ಚಿಕ್ಕಮಗಳೂರು : ವ್ಯಕ್ತಿಯೊಬ್ಬ ತನ್ನ ಮನೆ ಬಳಿ ಕಟ್ಟಿದ್ದ ರಾಷ್ಟ್ರ ಧ್ವಜವನ್ನು ಸಿಗರೇಟ್ ನಿಂದ ಸುಟ್ಟು ತೂತಾಗಿಸಿದ್ದ ಎನ್ನಲಾಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಇದೀಗ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಗರ್ (50)ಬಂಧಿತ ಆರೋಪಿ
ಘಟನೆ ಬಳಿಕ ಆರೋಪಿ ಅಸ್ಗರ್ ಪರಾರಿಯಾಗಿದ್ದ. ಇದೀಗ ಪೊಲೀಸರು ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆ ನಿವಾಸಿ ಅಸ್ಗರ್ ನನ್ನು ಪೊಲೀಸರು ಬಂಧಿಸಿದ್ದಾರೆ.