spot_img
spot_img
spot_img
34.1 C
Belagavi
Monday, May 29, 2023
spot_img

ದೇಶದ ಸಂಸ್ಕೃತಿಯನ್ನು ಪ್ರೀತಿಸುವ ವ್ಯಕ್ತಿ ಹಿಂದು : ಸತೀಶ್ ಜಾರಕಿಹೊಳಿಗೆ ಪಿ. ರಾಜೀವ್ ಟಾಂಗ್

ಬೆಳಗಾವಿ : ದೇಶ ಹಾಗೂ ರಾಜ್ಯದಲ್ಲಿ ಭಯೋತ್ಪಾದಕ ಕೃತ್ಯಗಳು ನಡೆಯುತ್ತಿರುವ ಕಾರಣ ಕಾಂಗ್ರೆಸ್ ನ‌ ಪಾಪದ ಕೂಸು ಎಂದು ತಾಂಡಾ ಅಭಿವೃದ್ಧಿ ನಿಗಮ ಮಂಡಳದ ಅಧ್ಯಕ್ಷ ಪಿ.ರಾಜೀವ ಆರೋಪಿಸಿದರು.

ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನ ತುಷ್ಟಿಕರಣದ ಮನಸ್ಥಿತಿಯಿಂದ ಭಾರತ ಭಯೋತ್ಪಾದನಾ ಚಟುವಟಿಕೆಯಿಂದ ನಲಗುವಂತಾಗಿದೆ.

ಪೊಲೀಸರು ಎಲ್ಲ ರೀತಿಯ ಪ್ರಯತ್ನ ಮಾಡಿದರೂ ಮಂಗಳೂರಿನಲ್ಲಿ ಶಾರೀಕ್ ದೊಡ್ಡ ಸಂಚು ಮಾಡಿದ್ದ. ಒಂದು ವೇಳೆ ದೊಡ್ಡ ಪ್ರಮಾಣದಲ್ಲಿ ಬ್ಲಾಸ್ಟ್ ಆಗಿದ್ದರೆ ಕಾಂಗ್ರೆಸ್ ‌ವಿನಾಕಾರಣ ಬಿಜೆಪಿ ಮೇಲೆ ಆರೋಪ ಮಾಡುತ್ತಿದ್ದರು ಎಂದು ಆಕ್ರೋಶ ವ್ಯಕ್ತಪಡಿಸಿದರು.

ಪುಲ್ವಾಮಾ ದಾಳಿಯಾದಾಗ, ಚರ್ಚ್ ಮೇಲೆ ದಾಳಿಯಾದಾಗ ರಾಹುಲ್ ಗಾಂಧಿ ಸಭೆ ನಡೆಸುತ್ತಿದ್ದಾರೆ. ಸತೀಶ ಜಾರಕಿಹೊಳಿ ಅವರು ಹೇಳುತ್ತಾರೆ. ಹಿಂದೂ ಅಶ್ಲೀಲ ಎಂದು. ಮುಸ್ಲಿಂರು, ಜಿಹಾದಿ ಮನಸ್ಥಿತಿ ಇರುವವರನ್ನು ನೀವು ಖಂಡಿಸುತ್ತಿರಾ ಎಂದು ಪ್ರಶ್ನಿಸಿದರು.

ಬಿಜೆಪಿ ರಾಷ್ಟ್ರೀಯತೆ ಮೊದಲು ಎನ್ನುವ ಹಾಗೆ ದೇಶದ ಸಂಸ್ಕೃತಿಯನ್ನು ಪ್ರೀತಿಸುವ ವ್ಯಕ್ತಿ ಹಿಂದು ಎಂದು ರಾಷ್ಟ್ರೀಯತೆ ಎತ್ತಿ ಹಿಡಿಯುವ ಕೆಲಸ ಮಾಡುತ್ತಿದೆ.

ಮಂಗಳೂರಿನಲ್ಲಿ ‌ನಡೆದ ಕುಕ್ಕರ ಬ್ಲಾಷ್ಟ್ ಪ್ರಕರಣದಲ್ಲಿ ಶಾರಿಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಉಗ್ರವಾದ ಕಡಿವಾಣ ಹಾಕಲು‌ ಭಾರತ ಸರಕಾರ ಸನ್ನದ್ದವಾಗಿದೆ ಎಂದರು.

ಬೆಳಗಾವಿ ಬಿಜೆಪಿ ಗ್ರಾಮೀಣ ಘಟಕದ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಶರದ್ ಪಾಟೀಲ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -