ಬೆಂಗಳೂರು: ವಿಧಾನಸಭೆ ಮತ್ತು ವಿಧಾನ ಪರಿಷತ್ ವಿಪಕ್ಷ ನಾಯಕರ ನೇಮಕಾತಿ ವಿಚಾರವಾಗಿ ಬೆಂಗಳೂರಿನಲ್ಲಿ ಇಂದು (ನ.17) ಸಂಜೆ 6 ಗಂಟೆಗೆ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ.
ಸಭೆಯಲ್ಲಿ ಹೈಕಮಾಂಡ್ ವೀಕ್ಷಕರು ವಿಪಕ್ಷ ನಾಯಕರ ಹೆಸರು ಘೋಷಣೆ ಮಾಡಲಿದ್ದಾರೆ. ವಿಧಾನಸಭೆಗೆ ಒಕ್ಕಲಿಗ ಮತ್ತು ವಿಧಾನ ಪರಿಷತ್ಗೆ ಹಿಂದುಳಿದ ವರ್ಗಕ್ಕೆ ಅವಕಾಶ ಸಿಗುವ ಸಾಧ್ಯತೆ ಇದೆ.
ವಿಧಾನಸಭೆಗೆ ರೇಸ್ನಲ್ಲಿ ಶಾಸಕರಾದ ಆರ್. ಅಶೋಕ್, ಡಾ. ಅಶ್ವಥ್ ನಾರಾಯಣ ಮತ್ತು ಅರಗ ಜ್ಞಾನೇಂದ್ರ ಹೆಸರು ಇದೆ. ವಿಧಾನ ಪರಿಷರ್ಗೆ ಕೋಟ ಶ್ರೀನಿವಾಸ ಪೂಜಾರಿ, ತೇಜಸ್ವಿನಿ ಗೌಡ, ಛಲವಾದಿ ನಾರಾಯಣಸ್ವಾಮಿ ಮತ್ತು ಭಾರತಿ ಶೆಟ್ಟಿ ಹೆಸರು ಒಬಿಸಿ ಕೋಟದಲ್ಲಿ ಸುನಿಲ್ ಕುಮಾರ್ ರೇಸ್ನಲ್ಲಿದ್ದಾರೆ. ಬಹುತೇಕ ಆರ್. ಅಶೋಕ್ ಮತ್ತು ಕೋಟ ಶ್ರೀನಿವಾಸ ಪೂಜಾರಿ ವಿಪಕ್ಷ ನಾಯಕರಾಗಿ ಆಯ್ಕೆ ಸಾಧ್ಯತೆ ಇದೆ. ಬಿಜೆಪಿ ಶಾಸಕಾಂಗ ಸಭೆಗೆ ಹೈಕಮಾಂಡ್ ವೀಕ್ಷಕರಾಗಿ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆಗಮಿಸುತ್ತಿದ್ದಾರೆ.
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ,ರಕ್ಷಣಾ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದು...
ಉತ್ತರಕಾಶಿಯ ಸಿಲ್ಕ್ಯಾರ್ ಸುರಂಗದಲ್ಲಿ 17 ದಿನಗಳ ಕಾಲ 41 ಕಾರ್ಮಿಕರು ಸಿಲ್ಕಿರುವ ಕಾರ್ಮಿಕರನ್ನು ಸುರಕ್ಷಿತವಾಗಿ ಹೊರ ತೆಗೆದಿರುವ ಬೆಳಗಾವಿಯ ಹೆಮ್ಮೆಯ L&D ಕಂಪನಿಯ ಉದ್ಯೋಗಿ ಬಾಲಚಂದ್ರ ಕಿಲಾರಿ ದುಡಪಿ ಕೇದಾರ, ರಕ್ಷಣಾ ಕಾರ್ಯಾಚರಣೆಯಲ್ಲಿ...