LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ವಿಧಾನಸಭೆ ಚುನಾವಣೆಗೆ 47 ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದ ಕೇರಳಂ ಬಿಜೆಪಿ

Advertisement
Advertisement
ದೆಹಲಿ (ಮಾ.16) ಪಂಚ ರಾಜ್ಯಗಳ ಚುನಾವಣೆ ದಿನಾಂಕ ಪ್ರಕಟಗೊಂಡ ಬೆನ್ನಲ್ಲೇ ರಾಜಕೀಯ ಚಟುವಟಿಕೆ ಗರಿಗೆದರಿದೆ. ಈ ಪೈಕಿ ಕೇರಳದಲ್ಲಿ ಚುನಾವಣಾ ಕಣ ರಂಗೇರಿದೆ. ಚುನಾವಣಾ ದಿನಾಂಕ ಘೋಷಣೆಯಾದ ಮರುದಿನ ಬಿಜೆಪಿ ಕೇರಳಂ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿದೆ. ಕೇರಳಂ ವಿಧಾನಸಭೆ ಚುನಾವಣೆಗೆ ಬಿಜೆಪಿ 47 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದೆ.

ಕೇರಳಂ ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ನೆಮಾಮ್ ಕ್ಷೇತ್ರದಿಂದ, ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ ಸುರೇಂದ್ರನ್ ಕಾಸರಗೋಡಿನಿಂದ ಸ್ಪರ್ಧಿಸುತ್ತಿದ್ದಾರೆ. ಇತ್ತ ಪ್ರಮುಖ ನಾಯಕಿ ಶೋಭಾ ಸುರೇಂದ್ರನ್ ಪಾಲಕ್ಕಾಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

ತಿರುವನಂತಪುರಂ ಲೋಕಸಭಾ ಕ್ಷೇತ್ರದಲ್ಲಿ ಬರವು ಈ ನೆಮಾಮ್ ವಿಧಾನಸಭೆ ಕ್ಷೇತ್ರದಲ್ಲಿ ಸದ್ಯ ಕಮ್ಯೂನಿಸ್ಟ್ ಪಾರ್ಟಿಯ ಶಿವಂಕುಟ್ಟಿ ಶಾಸಕರಾಗಿದ್ದಾರೆ. 2011 ಹಾಗೂ 2021ರ ಚುನಾವಣೆಯಲ್ಲಿ ಸಿಪಿಎಂನ ಶಿವಂಕುಟ್ಟಿ ಗೆದ್ದಿದ್ದಾರೆ. ಆದರೆ 2016ರಲ್ಲಿ ಇದೇ ಕ್ಷೇತ್ರದಲ್ಲಿ ಬಿಜೆಪಿ ಇತಿಹಾಸ ಸೃಷ್ಟಿಸಿತ್ತು. 2016ರಲ್ಲಿ ಬಿಜೆಪಿಯ ರಾಜಗೋಪಾಲ್ ಈ ಕ್ಷೇತ್ರದಿಂದ ಗೆದ್ದು ಶಾಸಕರಾಗಿದ್ದರು. ಈ ಕ್ಷೇತ್ರದಲ್ಲಿ ಕಮ್ಯೂನಿಸ್ಟ್ ಪಾರ್ಟಿ ಪ್ರಾಬಲ್ಯ ಹೊಂದಿದೆ. ಇದೀಗ ರಾಜೀವ್ ಚಂದ್ರಶೇಖರ್ ಈ ನೆಮಾಮ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ.

2024ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ನಾಯಕಿ ನವ್ಯ ಹರಿದಾಸ್ ಭಾರಿ ಗಮನಸೆಳೆದಿದ್ದರು. ವಯನಾಡು ಕ್ಷೇತ್ರದಿಂದ ಸ್ಪರ್ಧಿಸಿದ್ದ ನವ್ಯ ಹರಿದಾಸ್, ಪ್ರಿಯಾಂಕಾ ಗಾಂಧಿ ವಾದ್ರಾಗೆ ನಡುಕು ಹುಟ್ಟಿಸಿದ್ದರು. ಇದೀಗ ನವ್ಯ ಹರಿದಾಸ್ ಉತ್ತರ ಕೋಝಿಕ್ಕೋಡ್ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇನ್ನು ಸುಲ್ತಾನ್ ಬತ್ತೇರಿ ಕ್ಷೇತ್ರದಿಂದ ಕವಿತಾ ಎಎಸ್, ತ್ರಿಶೂರ್‌ನಿಂದ ಪದ್ಮಜಾ ವೇಣುಗೋಪಾಲ್, ಕನ್ನತ್ತೂರು ಕ್ಷೇತ್ರದಿಂದ ರಾಜಿ ಪ್ರಸಾದ್, ಕೊಟ್ಟಾಕರ ಕ್ಷೇತ್ರದಿಂದ ರೇಶ್ಮಿ, ವಟ್ಟಿಯೂರ್ಕಾವು ಕ್ಷೇತ್ರದಿಂದ ಶ್ರೀಲೇಖಾ ಸ್ಪರ್ಧಿಸುತ್ತಿದ್ದಾರೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ – KPSC ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ಆರೋಪ – ಕಾಸು ಕೊಟ್ರೆ ತಪಾಸಣೆಯೆ ಇಲ್ವಂತೆ!ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ ಬಂಧನಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಇರ್ಫಾನ್ ಅರೆಸ್ಟ್‌ಬೆಂಗಳೂರಿನಲ್ಲಿ ಮತ್ತೆ ತ್ರಿವಳಿ ಕೊಲೆ – ತಾಯಿ, ಅಜ್ಜಿ, ಮಾವನನ್ನು ಕೊಂದು ಪರಾರಿಯಾಗಬೇಕಿದ್ದವ ಸೂಸೈಡ್‌ಪ್ರಶಾಂತ್ ಕಿಶೋರ್ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಯನ್ನು ಬಿಜೆಪಿ ದಿಢೀರ್‌ ಬದಲಾಯಿಸಿದ್ದು ಯಾಕೆ?ತೆಲಂಗಾಣದಲ್ಲಿ ಪೋಕ್ಸೋ ಆರೋಪಿಯಿಂದ ಮಾರಣಹೋಮ – ಪತ್ನಿ, ಮಕ್ಕಳು, ಸಂತ್ರಸ್ತೆ ಸೇರಿ 6 ಜನರ ಬರ್ಬರ ಹತ್ಯೆಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ – ಚಿಕ್ಕೋಡಿ ವ್ಯಾಪ್ತಿಯ 3 ಪ್ರಮುಖ ಸೇತುವೆಗಳು ಸಂಚಾರಕ್ಕೆ ಮುಕ್ತ