ಶಿರಸಿಯಲ್ಲಿ ಕೆನರಾ ಕಾಂಗ್ರೆಸ್ ಮುಖಂಡರ, ಕಾರ್ಯಕರ್ತರ ಸಭೆ
Google News | Join WhatsApp | Join Telegram | View ePaper |
Panchayat Swaraj Samachar News Desk.
ಶಿರಸಿಯಲ್ಲಿ ಕೆನರಾ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರ ಮತ್ತು ಕಾರ್ಯಕರ್ತರ ಸಭೆಹಮ್ಮಿಕೊಳ್ಳುವುದರ ಮೂಲಕ ಚುನಾವಣಾ ಸಿದ್ದತೆ ಕುರಿತು ಚರ್ಚಿಸಲಾಯಿತು.
ಶಿರಸಿಯ ಪಾಂಡುರಂಗ ಸಭಾಭವನದಲ್ಲಿ ಸಭೆಯನ್ನು ಹಮ್ಮಿಕೊಳ್ಳಲಾಯಿತು ಸಭೆಯಲ್ಲಿ ಕೆನರಾ ಲೋಕಸಭಾ ಕ್ಷೇತ್ರದ ಚುನಾವನೆಯಲ್ಲಿ ಯಾವ ರೀತಿಯಾಗಿ ಅಭ್ಯರ್ಥಿಯ ಗೆಲುವಿಗಾಗಿ ತಯಾರಿ ನಡೆಸಬೇಕು ಮತ್ತು ಸರಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ತಿಳಿಸಿ ಮತ ಯಾಚನೆ ನಡೆಸಬೇಕು ಎಂದು ಸಭೆಯಲ್ಲಿ ಚರ್ಚಿಸಲಾಯಿತು.
ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಅಂಜಲಿ ಹೇಮಂತ ನಿಂಬಾಲ್ಕರ್, ಉಸ್ತುವಾರಿ ಸಚಿವರಾದ ಮಂಕಾಳ್ ವೈದ್ಯ, ಆಡಳಿತ ಸುಧಾರಣ ಆಯೋಗದ ಅಧ್ಯಕ್ಷರಾದ ಆರ್. ವಿ ದೇಶಪಾಂಡೆ, ಶಾಸಕರಾದ ಭೀಮಣ್ಣ ನಾಯ್ಕ್ ರವರು, ಸತೀಶ ಸೈಲ್ , ಕುಮಟಾ ವಿಧಾನ ಸಭಾ ಅಭ್ಯರ್ಥಿ ನಿವೇದಿತ ಆಳ್ವಾ ಹಾಗೂ ಯಲ್ಲಾಪುರ ವಿಧಾನ ಸಭಾ ಅಭ್ಯರ್ಥಿಯಾದ ವಿ. ಎಸ್ ಪಾಟೀಲ ಉಪಸ್ಥಿತಿಯಲ್ಲಿ ಚುನಾವಣಾ ತಯಾರಿ ಸಭೆ ನಡೆಯಿತು
ಈ ಸಭೆಯಲ್ಲಿ ,ಕೆಪಿಸಿಸಿ ಪದಾಧಿಕಾರಿಗಳು ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ಸೆಲ್ ಜಿಲ್ಲಾ ಮತ್ತು ಬ್ಲಾಕ್ ಅಧ್ಯಕ್ಷರು, ಕೆಪಿಸಿಸಿ ಸಂಯೋಜಕರು,ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷರು ಮತ್ತು ಸದಸ್ಯರು, ತಾಲೂಕ ಅಧ್ಯಕ್ಷರು ಮತ್ತು ಪದಾಧಿಕಾರಿಗಳು,ಎಲ್ಲಾ ಸ್ತರದ ಚುನಾಯಿತ ಪ್ರತಿನಿಧಿಗಳು,ಸರ್ಕಾರದ ನಾಮನಿರ್ದೇಶಿತ ಸದಸ್ಯರು ಮತ್ತು ಮಹಿಳಾ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಸಭೆಯಲ್ಲಿ ಉಪಸ್ಥಿತರಿದ್ದರು.
Google News | Join Facebook | Live | 24/7 Help Desk |