spot_img
spot_img
spot_img
34.1 C
Belagavi
Monday, May 29, 2023
spot_img

BIG NEWS : ನಾಳೆಯೂ ಕೂಡ ಸುಪ್ರೀಂ ಕೋರ್ಟ್‌ನಲ್ಲಿ ಗಡಿ ವಿವಾದದ ವಿಚಾರಣೆ ಇಲ್ಲ

ಬೆಳಗಾವಿ : ಗಡಿ ವಿವಾದದ ಬಗ್ಗೆ ನಾಳೆ ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಿಗದಿಯಾಗಿತ್ತು, ಆದರೆ ನಾಳೆ ವಿಚಾರಣೆ ನಡೆಯುವುದಿಲ್ಲ ಎಂಬ ಮಾಹಿತಿ ಹೊರಬಿದ್ದಿದೆ.

ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ತೀರ್ಪು ಪ್ರಕಟಿಸಬೇಕಾಗಿದ್ದ ನ್ಯಾಯಮೂರ್ತಿ ಕೆ.ಎಂ ಜೋಸೆಫ್ ಸಾಂವಿಧಾನಿಕ ಪೀಠದಲ್ಲಿ ನಿರಂತರ ಕೆಲಸವಿರುದರಿಂದ ನಾಳೆ ವಿಚಾರಣೆ ನಡೆಸಲಾಗುತ್ತಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ. ಆದ್ದರಿಂದ ನಾಳೆಯೂ ಕೂಡ ಬೆಳಗಾವಿ ಗಡಿ ವಿವಾದದ ತೀರ್ಪು ಪ್ರಕಟವಾಗುವುದಿಲ್ಲ.

ಸುಪ್ರೀಂಕೋರ್ಟ್ ತೀರ್ಪಿನ ಹಿನ್ನೆಲೆ ಮುನ್ನೆಚ್ಚರಿಕ ಕ್ರಮವಾಗಿ ಇಂದು ಎಡಿಜಿಪಿ ಅಲೋಕ್ ಕುಮಾರ್ ನೇತೃತ್ವದಲ್ಲಿ ಎರಡೂ ರಾಜ್ಯಗಳ ಉನ್ನತ ಪೊಲೀಸ್ ಅಧಿಕಾರಿಗಳ ಸಭೆ ನಡೆಸಲಾಗಿತ್ತು.

ಸಭೆ ಬಳಿಕ ಮಾತನಾಡಿದ್ದ ಅಲೋಕ್ ಕುಮಾರ್, ಸುಪ್ರೀಂಕೋರ್ಟ್ ನಲ್ಲಿ ನಾಳೆ ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಬಗ್ಗೆ ತೀರ್ಪು ಪ್ರಕಟಿಸಿದರೂ ಏನೂ ಗಲಾಟೆ ಆಗಬಾರದು. ಹೀಗಾಗಿ ಪೊಲೀಸ್ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ತೆಗೆದುಕೊಂಡಿದೆ.ಜನರಿಗೆ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಲು ಕಾರ್ಯತಂತ್ರ ರೂಪಿಸುವ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು ಎಂದು ಅವರು ತಿಳಿಸಿದ್ದರು.

 

Related News

ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಪ್ರಧಾನಿ ಮೋದಿ ಅವರು ಈಶಾನ್ಯ ಭಾರತದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ರೈಲಿಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಿದರು. ವಂದೇ ಭಾರತ್ ಪಶ್ಚಿಮ ಬಂಗಾಳದ ನ್ಯೂ ಜಲ್ಪೈಗುರಿ ನಿಲ್ದಾಣದಿಂದ ಅಸ್ಸಾಂನ ಗುವಾಹಟಿಗೆ ಹೊರಟಿದೆ. ಈ...

ಮಣಿಪುರದಲ್ಲಿ ಮತ್ತೆ ತಲೆ ಎತ್ತಿದ ಹಿಂಸಾಚಾರ ಪೊಲೀಸ್‌ ಸೇರಿದಂತೆ ಐವರು ಸಾವು

ಇಂಫಾಲ್‌: ಕಳೆದ ಕೆಲವು ದಿನಗಳಿಂದ ಸಹಜ ಸ್ಥಿತಿಗೆ ಮರಳುತ್ತಿದ್ದ ಮಣಿಪುರದಲ್ಲಿ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಭಾನುವಾರ ಮಣಿಪುರದಲ್ಲಿ ನಡೆದ ಹಿಂಸಾಚಾರದಲ್ಲಿ ಪೊಲೀಸ್‌ ಸೇರಿದಂತೆ ಐವರು ಸಾವನ್ನಪ್ಪಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಇದರಿಂದಾಗಿ ಕಳೆದ ಒಂದು...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -