spot_img
spot_img
spot_img
34.1 C
Belagavi
Monday, May 29, 2023
spot_img

ಅವೈಜ್ಞಾನಿಕ ರಸ್ತೆ ಹಂಪ್ಸ್ ತೆಗೆಸಲು ಕ್ರಮ: ಗೋವಿಂದ ಕಾರಜೋಳ

ಬೆಳಗಾವಿ : ನಗರ ಹಾಗೂ ಗ್ರಾಮೀಣ ಪ್ರದೇಶಗಳ ರಸ್ತೆಗಳಲ್ಲಿರುವ ಅವೈಜ್ಞಾನಿಕ ರಸ್ತೆ ಹುಬ್ಬುಗಳನ್ನು ಎಲ್ಲರ ಸಹಕಾರದೊಂದಿಗೆ ತೆಗೆಸಲು ಕ್ರಮ ವಹಸಿಲಾಗುವುದು ಎಂದು ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದರು.

ವಿಧಾನ ಮಂಡಳದಲ್ಲಿ ಬುಧವಾರ ಶೂನ್ಯ ವೇಳೆಯಲ್ಲಿ ಶಾಸಕ ಎ.ಟಿ.ರಾಮಸ್ವಾಮಿ ಮಾತನಾಡಿ ಪ್ರಮುಖ ರಸ್ತೆಗಳಲ್ಲಿ ಅವೈಜ್ಞಾನಿಕವಾಗಿ ರಸ್ತೆ ಹುಬ್ಬುಗಳನ್ನು ಹಾಕಲಾಗಿದ್ದು ಅವುಗಳಿಗೆ ಬಣ್ಣ ಬಳಿಯುವುದಾಗಲಿ, ಸೂಚನಾ ಫಲಕವಾಗಲಿ ಇಲ್ಲದಿರುವದರಿಂದ ಅಪಘಾತಗಳಿಗೆ ಕಾರಣವಾಗುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿದ ಸಚಿವರು ಅನೇಕ ಗ್ರಾಮಗಳಲ್ಲಿ ಗ್ರಾಮಸ್ಥರ ಒತ್ತಾಯದಿಂದ ರಸ್ತೆಗಳನ್ನು ಹುಬ್ಬುಗಳನ್ನು ಹಾಕಲಾಗಿರುತ್ತದೆ.

ಎಷ್ಟೋ ಕಡೆ ಶಾಸಕರ ಒತ್ತಾಯದಿಂದಲೂ ರಸ್ತೆ ಹುಬ್ಬುಗಳನ್ನು ಹಾಕಲಾಗುತ್ತಿದೆ. ಈ ಬಗ್ಗೆ ಜನರಿಗೆ ತಿಳುವಳಿಕೆ ನೀಡಿ ಅವುಗಳನ್ನು ತೆಗೆಯಿಸಲು ಪ್ರಯತ್ನಿಸಲಾಗುವುದು ಎಂದರು.

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -