Ad imageAd image

ತುಂಗಭದ್ರಾ ಡ್ಯಾಂನ ಕ್ರಸ್ಟ್‌ ಗೇಟ್​ನ ಚೈನ್ ಲಿಂಕ್ ಕಟ್! ಅಪಾರ ನೀರು ಹೊರಕ್ಕೆ

ratnakar
ತುಂಗಭದ್ರಾ ಡ್ಯಾಂನ ಕ್ರಸ್ಟ್‌ ಗೇಟ್​ನ ಚೈನ್ ಲಿಂಕ್ ಕಟ್! ಅಪಾರ ನೀರು ಹೊರಕ್ಕೆ
WhatsApp Group Join Now
Telegram Group Join Now

ಕೊಪ್ಪಳ: ಕೊಪ್ಪಳ ತಾಲೂಕಿನ ಮುನಿರಾಬಾದ್ ಬಳಿ ಇರುವ ತುಂಗಭದ್ರಾ ಜಲಾಶಯದ 19 ನಂಬರ್‌ ಗೇಟ್​​ನ ಚೈನ್ ಲಿಂಕ್ ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ತುಂಡಾಗಿದೆ. ಇದರಿಂದಾಗಿ 1 ಲಕ್ಷ ಕ್ಯೂಸೆಕ್‌ಗೂ ಅಧಿಕ ನೀರು ಜಲಾಶಯದಿಂದ ನದಿಗೆ ಹರಿದು ಹೋಗುತ್ತಿದೆ. ಈ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.

ರಾತ್ರೋರಾತ್ರಿ ಶಾಸಕ ರಾಘವೇಂದ್ರ ಹಿಟ್ನಾಳ್‌, ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಡ್ಯಾಂಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಶಿವರಾಜ್​ ತಂಗಡಗಿ, ಜಲಾಶಯದ ಕುರಿತು ಅಧಿಕಾರಿಗಳ ಬಳಿ ಮಾಹಿತಿ ಪಡೆದಿದ್ದೇನೆ. ಒಳಹರಿವು ಹೆಚ್ಚಿರುವುದರಿಂದ ಕೆಳಗಿಳಿದು ಕೆಲಸ ಮಾಡಲು ಆಗಲ್ಲ. ಸದ್ಯ ಒಂದು ಲಕ್ಷ ಕ್ಯೂಸೆಕ್ ನೀರನ್ನು ಬಿಡಲಾಗುತ್ತಿದೆ. 20 ಅಡಿಯಷ್ಟು ನೀರು ಖಾಲಿಯಾದರೆ ಮಾತ್ರ ಸಮಸ್ಯೆ ಬಗ್ಗೆ ಗೊತ್ತಾಗಲಿದೆ. ಹೀಗಾಗಿ ಡ್ಯಾಂನಲ್ಲಿರುವ ನೀರು ಖಾಲಿ ಮಾಡುವ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಹೇಳಿದರು.

2.35 ಲಕ್ಷ ಕ್ಯೂಸೆಕ್ ನೀರು ಬಿಟ್ಟರೂ ಯಾವುದೇ ತೊಂದರೆ ಆಗಲ್ಲ. 2.50 ಲಕ್ಷ ಕ್ಯೂಸೆಕ್ ದಾಟಿದರೆ ತೊಂದರೆ ಆಗುತ್ತದೆ. ಘಟನೆ ಬಗ್ಗೆ ಸಿಎಂ ಮತ್ತು ಡಿಸಿಎಂಗೆ ಮಾಹಿತಿ ನೀಡಲಾಗುತ್ತಿದೆ. ಬೆಂಗಳೂರು, ಹೈದರಾಬಾದ್​​​​, ಚೆನ್ನೈನಿಂದ ತಜ್ಞರ ತಂಡ ಆಗಮಿಸಿ ಪರಿಶೀಲನೆ ನಡೆಸಲಿವೆ ಎಂದರು.

ಶಾಸಕ ರಾಘವೇಂದ್ರ ಹಿಟ್ನಾಳ್‌ ಮಾತನಾಡಿ, ಸದ್ಯಕ್ಕೆ ಗೇಟ್‌ನ ರಿಪೇರಿ ಕಷ್ಟ ಎನ್ನಲಾಗಿದೆ. ಹೀಗಾಗಿ ಡ್ಯಾಂನಲ್ಲಿ ಒತ್ತಡ ಕಡಿಮೆ ಮಾಡಲು ಇತರ ಗೇಟ್‌ಗಳಿಂದ ಒಂದು ಲಕ್ಷ ಕ್ಯುಸೆಕ್‌ ನೀರು ಬಿಡಲಾಗುತ್ತಿದೆ. ಜನರು ನದಿ ಕಡೆ ಹೋಗದಂತೆ ಡಂಗುರ ಸಾರಲಾಗುತ್ತಿದೆ ಎಂದು ಹೇಳಿದರು.

WhatsApp Group Join Now
Telegram Group Join Now
Share This Article