ವರದಿ : ರತ್ನಾಕರ್ ಗೌಂಡಿ
ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದ ಎಳೇಬೈಲ ಗ್ರಾಮದ ಶ್ರೀ ದುರ್ಗಾದೇವಿ ಮಂದಿರದ ಜೀರ್ಣೋದ್ಧಾರದ ಸಲುವಾಗಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಶಾಸಕರ ನಿಧಿಯ ವತಿಯಿಂದ 5 ಲಕ್ಷ ರೂ. ನೀಡಲಾಗಿದೆ.
ಮೊದಲ ಕಂತಿನಲ್ಲಿ 2.77 ಲಕ್ಷ ರೂ,ಗಳ ಚೆಕ್ ನ್ನು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ದೇವಸ್ಥಾನದ ಕಮೀಟಿಯವರಿಗೆ ಮಂಗಳವಾರ ಹಸ್ತಾಂತರಿಸಿದರು.
ಈ ಸಮಯದಲ್ಲಿ ಗ್ರಾಮದ ಹಿರಿಯರು, ದೇವಸ್ಥಾನದ ಕಮೀಟಿಯವರು, ಮನೋಹರ್ ಬೆಳಗಾಂವ್ಕರ್, ಮೃಣಾಲ ಹೆಬ್ಬಾಳಕರ್, ಮಹೇಶ ಪಾಟೀಲ, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು ಉಪಸ್ಥಿತರಿದ್ದರು.