LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes

ಯಾವ್ ಟ್ರಬಲ್ ಶೂಟರ್ ರೀ – ಸಿಎಂ ಡಿಕೆಶಿಗೆ ಕೆ.ಎನ್‌ ರಾಜಣ್ಣ ಕೌಂಟರ್‌

Advertisement
Advertisement

ತುಮಕೂರು: ಯಾವ್ ಟ್ರಬಲ್ ಶೂಟರ್ ರೀ… ನೀವೇ ಟ್ರಬಲ್ ಶೂಟರ್ ಮಾಡಿರೋದು. ಹಾಗಿದ್ದ ಮೇಲೆ ಅಸ್ಸಾಂಗೆ ಹೋಗಿ ಯಾಕೆ ಟ್ರಬಲ್ ಶೂಟರ್ ಆಗಲಿಲ್ಲ ಎಂದು ಮಾಜಿ ಸಚಿವ ಕೆ.ಎನ್.ರಾಜಣ್ಣ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ವ್ಯಂಗ್ಯವಾಡಿದರು. ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ ನೀಡುವ ವಿಚಾರ ಹಾಗೂ ಖಾತೆ ಹಂಚಿಕೆ ಕುರಿತು ಕೆ.ಎನ್. ರಾಜಣ್ಣ ಅವರು ಪ್ರತಿಕ್ರಿಯಿಸಿದರು.

ಮಧುಗಿರಿಯಲ್ಲಿ ಮಾತನಾಡಿದ ಅವರು, ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ರಾಮಲಿಂಗಾ ರೆಡ್ಡಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು. ಹೌದಾ.. ಹೊಸ ಸುದ್ದಿ ಹೇಳ್ತಿರಾ ಅಂದಕೊಂಡರೆ ಹಳೆ ಸುದ್ದಿ ಹೇಳ್ತಿರಲ್ಲ. ಇದು ಯಾವುದೇ ಪತನ ಅಲ್ಲ. ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ. ಅದಕ್ಕಾಗಿ ರಾಜೀನಾಮೆ ನೀಡುತ್ತಿದ್ದೇನೆ. ರಾಮಲಿಂಗಾ ರೆಡ್ಡಿಯವರು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಹಾಗೂ ಶಾಸಕರಾಗಿ ತಮ್ಮ ಜವಾಬ್ದಾರಿಯನ್ನು ಮುಂದುವರಿಸುವುದಾಗಿ ಹೇಳಿದ್ದಾರೆ ಎಂದು ಕೆ ಎನ್‌ ರಾಜಣ್ಣ ಸ್ಪಷ್ಟಪಡಿಸಿದರು. 

ಇದೇ ವೇಳೆ ಸಚಿವ ಸಂಪುಟದಲ್ಲಿ ಖಾತೆ ಹಂಚಿಕೆ ವಿಚಾರವನ್ನೂ ಪ್ರಸ್ತಾಪಿಸಿದ ರಾಜಣ್ಣ, ಈಶ್ವರ ಖಂಡ್ರೆ ಅವರಿಗೆ ಅದೇ ಖಾತೆ ಯಾಕೆ ಕೊಡಲಿಲ್ಲ? ಪರಮೇಶ್ವರ್ ಅವರಿಗೆ ಗೃಹ ಖಾತೆ ನೀಡಬೇಕಿತ್ತು. ಯಾಕೆ ಕಂದಾಯ ಖಾತೆ ಕೊಟ್ಟಿದ್ದಾರೆ? ಎಂದು ಪ್ರಶ್ನಿಸಿದರು.

ಯಾರ ಆಸ್ತಿ ಯಾರಪ್ಪನ ಸ್ವತ್ತು ಅಲ್ಲ, ಬದಲಾದ ಸನ್ನಿವೇಶಕ್ಕೆ ಅನುಗುಣವಾಗಿ ಅವಕಾಶಗಳು ಸಿಗುತ್ತವೆ. ಅಂತಹ ಅವಕಾಶಗಳನ್ನು ಬಳಸಿಕೊಂಡು ಜನಪರ ಕೆಲಸ ಮಾಡಬೇಕು ಎಂದು ಹೇಳಿದರು. 

