ಬೆಳಗಾವಿ : ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ಫುಲ್ ಆಯಕ್ಟೀವ್ ಆಗಿದ್ದು.ಲಕ್ಷ್ಮೀ ಹೆಬ್ಬಾಳ್ಕರ್ನ್ನು ಸೋಲಿಸಲು ಪಣ ತೊಟ್ಟಂತೆ ಕಾಣುತ್ತಿದೆ. ಬಡಸದ ಕೆ.ಹೆಚ್ ಗ್ರಾಮದಲ್ಲಿ ಛತ್ರಪತಿ ಶಿವಾಜಿ ಮಹಾರಾಜ ಯುವಕ ಮಂಡಳಿ ಉದ್ಘಾಟನೆ ಮಾಡುವ ಮೂಲಕ ಮರಾಠಾ ಸಮುದಾಯದ ಓಲೈಕೆಗೆ ರಮೇಶ್ ಜಾರಕಿಹೊಳಿ ತೀವ್ರ ಕಸರತ್ತು ನಡೆಸುತ್ತಿದ್ದಾರೆ.
ಇನ್ನು ಈ ಕುರಿತು ಬೆಳಗಾವಿಯಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ ಮೈದಾನ್ ಓಪನ್ ಹೈ, ಖುಲ್ಲಾ ಹೈ, ಹಮ್ ಬಿ ತಯಾರ್ ಹೈ, ಆಪ್ ಬೀ ಖುದೋ ಮೈದಾನ್ ಮೇ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಆಹ್ವಾನ ಮಾಡಿದ್ದಾರೆ.
ನಾನು ಎಲೆಕ್ಷನ್ ಗೆದ್ದ ಮಾರನೇ ದಿನದಿಂದ ಮುಂದಿನ ಎಲೆಕ್ಷನ್ಗೆ ತಯಾರಿ ನಡೆಸಿದ್ದೇನೆ. ಈಗ ಚುನಾವಣೆಗೆ 90 ದಿನ ಇದೆ ಎಂದು ತಯಾರಿ ನಡೆಸಿಲ್ಲ. ಈಗ ಬಂದು ನಾನು ಬಿಲ್ಲು, ಬಾಣ, ಬತ್ತಲಿಕೆ ಅಂತೆಲ್ಲ ಇಲ್ಲ. ಚುನಾವಣೆ ಗೆದ್ದ ಮಾರನೇ ದಿನವೇ ನನಗೆ ಪುನರ್ಜನ್ಮ ಕೊಟ್ಟ ಕ್ಷೇತ್ರ ಎಂದು ನನ್ನ ಹುಟ್ಟಿದ ದಿನಾಂಕ ಮತದಾರರಿಗೊಸ್ಕರ ಚೇಂಜ್ ಮಾಡಿಕೊಂಡೆ.
ಜನರ ಮನಸ್ಸು ಯಾವ ರೀತಿ ಗೆಲ್ಲಬೇಕೆಂದು ನಾಲ್ಕೂವರೆ ವರ್ಷಗಳಿಂದ ಕೆಲಸ ಮಾಡಿಕೊಂಡು ಬಂದಿದ್ದೇನೆ. ಗ್ರಾಮೀಣ ಕ್ಷೇತ್ರದ ಮೇಲೆ ಹಲವರ ಕಣ್ಣು ಹಾಕಿದ್ದಾರೆ ಎಂದು ಭವಿಷ್ಯ ಅಂತೂ ನಾನು ಹೇಳಲ್ಲ. ಮುಂದೆ ನೀವೇ ನೋಡ್ತಿರಿಲ್ಲ ಎಲೆಕ್ಷನ್ ರಿಸಲ್ಟ್, ಇನ್ನೂ ಕಾವು ಏರಬೇಕು ಎಂದು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿಕೆ ನೀಡಿದ್ದಾರೆ.
ಇನ್ನು ಎಂಎಲ್ಸಿ ಚನ್ನರಾಜ ಹಟ್ಟಿಹೊಳಿ ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಪಾರ್ಟ್ ಟೈಮ್ ಪ್ಲೇಯರ್ ಎಂದಿದ್ದಾರೆ. ಅಕ್ಕ ಲಕ್ಷ್ಮೀ ಹೆಬ್ಬಾಳ್ಕರ್ ಪಾರ್ಟ್ ಟೈಮ್ ಪ್ಲೇಯರ್ ಅಲ್ಲ, ಫುಲ್ ಟೈಮ್ ಪ್ಲೇಯರ್. ನಮ್ಮ ಅಕ್ಕ ಹೋರಾಟದಿಂದ ರಾಜಕೀಯಕ್ಕೆ ಬಂದವರು.
ನಿತ್ಯ ಜನರ ಕಷ್ಟಗಳಿಗೆ ಸ್ಪಂದನೆ ಮಾಡುವ ಕೆಲಸಗಾರರು. ದಿನವೂ ಜನರಿಗೆ ಸಿಗುತ್ತಾರೆ, ಕೆಲಸ ಮಾಡುತ್ತಾರೆ. ಲಕ್ಷ್ಮೀ ಹೆಬ್ಬಾಳ್ಕರ್ ಅಂತ ಅಷ್ಟೇ ಅಲ್ಲ ರಾಜ್ಯದಲ್ಲಿ ಕೆಲಸಗಾರರಿಗೆ ಯಾವತ್ತೂ ಸೋಲಿಲ್ಲ ಎಂದು ಪರೋಕ್ಷವಾಗಿ ರಮೇಶ್ ಜಾರಕಿಹೊಳಿಗೆ ಟಾಂಗ್ ಕೊಟ್ಟಿದ್ದಾರೆ.