spot_img
spot_img
spot_img
24.8 C
Belagavi
Thursday, June 1, 2023
spot_img

ತಿರುಪತಿ ಹುಂಡಿಯಲ್ಲಿ ಒಂದೇ 1451.15 ಕೋಟಿ ರೂಪಾಯಿ ಹಣ ಸಂಗ್ರಹ

ತಿರುಪತಿ: 2022ರ ಸಾಲಿನಲ್ಲಿ ತಿರುಮಲ ತಿರುಪತಿ ವೆಂಕಟೇಶ್ವರ ಹುಂಡಿಯಿಂದ ಒಟ್ಟು 1,451.15 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಈ ವರ್ಷ ಕಾಣಿಕೆಯ ಪ್ರಮಾಣವೂ ಹೆಚ್ಚಳವಾಗಿದೆ. ಕಳೆದ ವರ್ಷ 833.41 ಕೋಟಿ ಕಾಣಿಕೆ ಸಂಗ್ರಹವಾಗಿತ್ತು ಎಂದು ಶೀಕ್ಷೇತ್ರದ ನಿರ್ವಹಣೆಯ ಹೊಣೆಯನ್ನು ಹೊತ್ತಿರುವ ತಿರುಮಲ ತಿರುಪತಿ ದೇವಸ್ಥಾನ ತಿಳಿಸಿದೆ.

ಶ್ರೀ ವೆಂಕಟೇಶ್ವರ ದೇವಸ್ಥಾನದ ಹುಂಡಿಯಲ್ಲಿ ಈ ಬಾರಿ ಭಾರಿ ಮೊತ್ತದ ಕಾಣಿಕೆ ಸಂಗ್ರಹವಾಗಿದೆ. 2022 ಜನವರಿ 1ರಿಂದ ಡಿಸೆಂಬರ್ 30ರವರೆಗಿನ ಅವಧಿಯಲ್ಲಿ ಒಟ್ಟು 1,451.15 ಕೋಟಿ ರೂ. ಸಂಗ್ರಹವಾಗಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ, ಕಾಣಿಕೆ ಸಂಗ್ರಹದಲ್ಲಿ ಶೇ.74ರಷ್ಟು ಹೆಚ್ಚಳವಾಗಿದೆ ಎಂದು ಟಿಟಿಡಿ ತಿಳಿಸಿದೆ.

2022ರಲ್ಲಿ ಒಟ್ಟು 2,36,88,734 ಕೋಟಿ ಜನರು ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. 2021ರಲ್ಲಿ ಈ ಸಂಖ್ಯೆ 1.04 ಕೋಟಿಯಷ್ಟಿತ್ತು. ಇದೇ ವೇಳೆ, ಲಡ್ಡು ಪ್ರಸಾದ ಮಾರಾಟದಿಂದ ಒಟ್ಟು 11.42 ಕೋಟಿ ರೂ. ಆದಾಯ ಬಂದಿದೆ. ಹೆಚ್ಚು ಕಡಿಮೆ 3 ಕೋಟಿಗೂ ಅಧಿಕ ಜನರು ಅನ್ನಪ್ರಸಾದ ಸ್ವೀಕರಿಸಿದ್ದಾರೆ ಎಂದು ಟಿಟಿಡಿ ತಿಳಿಸಿದೆ.

ಇದೇ ವೇಳೆ, ಜನವರಿ 2ರಿಂದ 11ರವರೆಗೆ ನಡೆಯಲಿರುವ ವೈಕುಂಠ ದ್ವಾರ ದರ್ಶನಕ್ಕೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಟಿಟಿಡಿ ಕೈಗೊಂಡಿದೆ. ಭಕ್ತರ ದರ್ಶನಕ್ಕೆ ಬೇಕಾಗುವ ಎಲ್ಲ ತಯಾರಿಗಳ ಮೇಲ್ವಿಚಾರಣೆಯನ್ನು ಟಿಟಿಡಿಯ ಕಾರ್ಯನಿರ್ವಾಹಕ ಅಧಿಕಾರಿ ಅನಿಲ್ ಕುಮಾರ್ ಸಿಂಘಾಲ್ ಕೈಗೊಂಡರು.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -