G20 ಸಭೆಗೆ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಗೈರು ವಿಚಾರವಾಗಿ ಮಾತನಾಡಿದ ಬಿಜೆಪಿ ಶಾಸಕ ಡಾ. ಅಶ್ವಥ್ ನಾರಾಯಣ, ಇಡೀ ವಿಶ್ವಮಟ್ಟದ ನಾಯಕರು ಬಂದಾಗ ಒಂದೇ ದೇಶ, ಒಂದೇ ಭೂಮಿ ಅಂತ ಮಾತನಾಡಬೇಕಿತ್ತು. ಇದು ಸಿದ್ದರಾಮಯ್ಯ ವೈಯಕ್ತಿಕ ವಿಚಾರ ಅಲ್ಲ. ಕರ್ನಾಟಕ ಇವರ ಮನೆ ಆಸ್ತಿ ಅಲ್ಲ. ಸಾರ್ವಜನಿಕ ಪ್ರತಿನಿಧಿಯಾಗಿ ರಾಜ್ಯದ ಹಿತ ಕಾಪಾಡಲು ಕೆಲಸ ಮಾಡಬೇಕು.
ಜವಾಬ್ದಾರಿಯಿಂದ ನಡೆದುಕೊಳ್ಳುವ ಕೆಲಸ ಮಾಡಬೇಕು. ವೈಯಕ್ತಿಕ ಪ್ರತಿಷ್ಠೆ ತೋರಿಸಿ ರಾಜಕೀಯ ಬೆರೆಸಿ ಇಂತಹ ಕೆಲಸ ಮಾಡುತ್ತಿದ್ದಾರೆ. ನೀವು ಜೀವಮಾನದಲ್ಲಿ ಇಂತಹ ಒಂದು ಕಾರ್ಯಕ್ರಮ ಮಾಡಿ., ನಿಮ್ಮ ಪಕ್ಷದಲ್ಲಿ ಹತ್ತಾರು ಸಿಎಂಗಳಿದ್ದಾರೆ. ನಿಮ್ಮ ಜೀವನದಲ್ಲಿ ಇಂತಹ ಒಂದು ಕಾರ್ಯಕ್ರಮ ಮಾಡಿ ತೋರಿಸಿ. ಕರ್ನಾಟಕಕ್ಕೂ ಅವಮಾನ ಮಾಡಬೇಡಿ ಎಂದರು.
ಬೆಳಗಾವಿ: 10 ದಿನಗಳ ಗಣಪತಿ ಭಕ್ತರ ಆತಿತ್ಯವನ್ನು ಸ್ವೀಕರಿಸಿ ಇಂದು ನಿರ್ಗಮನ ವಾಗುತ್ತಿದ್ದಾನೆ. ಗಣಪತಿ ಭಕ್ತರು ಹತ್ತು ದಿನಗಳವರೆಗೆ ವಿವಿಧ ಸೇವೆ ಸಲ್ಲಿಸಿ ಗಣಪತಿಯ ಅನುಗ್ರಹಕ್ಕೆ ಪಾತ್ರರಾಗಿರುತ್ತಾರೆ. ಬೆಳಗಾವಿ ನಗರಕ್ಕೆ ಗಣಪತಿ ಆಗಮನ...
ಬೆಳಗಾವಿ: ಭಾರತಕ್ಕೆ ನಾಲ್ವರು ಒಲಂಪಿಕ್ ಹಾಕಿ ಆಟಗಾರರನ್ನು ನೀಡಿದ್ದು, ಕರ್ನಾಟಕ ಸರಕಾರ ಬೆಳಗಾವಿಗೆ ಅಂತರಾಷ್ಟ್ರೀಯ ಗುಣಮಟ್ಟದ ಹಾಕಿ ಮೈದಾನವನ್ನು ಇನ್ನೂ ನೀಡಿಲ್ಲ, ಅದಕ್ಕಾಗಿ ಜಿಲ್ಲಾಡಳಿತ ಕೂಡಲೇ ಬೆಳಗಾವಿ ಹಾಕಿ ಸಂಸ್ಥೆಯ ಆಸ್ಟ್ರೋಟರ್ಫ್ ಮೈದಾನದ...