spot_img
spot_img
spot_img
36.1 C
Belagavi
Tuesday, June 6, 2023
spot_img

ಕಾಡಾನೆಗೆ ಕಬ್ಬು ನೀಡಿದ ಚಾಲಕನಿಗೆ 75 ಸಾವಿರ ರೂ. ದಂಡ

ಚಾಮರಾಜನಗರ: ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ಹಾಸನೂರು ಬಳಿ ಕಾಡಾನೆಗೆ ತಿನ್ನಲು ಕಬ್ಬು ನೀಡಿದ ಮೈಸೂರು ಮೂಲದ ಲಾರಿ ಚಾಲಕನಿಗೆ ಅರಣ್ಯ ಇಲಾಖೆ 75 ಸಾವಿರ ರೂಪಾಯಿ ದಂಡ ವಿಧಿಸಿರುವ ವಿಚಿತ್ರ ಘಟನೆ ಬೆಳಕಿಗೆ ಬಂದಿದೆ.

ನಂಜನಗೂಡು ತಾಲೂಕಿನ ಸಿದ್ದರಾಜು ಎನ್ನುವ ಲಾರಿ ಚಾಲಕ, ಡಿಸೆಂಬರ್ 3 ರಂದು ಕಬ್ಬು ತುಂಬಿಕೊಂಡು ತಮಿಳುನಾಡಿಗೆ ಹೋಗುತ್ತಿದ್ದ. ಆ ವೇಳೆ ಗಡಿ ಭಾಗದ ತಮಿಳುನಾಡಿನ ಹಾಸನೂರು ಬಳಿ ಕಾಡಾನೆಗೆ ಕಬ್ಬು ನೀಡಿದ್ದಾನೆ. ಇದನ್ನು ನೋಡಿ ಅರಣ್ಯಧಿಕಾರಿಗಳು ಚಾಲಕನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಲ್ಲದೇ 75,000 ರೂ. ದಂಡ ಕಟ್ಟಿಸಿಕೊಂಡಿದ್ದಾರೆ.

ಕರೆಪಳ್ಳಂ ಚೆಕ್​ಪೋಸ್ಟ್​ನಿಂದ ಮೂರು ಕಿಲೋಮೀಟರ್ ದೂರದಲ್ಲಿ ಕಬ್ಬು ತುಂಬಿದ್ದ ಲಾರಿ ನಿಂತಿತ್ತು. ಅರಣ್ಯ ಇಲಾಖೆ ಸಿಬ್ಬಂದಿ ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಲಾರಿ ಚಾಲಕ ರಾಷ್ಟ್ರೀಯ ಹೆದ್ದಾರಿ ಬಳಿ ಇದ್ದ ಕಾಡಾನೆಗೆ ತಿನ್ನಲು ಕಬ್ಬು ತೆಗೆದುಕೊಂಡು ಹೋಗುತ್ತಿದ್ದನ್ನು ನೋಡಿದ್ದಾರೆ. ಬಳಿಕ ವಿಚಾರಣೆ ವೇಳೆ ಆನೆಗೆ ಕಬ್ಬು ನೀಡಿದ್ದನ್ನು ಲಾರಿ ಚಾಲಕ ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ 75 ಸಾವಿರ ರೂ. ದಂಡ ವಿಧಿಸಿದ್ದಾರೆ.

ವಾಹನ ಚಾಲಕರು ಕಬ್ಬು ನೀಡುವುದರಿಂದ ಆನೆಗಳು ರಸ್ತೆಗೆ ಬರುವ ಅಭ್ಯಾಸ ಬೆಳೆಸಿಕೊಂಡಿದ್ದವು. ಇದು ಅಪಘಾತಕ್ಕೆ ಕಾರಣವಾಗುತ್ತಿತ್ತು. ಅಲ್ಲದೇ ಈ ವೇಳೆ ಕೆಲವೊಮ್ಮೆ ವಾಹನಗಳ ಮೇಲೂ ದಾಳಿ ನಡೆಸುತ್ತಿವೆ.

ಹೀಗಾಗಿ ಕಾಡು ಪ್ರಾಣಿಗಳಿಗೆ ಆಹಾರ ನೀಡುವುದು ನಿಷೇಧಿಸಲಾಗಿತ್ತು.ಈ ನಿಯಮ ಉಲ್ಲಂಘಿಸಿ ಕಾಡಾನೆಗೆ ಕಬ್ಬು ನೀಡಿದ ಲಾರಿ ಚಾಲಕನಿಗೆ ದಂಡ ವಿಧಿಸಿ ಎಚ್ಚರಿಕೆ ನೀಡಲಾಗಿದೆ ಎಂದು ಸತ್ಯಮಂಗಲಂ ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Related News

ಅಂತೆ ಕಂತೆಗಳಿಗೆ ಕಿವಿಗೊಡಬೇಡಿ, ಸರಕಾರ ನಿಮ್ಮ ಜೊತೆಗಿದೆ – ಜನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ

ಬೆಳಗಾವಿ: ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು...

ಪ್ರಿಯತಮೆಯನ್ನು ಕೊಲೆ ಮಾಡಿ ಎಸ್ಕೇಪ್ ಆದ ಪ್ರಿಯಕರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಎಸ್ಕೇಪ್ ಆದ ಘಟನೆ ನಡೆದಿದೆ. ಬೆಂಗಳೂರಿನ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ಮೂಲದ ಆಕಾಂಕ್ಷಾ ಮೃತ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -