Ad imageAd image

ಸಿದ್ದು ನಂತರ ರಾಜ್ಯದಲ್ಲಿ ಅಂತಹ ನಾಯಕನಿದ್ರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಹೆಚ್.ಡಿ.ತಮ್ಮಯ್ಯ

ratnakar
ಸಿದ್ದು ನಂತರ ರಾಜ್ಯದಲ್ಲಿ ಅಂತಹ ನಾಯಕನಿದ್ರೆ ಅದು ಸತೀಶ್ ಜಾರಕಿಹೊಳಿ ಮಾತ್ರ: ಹೆಚ್.ಡಿ.ತಮ್ಮಯ್ಯ
WhatsApp Group Join Now
Telegram Group Join Now

ಚಿಕ್ಕಮಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ನಂತರ ರಾಜ್ಯ ಕಾಂಗ್ರೆಸ್ (Congress) ಪಕ್ಷದಲ್ಲಿ ಅಂತಹ ನಾಯಕರು ಯಾರಾದರೂ ಇದ್ದರೆ ಅದು ಸತೀಶ್ ಜಾರಕಿಹೊಳಿಯವರು ಮಾತ್ರ ಎಂದು ಚಿಕ್ಕಮಗಳೂರು ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ, (HD Tammaiah) ಸತೀಶ್ ಜಾರಕಿಹೊಳಿ (Satish Jarkoholi) ಪರ ಬ್ಯಾಟಿಂಗ್ ಮಾಡಿದರು.

ಜಿಲ್ಲೆಯ ತರೀಕೆರೆ (Tarikere) ತಾಲ್ಲೂಕಿನಲ್ಲಿ ನಡೆದ ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ ಕಾರ್ಯಕ್ರಮಕ್ಕೆ ಆಗಮಿಸಿ ಮಾತನಾಡಿದರು. ರಾಜ್ಯದಲ್ಲಿ ದಲಿತ ಸಿಎಂ ಕೂಗು, ಸಿಎಂ ಬದಲಾವಣೆ, ರಾಜೀನಾಮೆ, ನಾಯಕರ ಪ್ರತ್ಯೇಕ ಸಭೆ, ಡಿನ್ನರ್, ಮೀಟಿಂಗ್ ಹೆಚ್ಚಾಗುತ್ತಿರುವ ಹಿನ್ನೆಲೆ ಬಹಿರಂಗ ವೇದಿಕೆಯಲ್ಲಿ ಸತೀಶ್ ಜಾರಕಿಹೊಳಿ ಪರ ಹೇಳಿಕೆ ನೀಡಿದರು.

ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಹೊರತುಪಡಿಸಿದರೆ ಸತೀಶ್ ಜಾರಕಿಹೊಳಿಯವರೇ ಭವಿಷ್ಯದ ನಾಯಕರು. ಸತೀಶ್ ಜಾರಕಿಹೊಳಿಯವರ ರೀತಿ ಸರಳ-ಸಜ್ಜನ ಮನುಷ್ಯ ಮತ್ತೊಬ್ಬರಿಲ್ಲ. ಸಿದ್ದು ನಂತರ ರಾಜ್ಯ ಕಾಂಗ್ರೆಸ್ (Congress) ಪಕ್ಷದಲ್ಲಿ ಅಂತಹ ನಾಯಕನಿದ್ದರೆ ಅದು ಸತೀಶ್ ಜಾರಕಿಹೊಳಿಯವರೇ ಎಂದರು.

ಒಂದು ಕಡೆ ಡಿಕೆಶಿ ಸಿಎಂ ಕನಸು ಕಾಣುತ್ತಿದ್ದಾರೆ. ಇನ್ನೊಂದು ಕಡೆ ಸತೀಶ್ ಜಾರಕಿಹೊಳಿಯವರ ಹೆಸರು ಮುನ್ನೆಲೆಯಲ್ಲಿದೆ. ಈ ಮಧ್ಯೆ ತೆರೆಮರೆಯಲ್ಲಿ ಖರ್ಗೆ-ಪರಮೇಶ್ವರ್ ಕಸರತ್ತಿನ ವದಂತಿಗಳು ಜೋರಾಗಿವೆ.

ಸಿಎಂ ರಾಜೀನಾಮೆ ನೀಡುತ್ತಾರೆ ಎನ್ನುವ ರಾಜ್ಯ ವಿಪಕ್ಷ ನಾಯಕರ ಹೇಳಿಕೆಗಳ ನಡುವೆ ದಲಿತ ಸಿಎಂ ಕೂಗು ಹೆಚ್ಚಾಗುತ್ತಿದೆ. ರಾಜ್ಯ ಕಾಂಗ್ರೆಸ್ ನಾಯಕರ ದೆಹಲಿ ಭೇಟಿ ಇದೆಲ್ಲವೂ ಇನ್ನಷ್ಟು ಕೂತುಹಲ ಮೂಡಿಸುತ್ತಿದೆ. ಜೊತೆಗೆ ಮಂಗಳವಾರ ಸತೀಶ್ ಜಾರಕಿಹೊಳಿ ಸಿಎಂ ಆಪ್ತ ಮಹದೇವಪ್ಪ ಅವರನ್ನು ಭೇಟಿಯಾಗಿದ್ದು, ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿತ್ತು.

WhatsApp Group Join Now
Telegram Group Join Now
Share This Article