ಹುಬ್ಬಳ್ಳಿ : ಗಣೇಶೋತ್ಸವ ಆಚರಣೆಗೆ ಹೈಕೋರ್ಟ್ ಅನುಮತಿ ನೀಡಿದ ಹಿನ್ನೆಲೆ ಈದ್ಗಾ ಮೈದಾನದಲ್ಲಿ ಹಿಂದೂ ಪರ ಸಂಘಟನೆಗಳು ಬೆಳಗ್ಗೆ 7.30ಕ್ಕೆ ಸರಳವಾಗಿ ಗಣೇಶನ ಮೂರ್ತಿಯನ್ನು ತಂದು ಪ್ರತಿಷ್ಠಾಪನೆ ಮಾಡಿದ್ದಾರೆ.
ಮಧ್ಯಾಹ್ನ 1 ಗಂಟೆಗೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲು ಸಮಯ ನಿಗದಿಯಾಗಿತ್ತು. ಆದರೆ ಬೆಳಿಗ್ಗೆ 7.30ಕ್ಕೆ ಗಣೇಶ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ವಿವಾದವನ್ನು ಇತ್ಯರ್ಥಪಡಿಸಿದ ಹೈಕೋರ್ಟ್, ರಾಣಿ ಚೆನ್ನಮ್ಮ ಗಣೇಶೋತ್ಸವ ಮಹಾಮಂಡಳಿ ಸಮಿತಿಗೆ ಗಣೇಶೋತ್ಸವದ ಜವಾಬ್ದಾರಿಯನ್ನು ನೀಡಿದೆ. ಈ ನಿಟ್ಟಿನಲ್ಲಿ ಇಂದಿನಿಂದ 3 ದಿನಗಳ ಕಾಲ ಮೈದಾನದಲ್ಲಿ ಗಣೇಶನನ್ನು ಪ್ರತಿಷ್ಠಾನ ಮಾಡಲಿರುವ ಮಹಾಮಂಡಳಿ ಸಮಿತಿಯು ಎಲ್ಲ ಸಿದ್ಧತೆಗಳನ್ನು ನಡೆಸಿಕೊಂಡಿದೆ.