spot_img
spot_img
spot_img
32.1 C
Belagavi
Tuesday, June 6, 2023
spot_img

ಔತಣಕೂಟ ಮುಗಿಸಿ ಹೊಗುತ್ತಿದ್ದವರ ಮೇಲೆ ಹರಿದ ಟ್ರಕ್ : 15 ಜನ ಸ್ಥಳದಲ್ಲೇ ಸಾವು

ಬಿಹಾರ: ಭೀಕರ ರಸ್ತೆ ಅಪಘಾತ ಸಂಭವಿಸಿ 15 ಜನರು ಸಾವನ್ನಪ್ಪಿರುವ ಘಟನೆ ಬಿಹಾರದ ವೈಶಾಲಿ ಜಿಲ್ಲೆ ಮೆಹನಾರ್ನಲ್ಲಿ ನಡೆದಿದೆ. ಘಟನೆಯಲ್ಲಿ 7 ಮಕ್ಕಳು ಸೇರಿ 15 ಜನ ಸಾವನ್ನಪ್ಪಿದ್ದಾರೆ. ಗಂಭೀರವಾಗಿ ಗಾಯಗೊಂಡ ನಾಲ್ವರನ್ನು ಉಪವಿಭಾಗದ ಆಸ್ಪತ್ರೆಗೆ ದಾಖಲಿಸಲಾಗಿದೆ.

ವೇಗವಾಗಿ ಬಂದ ಟ್ರಕ್, ಮಕ್ಕಳ ಸಹಿತ ಹಲವರ ಮೇಲೆ ಹರಿದಿದೆ. ಘಟನೆ ಬಗ್ಗೆ ವಿಷಾದ ವ್ಯಕ್ತಪಡಿಸಿದ ಮುಖ್ಯಮಂತ್ರಿ ನಿತೀಶ್ ಕುಮಾರ್ , ದುರಂತ ಎಂದು ಹೇಳಿದ್ದಾರೆ.

ಭೂಯಾನ್ ಬಾಬಾರವರ ಪೂಜೆ ಹಿನ್ನೆಲೆ ಔತಣಕೂಟ ಮುಗಿಸಿ ಎಲ್ಲರೂ ಹಿಂತಿರುಗುತ್ತಿದ್ದರು. ಈ ವೇಳೆ ಪೀಪಲ್ ಟ್ರೀ ಬಳಿ ನಿಂತಿದ್ದ ಜನರ ಮೇಲೆ ಟ್ರಕ್ ಹರಿದಿದೆ.

ಟ್ರಕ್ ಚಾಲಕ ಕುಡಿದ ಅಮಲಿನಲ್ಲಿ ವಾಹನ ಚಲಾಯಿಸುತ್ತಿದ್ದ ಎಂದು ಹೇಳಲಾಗುತ್ತಿದೆ. ಘಟನೆಯಲ್ಲಿ ಚಾಲಕನಿಗೂ ಸಣ್ಣಪುಟ್ಟ ಗಾಯಗಳಾಗಿವೆ. ಘಟನೆಯಿಂದ ಜನರು ಟ್ರಕ್ ಚಾಲಕನ ವಿರುದ್ಧ ಕೆರಳಿದ ಪರಿಣಾಮ ಭಯಕ್ಕೆ ಟ್ರಕ್ ಚಾಲಕ ಟ್ರಕ್​ನಲ್ಲೇ ಕುಳಿತುಕೊಂಡಿದ್ದಾನೆ. ಪೊಲೀಸರು ಸ್ಥಳಕ್ಕೆ ಬಂದು ಚಾಲಕನನ್ನು ವಶಕ್ಕೆ ಪಡೆದಿದ್ದರೂ ಜನರ ಆಕ್ರೋಶ ಕಡಿಮೆಯಾಗಿಲ್ಲ.

ಘಟನೆಯ ನಂತರ ಮೃತ ದೇಹಗಳು ಸ್ಥಳದಲ್ಲೇ ಚೆಲ್ಲಾಪಿಲ್ಲಿಯಾಗಿ ಬಿದ್ದಿದ್ದವು. ಸ್ಥಳಕ್ಕೆ ದೌಡಾಯಿಸಿದ ಸಂಬಂಧಿಕರು ಮೃತದೇಹಗಳನ್ನು ನೋಡಿ  ಆಕ್ರಂದನ ಮುಗಿಲು ಮುಟ್ಟಿತು.

ಮಧ್ಯರಾತ್ರಿ ಮರಣೋತ್ತರ ಪರೀಕ್ಷೆಗಾಗಿ ಹಾಜಿಪುರ ಸದರ್ ಆಸ್ಪತ್ರೆಗೆ ರವಾನಿಸಲಾಯಿತು. ಆರೋಪಿ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಸದ್ಯ ಹಾಜಿಪುರ ಸದರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆದಿದೆ.ಇನ್ನು ಪ್ರಧಾನಿ ನರೇಂದ್ರ ಮೋದಿ ಘಟನೆ ಬಗ್ಗೆ ಸಂತಾಪ ಸೂಚಿಸಿದ್ದಾರೆ. ಕೇಂದ್ರ ಸರ್ಕಾರ ಪರಿಹಾರ ಘೋಷಣೆ ಮಾಡಿದೆ.

Related News

ಬೆಳಗಾವಿಯಲ್ಲಿ ಬ್ರಿಡ್ಜ್ ಮೇಲಿಂದ ಉರುಳಿಬಿದ್ದ ಟ್ಯಾಂಕರ್ ಅದೃಷ್ಟವಶಾತ್ ಬದುಕುಳಿದ ಚಾಲಕ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ಮೂಲದ ರಾಮದಾಸ್...

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಐವರ ಸಾವು

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ) ನಲ್ಲಿ ನಡೆದಿದೆ. ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -