ಬೆಳಗಾವಿ : ನಗರ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳಲ್ಲಿರುವ ಅವೈಜ್ಞಾನಿಕ ರಸ್ತೆ ಹುಬ್ಬುಗಳನ್ನು ಎಲ್ಲರ ಸಹಕಾರದೊಂದಿಗೆ ತೆಗೆಸಲು ಕ್ರಮ ವಹಸಿಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದರು.
ವಿಧಾನ ಮಂಡಳದಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಶಾಸಕ ಎ.ಟಿ.ರಾಮಸ್ವಾಮಿ ಮಾತನಾಡಿ ಪ್ರಮುಖ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ರಸ್ತೆ ಹುಬ್ಬುಗಳನ್ನು ಹಾಕಲಾಗಿದ್ದು ಅವುಗಳಿಗೆ ಬಣ್ಣ ಬಳಿಯುವುದಾಗಲಿ, ಸೂಚನಾ ಫಲಕವಾಗಲಿ ಇಲ್ಲದಿರುವದರಿಂದ ಅಪಘಾತಗಳಿಗೆ ಕಾರಣವಾಗುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಅನೇಕ ಗ್ರಾಮಗಳಲ್ಲಿ ಗ್ರಾಮಸ್ಥರ ಒತ್ತಾಯದಿಂದ ರಸ್ತೆಗಳನ್ನು ಹುಬ್ಬುಗಳನ್ನು ಹಾಕಲಾಗಿರುತ್ತದೆ.
ಎಷ್ಟೋ ಕಡೆ ಶಾಸಕರ ಒತ್ತಾಯದಿಂದಲೂ ರಸ್ತೆ ಹುಬ್ಬುಗಳನ್ನು ಹಾಕಲಾಗುತ್ತಿದೆ. ಈ ಬಗ್ಗೆ ಜನರಿಗೆ ತಿಳುವಳಿಕೆ ನೀಡಿ ಅವುಗಳನ್ನು ತೆಗೆಯಿಸಲು ಪ್ರಯತ್ನಿಸಲಾಗುವುದು ಎಂದರು.