Ad imageAd image

ನೀಟ್ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯಿಸಿ ನಿರ್ಣಯ ಅಂಗೀಕಾರ

ratnakar
ನೀಟ್ ಪರೀಕ್ಷೆ ರದ್ದುಪಡಿಸುವಂತೆ ಒತ್ತಾಯಿಸಿ ನಿರ್ಣಯ ಅಂಗೀಕಾರ
WhatsApp Group Join Now
Telegram Group Join Now

ಬೆಂಗಳೂರು: ನಿನ್ನೆ ರಾತ್ರಿ ವಿಧಾನಸಭೆಯಲ್ಲೇ ಮಲಗಿ, ಅಹೋರಾತ್ರಿ ಧರಣಿ ಮಾಡಿದ್ದ ಬಿಜೆಪಿ-ಜೆಡಿಎಸ್ ನಾಯಕರು, ಇವತ್ತು ಕಲಾಪ ಆರಂಭವಾಗ್ತಿದ್ದಂತೆ ಮತ್ತೆ ಮೂಡಾ ಹಗರಣ ವಿಚಾರ ಪ್ರಸ್ತಾಪಿಸಿದ್ರು. ಸದನದಲ್ಲಿ ನಿರಂತರವಾಗಿ ಗಲಾಟೆ ಗದ್ದಲ ಮುಂದುವರೆದಿತ್ತು. ಈ ಗಲಾಟೆ ನಡುವೆಯೇ ಕೆಲವು ವಿಧೇಯಕ ಅಂಗೀಕಾರ ಮಾಡಲಾಗಿದೆ. ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕೆಂದು ಒತ್ತಾಯಿಸಲಾಗಿದೆ.

ವಿಧಾನಪರಿಷತ್​ನಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಅವರು NEET ರದ್ದತಿಗೆ ಕೋರಿ ನಿರ್ಣಯ ಮಂಡಿಸಿದರು. ಸಿಇಟಿ ಅಂಕಗಳನ್ನು ಆಧರಿಸಿ ಪ್ರವೇಶಾತಿ ನೀಡಬೇಕು. ನೀಟ್ ಪರೀಕ್ಷೆ ರದ್ದುಪಡಿಸುವಂತೆ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.

ಇನ್ನು ಒನ್ ನೇಷನ್, ಒನ್ ಎಲೆಕ್ಷನ್ ವಿರೋಧಿಸಿ ವಿಧಾನಪರಿಷತ್​ನಲ್ಲಿ ಸಿಎಂ ಸಿದ್ದರಾಮಯ್ಯ ​ನಿರ್ಣಯ ಮಂಡಿಸಿದರು. ಬಿಜೆಪಿ, JDS ಸದಸ್ಯ ಬಲ ಹೆಚ್ಚಿದ್ದರೂ ಗದ್ದಲದಿಂದ ನಿರ್ಣಯ ಪಾಸ್ ಮಾಡಲಾಗಿದೆ. ಒಂದು ರಾಷ್ಟ್ರ ಒಂದು ಚುನಾವಣೆ ನೀತಿಯನ್ನು ಅನುಷ್ಠಾನಗೊಳಿಸಬಾರದು. ಈ ಬಗ್ಗೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ.

ವಿಧಾನಸಭೆಯಲ್ಲಿ ಅರಣ್ಯ ವಾಸಿ ಅನುಸೂಚಿತ ಬುಡಕಟ್ಟುಗಳಿಗೆ ಸಮಾನವಾಗಿ ಇತರ ಪಾರಂಪರಿಕ ಅರಣ್ಯ ವಾಸಿಗಳನ್ನು ಪರಿಗಣಿಸುವ ಹಾಗೆ, ಅನುಸೂಚಿತ ಬುಡಕಟ್ಟುಗಳ ಮತ್ತು ಇತರೆ ಪಾರಂಪರಿಕ ಅರಣ್ಯವಾಸಿಗಳ(ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮ 2006(2007ರ ಕೇಂದ್ರ ಅಧಿನಿಯಮ 02) ಮತ್ತು ಅದರ ಅಡಿಯಲ್ಲಿ ಮಾಡಲಾದ ನಿಯಮಗಳನ್ನು ಸೂಕ್ತ ಮತ್ತು ಸಮರ್ಪಕವಾಗಿ ಮಾರ್ಪಡಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿ ನಿರ್ಣಯ ಅಂಗೀಕಾರ ಮಾಡಲಾಯಿತು.

WhatsApp Group Join Now
Telegram Group Join Now
Share This Article