Ad imageAd image

ಬೆಳಗಾವಿ ಗಣೇಶ ಉತ್ಸವ ಮೆರವಣಿಗೆ ವೇಳೆ ಅನಾಹುತ; ಓರ್ವ ಸಾವು

ratnakar
ಬೆಳಗಾವಿ ಗಣೇಶ ಉತ್ಸವ ಮೆರವಣಿಗೆ ವೇಳೆ ಅನಾಹುತ; ಓರ್ವ ಸಾವು
WhatsApp Group Join Now
Telegram Group Join Now

ಬೆಳಗಾವಿ: ಗಣೇಶ ಉತ್ಸವ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಓರ್ವ ಸಾವನ್ನಪ್ಪಿರುವ ಘಟನೆ ಪಾಟೀಲ್ ಗಲ್ಲಿಯಲ್ಲಿ ನಡೆದಿದೆ. ಸದಾನಂದ ಚೌಹಾಣ್ ಪಾಟೀಲ್ ಮೃತ ದುರ್ದೈವಿ.

ನಿನ್ನೆ ರಾತ್ರಿ ದುರ್ಘಟನೆ ಸಂಭವಿಸಿದೆ. ಕೂಡಲೇ ಸದಾನಂದ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಸದಾನಂದ ಚೌಹಾಣ್ ಪಾಟೀಲ್ ಸಾವನ್ನಪ್ಪಿದ್ದಾರೆ. ಇನ್ನು ವಿಜಯ ರಾಜಗೋಳ ಎಂಬ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಶ್ರೀರಾಮಸೇನೆ ಹಿಂದುಸ್ಥಾನ ಅಧ್ಯಕ್ಷ ರಮಾಕಾಂತ ಕೊಂಡೊಸ್ಕರ್ ಭೇಟಿ ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

WhatsApp Group Join Now
Telegram Group Join Now
Share This Article