spot_img
spot_img
spot_img
spot_img
spot_img
spot_img
spot_img
spot_img
spot_img
20.4 C
Belagavi
Sunday, September 24, 2023
spot_img

ಉದ್ಯೋಗಿನಿ ಯೋಜನೆಗೆ ಅರ್ಜಿ ಆಹ್ವಾನ

ಬೆಳಗಾವಿ : ಬೆಳಗಾವಿ ಜಿಲ್ಲೆ ಮಹಿಳಾ ಅಭಿವೃದ್ಧಿ ನಿಗಮದಿಂದ 2021-22 ನೇ ಸಾಲಿನ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಉಪ ಯೋಜನೆಯಡಿ ಬಳಕೆಯಾಗದ ಅನುದಾನದಡಿ ಉದ್ಯೋಗಿನಿ ಯೋಜನೆಯಡಿ ಪರಿಶಿಷ್ಟ ಪಂಗಡದ – ಗುರಿ 18 ಇದ್ದು ಫಲಾನುಭವಿಗಳ ಆಯ್ಕೆ ಸಂಬಂಧವಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಪರಿಶಿಷ್ಟ ಪಂಗಡದ ಮಾಜಿ ದೇವದಾಸಿ, ಹಾಗೂ ಅವರ ಮಗಳು, ದಮನಿತ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ. ಸ್ವಂತ ಉದ್ಯೋಗ ಕೈಗೊಳ್ಳಬಯಸುವ ಆಸಕ್ತ ಮಹಿಳೆಯರು ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಿಂದ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳನ್ನು ಲಗತ್ತಿಸಿ ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ 20.09.2022 ರೊಳಗಾಗಿ ಸಂಬಂಧಿಸಿದ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಾಯಂಕಾಲ 5.30 ರೊಳಗಾಗಿ ಸಲ್ಲಿಸಲು ತಿಳಿಸಲಾಗಿದೆ.

 

ಸಾಲ ಪಡೆಯಲು ಅರ್ಹತೆಗಳು:

 

ಅರ್ಜಿದಾರಳು ಕರ್ನಾಟಕ ರಾಜ್ಯದ ಖಾಯಂ ನಿವಾಸಿಗಳಾಗಿರಬೇಕು. ಅರ್ಜಿದಾರಳು 18 ರಿಂದ 55 ವರ್ಷದೊಳಗಿರಬೇಕು. ಅರ್ಜಿದಾರಳು ರಾಷ್ಟ್ರೀಕೃತ ಬ್ಯಾಂಕ್ ಖಾತೆಯನ್ನು ಹೊಂದಿದ್ದು, ಚಾಲ್ತಿಯಲ್ಲಿರಬೇಕು. ಜಾತಿ ಹಾಗೂ ಆದಾಯ ಪ್ರಮಾಣ ಪತ್ರ (ಆದಾಯ ಮಿತಿ ರೂ. ಎರಡು ಲಕ್ಷ ಮೀರಿರಬಾರದು) ಯೋಜನಾ ವರದಿ ಲಗತ್ತಿಸುವುದು.

 

ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲಾತಿಗಳು:

 

ಪರಿಶಿಷ್ಟ ಪಂಗಡ ಜಾತಿ ಪ್ರಮಾಣ ಪತ್ರ. ಸಂಬಂಧಿಸಿದವರು ಮಾತ್ರ – ಮಾಜಿ ದೇವದಾಸಿ ಹಾಗೂ ಅವರ ಹೆಣ್ಣು ಮಕ್ಕಳಿಗೆ, (ಯೋಜನಾಧಿಕಾರಿಗಳು ದೇವದಾಸಿ ಪುನರ್ವಸತಿ ಯೋಜನೆ ಬೆಳಗಾವಿ ಇವರಿಂದ ಪ್ರಮಾಣ ಪತ್ರ) ದಮನಿತ ಮಹಿಳೆಯರು (ಸಮುದಾಯ ಆಧಾರಿತ ಸಂಸ್ಥೆಯವರಿಂದ ಪ್ರಮಾಣ ಪತ್ರ) ಕುಟುಂಬ ವಾರ್ಷಿಕ ಆದಾಯ ಪ್ರಮಾಣ ಪತ್ರ ವಿಳಾಸದ ದಾಖಲೆಗಳು (ಮತದಾರರ ಗುರುತಿನ ಚೀಟಿ / ಆಧಾರ್‍ಕಾರ್ಡ್ / ಪಡಿತರಚೀಟಿ / ಯಾವುದಾದರೊಂದು ದಾಖಲೆ ಸಲ್ಲಿಸುವುದು.

ಯೋಜನಾ ವರದಿ (ಅರ್ಜಿಯಲ್ಲಿ ನೀಡಿರುವಂತೆ ತುಂಬಿ ಸಲ್ಲಿಸತಕ್ಕದ್ದು) ತರಬೇತಿ ಅಥವಾ ಅನುಭವ ಪತ್ರ. ದ್ವಿ ಪ್ರತಿಯಲ್ಲಿ ಭರ್ತಿ ಮಾಡಿದ ಅರ್ಜಿ. ರಾಷ್ಟ್ರೀಕೃತ ಬ್ಯಾಂಕಿನಲ್ಲಿ ತೆರೆಯಲಾದ ಬ್ಯಾಂಕ್ ಖಾತೆಯ ಪುಸ್ತಕದ ನಕಲು ಪ್ರತಿ ಮತ್ತು ಬ್ಯಾಂಕಿನ ಹೆಸರು, ಐ.ಎಫ್.ಎಸ್.ಸಿ. ಕೋಡ್‍ನ ದಾಖಲೆ. ರಹವಾಸಿ ಪ್ರಮಾಣ ಪತ್ರ, ಶಿಕ್ಷಣಕ್ಕೆ ಸಂಬಂಧಿಸಿದ ದಾಖಲಾತಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

ರೈತರ ಹೋರಾಟಕ್ಕೆ ಸಾಂಕೇತಿಕವಾಗಿ ಬೆಂಬಲ ಸೂಚಿಸಲು ಹೊರಟಿದ್ದೇನೆ -ಹೆಚ್​ಡಿಕೆ

ಬೆಂಗಳೂರಿಗೆ ಆಗಮಿಸಿದ ಹೆಚ್​ಡಿ ಕುಮಾರಸ್ವಾಮಿ ಅವರು ಕೇಂಪೇಗೌಡ ಏರ್ಪೋರ್ಟ್ ನಲ್ಲಿ ಮಾತನಾಡಿದರು. ಈ ವೇಳೆ, ಅಮಿತ್ ಷಾ ಹಾಗೂ ನಡ್ಡಾ ಜೊತೆ ನಡೆದ ಚರ್ಚೆಗಳ ಬಗ್ಗೆ ದೆಹಲಿಯಲ್ಲಿ ಹೇಳಿದ್ದೇನೆ. ಬಿಜೆಪಿ-ಜೆಡಿಎಸ್ ಮೈತ್ರಿ ವಿಚಾರ...

9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ

ಬೆಂಗಳೂರು: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧಾರ ಮಾಡಿದೆ. 9ನೇ ತರಗತಿ ಮಕ್ಕಳ ಕಲಿಕಾ ದೃಷ್ಟಿಯಿಂದ ಮಕ್ಕಳಿಗೆ ಸಂಕಲನಾತ್ಮಕ ಮೌಲ್ಯಮಾಪನ ಪರೀಕ್ಷೆ ನಡೆಸಲು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -