spot_img
spot_img
spot_img
24.8 C
Belagavi
Thursday, June 1, 2023
spot_img

ಪ್ರಧಾನಿ ವಿರುದ್ಧ ಅವಹೇಳನ : ಬೆಳಗಾವಿಯಲ್ಲಿ ಬಿಜೆಪಿ ಪ್ರತಿಭಟನೆ

ಬೆಳಗಾವಿ : ನಗರದಲ್ಲಿಂದು ಭಾರತೀಯ ಜನತಾ ಪಕ್ಷದ ಯುವ ಮೋರ್ಚಾ ವತಿಯಿಂದ ಪಾಕಿಸ್ತಾನದ ವಿದೇಶಾಂಗ ಸಚಿವರೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಈ ವೇಳೆ ಉತ್ತರ ಮತಕ್ಷೇತ್ರದ ಶಾಸಕ ಅನಿಲ ಬೆನಕೆ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಕಿಸ್ತಾನ ತನ್ನ ಅಸ್ತಿತ್ವ ವನ್ನು ಕಳೆದುಕೊಳ್ಳುವಂತ ಸ್ಥಿತಿಯಲ್ಲಿದೆ.

ಪಾಕಿಸ್ತಾನ ಅಂದರೆ ಭಯೋತ್ಪಾದಕರ ನಿರ್ಮಾಣ ಮಾಡುವ ಫ್ಯಾಕ್ಟರಿ ಎಂದು ಇಡೀ ಪ್ರಪಂಚಕ್ಕೆ ತಿಳಿದಿರುವ ವಿಷಯ. ಈಗಾಗಲೇ ಭಾರತ ಹಲವಾರು ಬಾರಿ ಪಾಕಿಸ್ತಾನಕ್ಕೆ ಪಾಠ ಕಲಿಸಿದೆ ಹೀಗೂ ಕೂಡ ಪಾಕಿಸ್ತಾನ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಪ್ರಯತ್ನಿಸಬೇಕೆಂದು ಸಲಹೆ ನೀಡಿದರು.

ಇನ್ನು ಮಾಜಿ ಶಾಸಕ ಸಂಜಯ್ ಪಾಟೀಲ್ ಮಾತನಾಡಿ ಪಾಕಿಸ್ತಾನ ನಾಯಿ ