LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಸ್ಯಾಂಡಲ್‌ವುಡ್‌ ನಟಿಯ ಸಹೋದರಿಗೆ ವ್ಯಕ್ತಿಯೊಬ್ಬನಿಂದ ಅತ್ಯಾಚಾರ ಆರೋಪ – ಆರೋಪಿ ಬಂಧನ

Advertisement
Advertisement
Advertisement

ಬೆಂಗಳೂರು: ಸ್ಯಾಂಡಲ್‌ವುಡ್‌ ನಟಿಯ ಸಹೋದರಿಯೊಬ್ಬರು ಅತ್ಯಾಚಾರ ಆರೋಪದ ಅಡಿ ನೀಡಿದ ದೂರಿನ ಆಧಾರದ ಮೇಲೆ ಚಂದ್ರಾಲೇಔಟ್‌ ಠಾಣೆ ಪೊಲೀಸರು  ವ್ಯಕ್ತಿಯೊಬ್ಬನನ್ನ ಬಂಧಿಸಿ ಜೈಲಿಗಟ್ಟಿದ್ದಾರೆ.

ರಾಘವೇಂದ್ರ ಬಂಧಿತ ಆರೋಪಿ. ದೂರುದಾರ ಯುವತಿ ಹಾಗೂ ಆರೋಪಿ ರಾಘವೇಂದ್ರ ಕೆಲಸ ಮಾಡುತ್ತಿದ್ದ ಸ್ಥಳದಲ್ಲಿ ಪರಿಚಯವಾಗಿದ್ದು, ಬಳಿಕ ಇಬ್ಬರ ನಡುವೆ ಸ್ನೇಹ ಬೆಳೆದಿತ್ತು, ಸ್ನೇಹ ಪ್ರೀತಿಗೆ ತಿರುಗಿತ್ತು. ಬಳಿಕ ಮದುವೆಯಾಗುವುದಾಗಿ ನಂಬಿಸಿ ರಾಘವೇಂದ್ರ ತನ್ನ ಇಚ್ಛೆಗೆ ವಿರುದ್ಧವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾರೆ.

ಇದೇ ವೇಳೆ, ರಾಘವೇಂದ್ರ ತನ್ನ ಕ್ರೆಡಿಟ್‌ ಕಾರ್ಡ್‌ ಬಳಸಿ ಸಾಲ ಪಡೆದಿದ್ದಾನೆ, ಇದರಿಂದ ಆಕೆಗೆ ಸಮಸ್ಯೆಯಾಗಿದ್ದು ಇಬ್ಬರ ನಡುವೆ ಜಗಳ ನಡೆದಿತ್ತು. ಬಳಿಕ ವಿಚಾರಿಸಿದಾಗ ರಾಘವೇಂದ್ರಗೆ ಈಗಾಗಲೇ ಮದುವೆಯಾಗಿರುವುದು ತಿಳಿದುಬಂದಿತ್ತು ಎಂದು ಯುವತಿ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

ಖಾಸಗಿ ಫೋಟೊ ತೋರಿಸಿ ಬೆದರಿಕೆ ಆರೋಪ
ರಾಘವೇಂದ್ರನನ್ನ ಮದುವೆ ವಿಚಾರವಾಗಿ ಪ್ರಶ್ನಿಸಿದಾಗ, ನಟಿಯ ಸಹೋದರಿಯ ಖಾಸಗಿ ಫೋಟೊಗಳನ್ನ ತೋರಿಸಿ ಬೆದರಿಕೆ ಹಾಕಿದ್ದಾನೆ. ತನ್ನ ಮಾತು ಕೇಳದಿದ್ದರೆ ಫೋಟೊಗಳನ್ನ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಕೆ ಹಾಕಿದ್ದಾನೆ.

ಈ ಹಿಂದೆಯೂ ಚಂದ್ರಾಲೇಔಟ್‌ ಪೊಲೀಸ್‌ ಠಾಣೆಗೆ ದೂರು ನೀಡಲಾಗಿತ್ತು. ಪೊಲೀಸರು ರಾಘವೇಂದ್ರನನ್ನ ಠಾಣೆಗೆ ಕರೆಸಿ ಖಾಸಗಿ ಫೋಟೊಗಳನ್ನ ಡಿಲೀಟ್‌ ಮಾಡಿಸಿ ಎಚ್ಚರಿಕೆ ನೀಡಿ ಕಳುಹಿಸಿದ್ದರು. ಆದರೆ ಕೆಲ ದಿನಗಳ ಬಳಿಕ ಕೈ ಕೊಯ್ದುಕೊಂಡಿರುವ ಫೋಟೊ ಹಾಗೂ ಖಾಸಗಿ ಫೋಟೊಗಳನ್ನು ರಾಘವೇಂದ್ರ ಯುವತಿಗೆ ಕಳುಹಿಸಿದ್ದಾನೆ. ಅಲ್ಲದೇ, ತಾನು ಹೇಳಿದ ಸ್ಥಳಕ್ಕೆ ಬರುವಂತೆ ಬೆದರಿಕೆ ಹಾಕಿದ್ದಾನೆ.

ನಟಿಯ ಸಹೋದರಿ ವಿರುದ್ಧವೂ ರಾಘವೇಂದ್ರ ದೂರು
ಇದರ ನಡುವೆ ರಾಘವೇಂದ್ರ ಕೂಡ ನಟಿಯ ಸಹೋದರಿ ವಿರುದ್ಧ ತಲಘಟ್ಟಪುರ ಪೊಲೀಸ್‌ ಠಾಣೆಯಲ್ಲಿ ಪ್ರತಿ ದೂರು ನೀಡಿದ್ದಾನೆ. ರಾಘವೇಂದ್ರ ಹಾಗೂ ಆತನ ತಾಯಿಗೆ ಕರೆ ಮಾಡಿ ಬೆದರಿಕೆ ಹಾಕಲಾಗಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಈ ಸಂಬಂಧ ತಲಘಟ್ಟಪುರ ಪೊಲೀಸರು ಎನ್‌ಸಿಆರ್‌ ದಾಖಲಿಸಿ ನೋಟಿಸ್‌ ನೀಡಿದ್ದರು. ಆದರೆ ವಿಚಾರಣೆಗೆ ನಟಿಯ ಸಹೋದರಿ ಹಾಜರಾಗಿಲ್ಲ. ಪ್ರಕರಣದ ಎರಡೂ ದೂರುಗಳ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜನರ ಸಮಸ್ಯೆಗಳಿಗೆ ಸ್ಪಂದಿಸಿದ ಲಕ್ಷ್ಮೀ ಹೆಬ್ಬಾಳಕರ್ಮೃತರ ಕುಟುಂಬಗಳಿಗೆ ಲಕ್ಷ್ಮೀ ಹೆಬ್ಬಾಳಕರ್ ಸಾಂತ್ವನಮೈಸೂರು ದಸರೆಗೆ ದುಬಾರೆಯ 5 ಆನೆಗಳ ಪಯಣಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಧಾರ್ಮಿಕ ಆಚರಣೆಯಲ್ಲ- UP ವಿದ್ಯಾರ್ಥಿನಿಯ ಅರ್ಜಿ ವಜಾಮಂತ್ರಾಲಯ ರಾಯರ ಮಠದ ಹುಂಡಿ ಎಣಿಕೆ – 19 ದಿನದಲ್ಲಿ 2.81 ಕೋಟಿ ಕಾಣಿಕೆ ಸಂಗ್ರಹಹನೂರು ಎನ್‌ಕೌಂಟರ್‌ ಪ್ರಕರಣ ಸಿಐಡಿಗೆ ಹಸ್ತಾಂತರಅಕ್ಕಿಯನ್ನು ಎಥೆನಾಲ್‌ ಉತ್ಪಾದಕರಿಗೆ ರಿಯಾಯಿತಿ ದರದಲ್ಲಿ ಮಾರಾಟ ಮಾಡುತ್ತಿರುವುದೇಕೆ?- ಪ್ರಿಯಾಂಕ್ ಖರ್ಗೆಮಲ್ಪೆಯಲ್ಲಿ ಚೂರಿ ಇರಿದು ಮೀನುಗಾರನ ಬರ್ಬರ ಹತ್ಯೆ“ಮನೆಗೆಲಸ ಮಾಡು, ವೃದ್ಧ ಪೋಷಕರನ್ನು ನೋಡಿಕೊಂಡಿರು”- ಪತ್ನಿಗೆ ಪತಿ ಆದೇಶಿಸುವಂತಿಲ್ಲಭ್ರಷ್ಟಾಚಾರ ಆರೋಪಿಗೆ ರಾಜಾತಿಥ್ಯ – ನ್ಯಾಯಾಧೀಶರ ದಿಢೀರ್ ರೇಡ್‌ನಲ್ಲಿ ಅಕ್ರಮ ಬಯಲು