂಬಂಧಿಸಿದಂತೆ ಭರ್ಜರಿ ಆಫರ್‌ವೊಂದನ್ನ ನೀಡಿದ್ದಾರೆ. 

ಒಂದು ದಿನದ ಹಿಂದೆ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಪುಟಿನ್‌, Su-57 5ನೇ ತಲೆಮಾರಿನ ಫೈಟರ್‌ ಜೆಟ್‌ ವಿಮಾನವನ್ನು ಭಾರತಕ್ಕೆ  ಪೂರೈಸಲು ರಷ್ಯಾ ಸಿದ್ಧವಿದೆ. ಇದರೊಂದಿಗೆ ಭಾರತದೊಂದಿಗೆ ಜಂಟಿಯಾಗಿ ಸುಖೋಯ್‌ Su-57 ಅನ್ನು ಅಭಿವೃದ್ಧಿಪಡಿಸಲು ರಷ್ಯಾ  ಸಿದ್ಧವಾಗಿದೆ. ನಿರ್ಣಾಯಕ ತಂತ್ರಜ್ಞಾನಗಳನ್ನು ಹಂಚಿಕೊಳ್ಳಲು ರೆಡಿಯಿದೆ ಎಂದು ಹೇಳಿದ್ದಾರೆ.

ಇದರಲ್ಲಿ ನಮಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ಪುಟಿನ್ ಹೇಳಿದ್ದಾರೆ. ಇದು ಭಾರತದೊಂದಿಗೆ ಇರುವ ರಕ್ಷಣಾ ಸಂಬಂಧಗಳನ್ನ ಇನ್ನಷ್ಟು ಬಲಪಡಿಸಲು ರಷ್ಯಾದ ಇಚ್ಛೆಯನ್ನು ಸೂಚಿಸುತ್ತದೆ.


ಸದ್ಯ ಭಾರತದ 5ನೇ ತಲೆಮಾರಿನ ಸುಧಾರಿತ ಮಧ್ಯಮ ಶ್ರೇಣಿಯ ಯುದ್ಧ ವಿಮಾನಗಳನ್ನು (ಎಎಂಸಿಎ) ತಯಾರಿಸುವ ಯೋಜನೆ ಅಭಿವೃದ್ಧಿ ಹಂತದಲ್ಲಿದೆ. ಫೈಟರ್‌ ಜೆಟ್‌ಗಳನ್ನ ದೇಶೀಯವಾಗಿ ನಿರ್ಮಿಸುವ 15 ಸಾವಿರ ಕೋಟಿ ರೂ. ಮೊತ್ತದ ಯೋಜನೆ ಇದಾಗಿದೆ. ಈ ಯೋಜನೆಯನ್ವಯ 2030 ರ ದಶಕದ ಮಧ್ಯಭಾಗದಲ್ಲಿ ಸೇವೆಗೆ ಪ್ರಸ್ತುತಪಡಿಸುವ ಸಾಧ್ಯತೆಗಳಿವೆ.

ಈ ಮಧ್ಯೆ ಪಾಕಿಸ್ತಾನವು ಚೀನಾದಿಂದ ಶೆನ್ಯಾಂಗ್ J-35AE ಸ್ಟೆಲ್ತ್ ಫೈಟರ್‌ಗಳನ್ನ ಖರೀದಿಸಲು ಮುಂದಾಗಿರುವುದು ಕಳವಳ ಹೆಚ್ಚಿಸಿದೆ. ಇಂತಹ ಸನ್ನಿವೇಶದಲ್ಲಿ ಭಾರತವು ವಾಯುಪಡೆಗೆ ಬಲ ತುಂಬಲು 5ನೇ ತಲೆಮಾರಿನ ಯುದ್ಧವಿಮಾನಕ್ಕಾಗಿ ಹುಡುಕಾಟ ನಡೆಸುತ್ತಿರುವಾಗಲೇ ಪುಟಿನ್‌ ಈ ಆಫರ್‌ ನೀಡಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ – ಯುವಸಮೂಹಕ್ಕೆ ಅತಿದೊಡ್ಡ ಗೆಲುವು, ಮಂಡಿಯೂರಿದ ಕೇಂದ್ರ ನೀರಿಗಾಗಿ ಹಾಹಾಕಾರ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಪ್ರಾರಂಭಬರ ಸಂಕಷ್ಟದಲ್ಲಿ ರೈತರಿಗೆ ಸಾಲಮನ್ನಾ ಸೇರಿ ತುರ್ತು ಪರಿಹಾರ ಘೋಷಿಸಲಿ: ಡಾ. ವೀರಣ್ಣ ಚರಂತಿಮಠಉದ್ಯೋಗ ಖಾತ್ರಿಯಲ್ಲಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಫಲವೃಕ್ಷೋದ್ಯಾನ: ಈಶ್ವರ ಖಂಡ್ರೆ3 ಲಕ್ಷದವರೆಗೆ ಆದಾಯ ಮಿತಿ ಹೆಚ್ಚಳ – ಸಿಎಂ ಜೊತೆ ಚರ್ಚಿಸಿ ತೀರ್ಮಾನ ಎಂದ ಸಚಿವ ಮುನಿಯಪ್ಪʻನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ?ʼ ಎಂದಿದ್ದ ಸಿ.ಟಿ.ರವಿ ವಿರುದ್ಧ FIRಕಾಂಗ್ರೆಸ್ ದೇಶದಲ್ಲಿ ಅರಾಜಕತೆ ಸೃಷ್ಟಿಸಲು ಮುಂದಾಗಿದೆ: ಯದುವೀರ್ ಒಡೆಯರ್ಬೆಂಗಳೂರು ಸ್ವಚ್ಛತೆಗೆ ಹೊಸ ಹೆಜ್ಜೆ; 100 ಬ್ಲಾಕ್‌ ಸ್ಪಾಟ್‌ಗಳ ಸ್ವಚ್ಛತಾ ಅಭಿಯಾನ ಪೂರ್ಣಹಾರಂಗಿ ಡ್ಯಾಮ್‌ನಿಂದ 5,000 ಕ್ಯೂಸೆಕ್ ನೀರು ಬಿಡುಗಡೆ ಸಾಧ್ಯತೆ – ಕಾವೇರಿ ನದಿಗೆ ಇಳಿಯದಂತೆ ಎಚ್ಚರಿಕೆ