spot_img
spot_img
spot_img
34.1 C
Belagavi
Wednesday, June 7, 2023
spot_img

ಮಹಿಳೆ, ಮಗು ನಾಪತ್ತೆ

ಬೆಳಗಾವಿ : ಧಾರವಾಡ ಜಿಲ್ಲೆಯ ನೀರಲಕಟ್ಟಿ ಗ್ರಾಮದ ನಿವಾಸಿಯಾದ ರುಕ್ಮಾವ್ವಾ ದುರ್ಗಪ್ಪ ಭಜಂತ್ರಿ ಇವರ ಮಗಳಾದ ಸ್ವಾತಿ ಅಶೋಕ ಭಜಂತ್ರಿ ಧಾರವಾಡ ಜಿಲ್ಲೆ ಹಳಿಯಾಳದಲ್ಲಿ ನೆಲಿಸಿದ್ದು, ಕೌಜಲಗಿ ಗ್ರಾಮದ ತನ್ನ ಅಜ್ಜಿಯ ಮನೆಯಿಂದ ಮಗ ಅರುಣ್ 1 ವರ್ಷ 6 ತಿಂಗಳ ಮಗುವಿನೊಂದಿಗೆ ನವಂಬರ್ 25 ರಂದು ರಾತ್ರಿ 2.30 ಗಂಟೆಗೆ ಮನೆಯಲ್ಲಿ ಇಲ್ಲ ಎಂದು ಕಂಡು ಬಂದಿರುತ್ತದೆ.

ಫಿರ್ಯಾದೆದಾರರು ಸಂಬಂಧಿಗಳನ್ನು ವಿಚಾರಿಸಿದರು ಯಾವುದೇ ಸುಳಿವು ಇಲ್ಲದ ಕಾರಣ ಎಲ್ಲಿಗೋ ಹೋಗಿ ಕಾಣೆಯಾಗಿರುತ್ತಾಳೆ ಈ ಕುರಿತು ಕುಲಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಸಿ ತನಿಖೆ ಕೈಗೊಳ್ಳಲಾಗಿರುತ್ತದೆ.

ಕಾಣೆಯಾದವರ ವಿವರ:

ಸ್ವಾತಿ ಭಜಂತ್ರಿ: ವಯಸ್ಸು 26, ಎತ್ತರ 4.5, ಸದೃಡ ಮೈ ಕಟ್ಟು, ಸಾದಾಗೆಂಪು ಮೈ ಬಣ್ಣ, ಕಪ್ಪು ಕೂದಲು, ಬಿಳಿ ಬಣ್ಣದ ಚೂಡಿದಾರ ಧರಿಸಿದ್ದು, ಕನ್ನಡ ಹಾಗೂ ಕೊರಮಾ ಭಾಷೆ ಮಾತನಾಡುತ್ತಾಳೆ.

ಅರುಣ್: ವಯಸ್ಸು 1 ವರ್ಷ 6 ತಿಂಗಳು, ಸಾದಾಗೆಂಪು ಮೈ ಬಣ್ಣ, ಕಪ್ಪು ಕೂದಲು, ಮಗು ಕೆಂಪು ಅಂಗಿ ಕಪ್ಪು ಶಾರ್ಟ ಪ್ಯಾಂಟ್ ಧರಿಸಿರುತ್ತರೆ.

ಸದರಿಯವರ ಬಗ್ಗೆ ಸುಳಿವು ಸಿಕ್ಕಲ್ಲಿ, ಕುಲಗೋಡ ಠಾಣೆ ದೂರವಾಣ ಸಂಖ್ಯೆ 08334-222233 ಅಥವಾ ಇ-ಮೇಲ್ ಐಡಿ [email protected] ಗೆ ಸಂಪರ್ಕಿಸಬಹುದು ಎಂದು ಕುಲಗೋಡ ಪೆÇಲೀಸ್ ಠಾಣೆಯ ಆರಕ್ಷಕ ಉಪ ನಿರೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

ತಿಂಗಳ ಸರಾಸರಿ ಮೀರಿದ್ರೆ ಹೆಚ್ಚುವರಿ ಯೂನಿಟ್‌ನ ಹಣ ಕಟ್ಟಬೇಕು: ಕೆಜೆ ಜಾರ್ಜ್

ಈಗಾಗಲೇ ಸಿಎಂ ಗೃಹಜ್ಯೋತಿ ಯೋಜನೆ ಬಗ್ಗೆ ವಿಸ್ಕೃತವಾಗಿ ತಿಳಿಸಿದ್ದಾರೆ. 200 ಯೂನಿಟ್ ವರೆಗೆ ಪ್ರತಿಯೊಬ್ಬರಿಗೆ ಉಚಿತವಾಗಿ ವಿದ್ಯುತ್ ಕೊಡುವ ಯೋಜನೆ ಇದಾಗಿದೆ. ಗೃಹಬಳಕೆಯ ಗ್ರಾಹಕರ ಒಂದು ವರ್ಷದ ಸರಾಸರಿ ತೆಗೆದುಕೊಂಡು 10% ಸೇರಿಸಿ...

ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮತ್ತು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕಸ್ಮಿಕ ಬೇಟಿ ಉಭಯ ಕುಶಲೋಪರಿ ವಿಚಾರಣೆ

ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಭಾರತೀಯ ರಾಷ್ಟ್ರೀಯ ಕ್ರಿಕೆಟ್ ತಂಡದ ಮಾಜಿ ಮಧ್ಯಮ ವೇಗದ ಬೌಲರ್ ವೆಂಕಟೇಶ್ ಪ್ರಸಾದ್ ಹಾಗೂ ಅವರ ಧರ್ಮಪತ್ನಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -