Ad imageAd image

ಯತ್ನಾಳ್ ಒಡೆತನದ ಕಾರ್ಖಾನೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಭೇಟಿ

ratnakar
ಯತ್ನಾಳ್ ಒಡೆತನದ ಕಾರ್ಖಾನೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಭೇಟಿ
WhatsApp Group Join Now
Telegram Group Join Now

ಕಲಬುರಗಿ: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದಸಿರಿ ಎಥೆನಾಲ್ ಕಂಪನಿಗೆ ಬೆಳಗಾವಿ ವಿಭಾಗದ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಚಿಂಚೋಳಿಯ ಹೊರವಲಯದಲ್ಲಿರುವ ಕಾರ್ಖಾನೆಗೆ ಅಧಿಕಾರಿಗಳು ಭೇಟಿ ನೀಡಿದ್ದರು. ಮಾಲಿನ್ಯ ನಿಯಂತ್ರಣ ಮಂಡಳಿ ಪರಿಶೀಲನೆ ನಡೆಸುವಂತೆ ಅಧಿಕಾರಿಗಳಿಗೆ ಆದೇಶ ನೀಡಿತ್ತು. ಆದೇಶದ ಮೇರೆಗೆ ಮಾಲಿನ್ಯ ನಿಯಂತ್ರಣ ಮಂಡಳಿಯ ನಿಯಮಗಳ ಪಾಲನೆ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ.

ಕಾರ್ಖಾನೆಯ ಒಳಭಾಗದಲ್ಲಿ ವಿಡಿಯೋ ಮಾಡಿಕೊಂಡು ಅಧಿಕಾರಿಗಳು ತೆರಳಿದ್ದಾರೆ. ಇಂದು (ಶುಕ್ರವಾರ) ಮಾಲಿನ್ಯ ನಿಯಂತ್ರಣ ಮಂಡಳಿ ಕೇಂದ್ರ ಕಚೇರಿಗೆ ವರದಿ ಸಲ್ಲಿಸಲಿದ್ದಾರೆ. ಮೇಲ್ನೋಟಕ್ಕೆ ನಿಯಮಗಳ ಪಾಲನೆ ಆಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪರಿಶೀಲನೆ ಮುಗಿಯುತ್ತಿದ್ದಂತೆ ಕಾರ್ಖಾನೆ ಪ್ರಾರಂಭಕ್ಕೆ ಅನುಮತಿ ನೀಡುವಂತೆ ಅಧಿಕಾರಿಗಳಿಗೆ ರೈತರು ಮನವಿ ಮಾಡಿದ್ದಾರೆ.

 

WhatsApp Group Join Now
Telegram Group Join Now
Share This Article