ಬೆಂಗಳೂರು: ಕರ್ನಾಟಕದ ಯಾರೊಬ್ಬರೂ ಹಸಿದು ಮಲಗಬಾರದು ಎಂಬ ಸದಾಶಯದೊಂದಿಗೆ ಆರಂಭವಾದ ಕಾಂಗ್ರೆಸ್ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆ ಜಾರಿಗೆ ಬಂದು ಇದೀಗ 10 ವರ್ಷಗಳಾಗಿವೆ.
ಬಡಕುಟುಂಬಗಳಿಗೆ ತಲಾ 5 ಕೆ.ಜಿ ಆಹಾರಧಾನ್ಯವನ್ನು ವಿತರಣೆ ಮಾಡುವ ಯೋಜನೆಯನ್ನು 10 ಜುಲೈ 2013 ರಂದು ಜಾರಿಗೊಳಿಸಿ, ನಾಡಿನ ಹಸಿದವರಿಗೆ ನೆಮ್ಮದಿಯ ಅನ್ನ ನೀಡಿದ್ದೆ ಎಂದು ಸಿಎಂ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
ಹಸಿವಿನ ಬೇನೆ ನಾಡಿನ ಬಡಜನರನ್ನು ಬಾಧಿಸದಿರಲಿ ಎಂಬ ಸದುದ್ದೇಶದೊಂದಿಗೆ ನಾವು ಇಂದಿನಿಂದ 'ಅನ್ನಭಾಗ್ಯ' ಯೋಜನೆಯಡಿ ಬಡಕುಟುಂಬದ ಪ್ರತಿ ವ್ಯಕ್ತಿಗೆ ತಲಾ 5 ಕೆ.ಜಿ ಅಕ್ಕಿ ಹಾಗೂ ರೂ. 170 ನೀಡಲಿದ್ದೇವೆ.
ಹೆಚ್ಚುವರಿ 5 ಕೆ.ಜಿ ಅಕ್ಕಿಯ ಬದಲಿಗೆ ನೀಡುವ ಹಣವನ್ನು ಆಹಾರ ಪದಾರ್ಥಗಳ ಖರೀದಿಗೆ ಮಾತ್ರ ಬಳಕೆ ಮಾಡಬೇಕೆಂದು ನಾಡ ಬಾಂಧವರಲ್ಲಿ ಮನವಿ… pic.twitter.com/9IRjshI4CW
— CM of Karnataka (@CMofKarnataka) July 10, 2023