ಬೆಳಗಾವಿ: ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ವ್ಯಕ್ತಿಯೋರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಗರದ ಕ್ಯಾಂಪ್ ಪ್ರದೇಶದಲ್ಲಿ ನಡೆದಿದೆ.
ರಿಯಲ್ ಎಸ್ಟೇಟ್ ಏಜೆಂಟ್ ಸುಧೀರ್ ಕಾಂಬಳೆ(57) ಮೃತ ದುರ್ದೈವಿ. ಸುಧೀರ್ ಕಾಂಬಳೆ ದುಬೈನಲ್ಲಿ ವಾಸ ಮಾಡುತ್ತಿದ್ದು,ಕೊರೊನಾ 2 ವರ್ಷದ ಹಿಂದೆ ಹಿನ್ನೆಲೆ ಬೆಳಗಾವಿಗೆ ಬಂದಿದ್ದರು.
ನಿನ್ನೆ ರಾತ್ರಿ ಹೆಂಡತಿ, ಮಕ್ಕಳು ಪಕ್ಕದ ರೂಮ್ನಲ್ಲಿ ಮಲಗಿದ್ದಾಗಲೇ ಆರೋಪಿಗಳು ಮನೆಗೆ ನುಗ್ಗಿ ಹತ್ಯೆಗೈದು ಪರಾರಿಯಾಗಿದ್ದರು. ಕ್ಯಾಂಪ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.