ವಿಜಯಪುರ: ಬೈಕ್ ಹಾಗೂ ಟಿಪ್ಪರ್ ಮಧ್ಯೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಇಂಡಿ ತಾಲೂಕಿನ ಹಿರೇರೂಗಿ ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿಗಳನ್ನು ವಿಜಯಪುರದ ಕಾಲೇಬಾಗ್ ನಗರದ ನಿವಾಸಿಗಳಾದ ಕಿರಣ ಕಟ್ಟಿಮನಿ (22), ರಾಜೂ ಗುನ್ನಾಪುರ (24) ಎಂದು ಪೊಲೀಸರು ಗುರುತಿಸಿದ್ದಾರೆ.
ಭಾನುವಾರ ಸಂಜೆ, ಬೈಕ್ ಸವಾರರು ವೇಗವಾಗಿ ಚಲಾಯಿಸುತ್ತಿದ್ದಾಗ ಎದುರಿಗೆ ಬಂದ ಟಿಪ್ಪರ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಹೊರ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.