LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಅರಣ್ಯ ಇಲಾಖೆಯಿಂದ ಶಾಕ್ – ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ರೇಟ್ ಡಬಲ್

Advertisement
Advertisement

ಚಾಮರಾಜನಗರ: ಅರಣ್ಯ ಇಲಾಖೆಯು ಸಫಾರಿ ಮಾಡೋರಿಗೆ ಶಾಕ್ ನೀಡಿದ್ದು, ಪ್ರಸಿದ್ಧ ಬಂಡೀಪುರ, ನಾಗರಹೊಳೆಯಲ್ಲಿ  ಸಫಾರಿ ದರವನ್ನು  ಬಹುತೇಕ ಡಬಲ್ ಮಾಡಲಾಗಿದೆ.

ಬಂಡೀಪುರ ಹಾಗೂ ನಾಗರಹೊಳೆಯಲ್ಲಿ ಸೆಪ್ಟೆಂಬರ್ 1ರಿಂದ ಪರಿಷ್ಕತ ಸಫಾರಿ ದರ ಜಾರಿಯಾಗಲಿದೆ. ಬಸ್, ಜೀಪ್, ಕ್ಯಾಮೆರಾ ಬಳಕೆ ಶುಲ್ಕ, ವಾಹನ ಪಾರ್ಕಿಂಗ್ ಸೇರಿದಂತೆ ಎಲ್ಲವನ್ನೂ ಬಹುತೇಕ ದ್ವಿಗುಣಗೊಳಿಸಿದ್ದಾರೆ. 

ಬಂಡೀಪುರದಲ್ಲಿ ಬಸ್ ಸಫಾರಿಗೆ ವಯಸ್ಕರ ದರವನ್ನು 650 ರೂ.ಯಿಂದ 1,000 ರೂ.ಗೆ ಏರಿಕೆ ಮಾಡಿದ್ದಾರೆ. ಇನ್ನೂ 12 ವರ್ಷದೊಳಗಿನ ಮಕ್ಕಳಿಗೆ 350 ರೂ.ಯಿಂದ 500 ರೂ.ಗೆ ಹೆಚ್ಚಿಸಿದ್ದಾರೆ. ಜೀಪ್ ಸಫಾರಿಗೆ ವಯಸ್ಕರ ದರ 750 ರೂ.ಯಿಂದ 1,500 ರೂ.ಗೆ ಹಾಗೂ ಮಕ್ಕಳಿಗೆ 750 ರೂ. ನಿಗದಿ ಮಾಡಲಾಗಿದೆ. ಈ ದರಗಳಲ್ಲಿ ನೇಚರ್ ಗೈಡ್ ಶುಲ್ಕ ಸೇರಿರುತ್ತದೆ.

ಇನ್ನೂ ಸಫಾರಿ ವೇಳೆ ಕ್ಯಾಮೆರಾ ಬಳಕೆಗೂ ಹೊಸ ನಿಯಮ ತರಲಾಗಿದ್ದು, 200 ಮಿ.ಮೀ.ವರೆಗೆ ಲೆನ್ಸ್ ಹೊಂದಿರುವ ಕ್ಯಾಮೆರಾಗೆ ಶುಲ್ಕ ಇಲ್ಲ. 200 ಮಿ.ಮೀ.ಗಿಂತ ಹೆಚ್ಚಿನ ಲೆನ್ಸ್ ಹೊಂದಿರುವ ಕ್ಯಾಮೆರಾಗಳಿಗೆ 1,500 ರೂ. ಜೊತೆಗೆ 18% ಜಿಎಸ್‌ಟಿ ಪಾವತಿಸಬೇಕು. ಬಂಡೀಪುರದಲ್ಲಿ ಸ್ವಂತ ಜೀಪ್, ಎಲ್‌ಸಿವಿ ಅಥವಾ ಬೋಟ್ ಮೂಲಕ ಅನುಮತಿ ಪಡೆದ ಪ್ರದೇಶಗಳಿಗೆ ಪ್ರವೇಶಿಸುವವರಿಗೂ ಹೊಸ ದರ ನಿಗದಿಯಾಗಿದೆ.

ವಯಸ್ಕರಿಗೆ – 600 ರೂ.
ಮಕ್ಕಳಿಗೆ – 300 ರೂ.
ಜೀಪ್ – 2,500 ರೂ.
ಲಘು ವಾಣಿಜ್ಯ ವಾಹನ – 3,500 ರೂ.
ಬೋಟ್ – 3,500 ರೂ.

ನಾಗರಹೊಳೆಯಲ್ಲಿ
ಬಸ್ ಸಫಾರಿ- ವಯಸ್ಕರಿಗೆ 1000 ರೂ. ಮಕ್ಕಳಿಗೆ 500 ರೂ.
ಜೀಪ್ ಸಫಾರಿ- ವಯಸ್ಕರಿಗೆ 1500 ರೂ. ಮಕ್ಕಳಿಗೆ 750 ರೂ.
ಕ್ಯಾಮರಾ- 200 ಎಂಎಂ ಲೆನ್ಸ್‌ಗಿಂತ ಹೆಚ್ಚು 1500 ರೂ.
ವಾಹನ ನಿಲುಗಡೆ- ಕಾರು 100 ರೂ., ಲಘು ವಾಹನ 200 ರೂ., ಬಸ್ 300 ರೂ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅರಣ್ಯ ಇಲಾಖೆಯಿಂದ ಶಾಕ್ – ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ರೇಟ್ ಡಬಲ್ರಾಜೀನಾಮೆ ಬಳಿಕ ಸಂಸತ್‌ ಭವನಕ್ಕೆ ಬಂದ ಧರ್ಮೇಂದ್ರ ಪ್ರಧಾನ್‌ಗೆ ಪೇಟ ತೊಡಿಸಿ ಅದ್ಧೂರಿ ಸ್ವಾಗತವಿದ್ಯಾರ್ಥಿಗಳ ಪ್ರತಿಭಟನೆ ವೇಳೆ AK-47 ಹಿಡಿದು ಗುಂಡು ಹಾರಿಸಿದ ಕಾನ್ಸ್‌ಟೇಬಲ್‌ – ವಿಡಿಯೋ ವೈರಲ್‌ ಬೆನ್ನಲ್ಲೇ ಅಮಾನತುಕುಡಿಯುವ ನೀರಿಗಾಗಿ 224 ಕೋಟಿ ಅನುದಾನ ಬಿಡುಗಡೆ – ಈಶ್ವರ್ ಖಂಡ್ರೆಗದ್ದಲ ಕೋಲಾಹಲದ ನಡುವೆ ಲೋಕಸಭೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ತಡೆ ಮಸೂದೆ ಮಂಡನೆ5,000 ರೂ. ಲಂಚ ಪಡೆದ ಆರೋಪ – ಹೆಡ್‌ ಕಾನ್ಸ್‌ಟೇಬಲ್‌ ಸಸ್ಪೆಂಡ್‌ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದ ಮಾಜಿ ಸಿಎಂ ಸಿದ್ದರಾಮಯ್ಯಪತ್ರಕರ್ತರ ಸೋಗಿನಲ್ಲಿ ಸುಲಿಗೆ ಮಾಡ್ತಿದ್ದ ನಾಲ್ವರು ಯೂಟ್ಯೂಬರ್ಸ್ ಅರೆಸ್ಟ್ಧುಮ್ಮಿಕ್ಕುತ್ತಿರುವ ʻಜೋಗದ ಸಿರಿʼಯನ್ನು ಕಣ್ತುಂಬಿಕೊಂಡ ಸಾವಿರಾರು ಪ್ರವಾಸಿಗರುನಿಪ್ಪಾಣಿಯಲ್ಲಿ ಆಲ್ ಇಂಡಿಯಾ ಪ್ಯಾಂಥರ್ ಸೇನೆಯಿಂದ ಗಮನ ಸೆಳೆಯುವ ಧರಣಿ; NEET ಪ್ರಕರಣದ ವಿವಿಧ ಬೇಡಿಕೆಗಳ ಕುರಿತು ತಹಶೀಲ್ದಾರರಿಗೆ ಮನವಿ