ಇನ್ನು ಸಚಿವ ಸಂಪುಟ ಪುನರ್‌ರಚನೆಯ ಬಳಿಕ ಖಾತೆ ಹಂಚಿಕೆ ಕಾಂಗ್ರೆಸ್‌ನಲ್ಲಿ ಸಾಕಷ್ಟು ಚರ್ಚೆಗೆ ಕಾರಣವಾಗಿದೆ. ಇದೇ ವೇಳೆ ಹಿರಿಯ ಶಾಸಕ ರಾಮಲಿಂಗಾ ರೆಡ್ಡಿ ಬೆಂಗಳೂರು ಅಭಿವೃದ್ಧಿ ಖಾತೆಯ ಕೇಳಿದ್ದರು. ಆದರೆ ಖಾತೆ ಸಿಗದ ಹಿನ್ನೆಲೆಯಲ್ಲಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬೆಳವಣಿಗೆಯ ನಡುವೆ ರಾಮಲಿಂಗಾ ರೆಡ್ಡಿ ಅವರನ್ನು ಮನವೊಲಿಸಿ ರಾಜೀನಾಮೆ ಹಿಂಪಡೆಯುವಂತೆ ಕಾಂಗ್ರೆಸ್ ಹೈಕಮಾಂಡ್ ಯಾವ ಕ್ರಮ ಕೈಗೊಳ್ಳಲಿದೆ ಎಂಬುದರ ಬಗ್ಗೆ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿದೆ.

Author
Editor: Ratnakar Goundi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಆದಾಯ ಪ್ರಮಾಣಪತ್ರ ಸಲ್ಲಿಕೆ – KPSC ಅಧ್ಯಕ್ಷರ ಪುತ್ರಿ ವಿರುದ್ಧ ಎಫ್‌ಐಆರ್ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ಆರೋಪ – ಕಾಸು ಕೊಟ್ರೆ ತಪಾಸಣೆಯೆ ಇಲ್ವಂತೆ!ಸ್ಟಾಕ್‌ ಮಾರ್ಕೆಟ್‌ನಲ್ಲಿ ಲಾಸ್‌ – ಗುಂಡು ಹಾರಿಸಿಕೊಂಡು ಕೊಡಗಿನ ಯುವಕ ಆತ್ಮಹತ್ಯೆಶಾಶ್ವತ ನಿವಾಸ ಪ್ರಮಾಣಪತ್ರ ರಾಜ್ಯ ಸರ್ಕಾರ ಯಾಕೆ ಕೊಡಬಾರದು – ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಪ್ರಶ್ನೆತನ್ನ ಪರ ತೀರ್ಪು ಕೊಡಲಿ ಅಂತ ಮಹಿಳಾ ನ್ಯಾಯಾಧೀಶರ ಚೇರ್‌ಗೆ ಮಾಟಮಂತ್ರ – ಮಹಿಳೆ ಬಂಧನಬಸ್​​ನಲ್ಲಿ ವಿದ್ಯಾರ್ಥಿನಿಯರಿಗೆ ಗುಪ್ತಾಂಗ ತೋರಿಸಿ ವಿಕೃತಿ – ಕಂಡಕ್ಟರ್ ಇರ್ಫಾನ್ ಅರೆಸ್ಟ್‌ಬೆಂಗಳೂರಿನಲ್ಲಿ ಮತ್ತೆ ತ್ರಿವಳಿ ಕೊಲೆ – ತಾಯಿ, ಅಜ್ಜಿ, ಮಾವನನ್ನು ಕೊಂದು ಪರಾರಿಯಾಗಬೇಕಿದ್ದವ ಸೂಸೈಡ್‌ಪ್ರಶಾಂತ್ ಕಿಶೋರ್ ವಿರುದ್ಧ ನಾಮಪತ್ರ ಸಲ್ಲಿಸಿದ್ದ ಅಭ್ಯರ್ಥಿಯನ್ನು ಬಿಜೆಪಿ ದಿಢೀರ್‌ ಬದಲಾಯಿಸಿದ್ದು ಯಾಕೆ?ತೆಲಂಗಾಣದಲ್ಲಿ ಪೋಕ್ಸೋ ಆರೋಪಿಯಿಂದ ಮಾರಣಹೋಮ – ಪತ್ನಿ, ಮಕ್ಕಳು, ಸಂತ್ರಸ್ತೆ ಸೇರಿ 6 ಜನರ ಬರ್ಬರ ಹತ್ಯೆಮಹಾರಾಷ್ಟ್ರದಲ್ಲಿ ತಗ್ಗಿದ ಮಳೆ – ಚಿಕ್ಕೋಡಿ ವ್ಯಾಪ್ತಿಯ 3 ಪ್ರಮುಖ ಸೇತುವೆಗಳು ಸಂಚಾರಕ್ಕೆ ಮುಕ್ತ