ತುಮಕೂರು : ಎರಡು ತಲೆ ಹಾವು ಮಾರಾಟಕ್ಕೆ ಯತ್ನಿಸಿದ ಪಿಡಿಒ ಸೇರಿ ಮೂವರನ್ನು ಬಂಧಿಸಿದ ಘಟನೆ ತುಮಕೂರು ಜಿಲ್ಲೆ ತಿಪಟೂರು ನಗರದಲ್ಲಿ ನಡೆದಿದೆ.
ಎರಡು ತಲೆ ಹಾವಿನಿಂದ ಐಶ್ವರ್ಯ ವೃದ್ಧಿಸುತ್ತದೆ. ಈ ಹಾವು ಕೋಟ್ಯಂತರ ಬೆಲೆ ಬಾಳುತ್ತದೆ ಎಂದು ಸುಳ್ಳು ಹೇಳಿ ಜನರನ್ನು ವಂಚಿಸಲು ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಧಿಕಾರಿಗಳು ಮೂವರನ್ನೂ ಬಂಧಿಸಿ, ಹಾವನ್ನು ವಶಕ್ಕೆ ಪಡೆದಿದ್ದಾರೆ.
ನಾಗರಘಟ್ಟ ಗ್ರಾಮ ಪಂಚಾಯಿತಿ ಪಿಡಿಒ ಕಾಂತರಾಜು ಹಾಗೂ ಸಹಚರರಾದ ಶೇಕ್ ಹುಸೇನ್, ಮೊಹ್ಮದ್ ಆರೀಫ್ ಎಂಬುವವರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ್ದ ಬೈಕ್ ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.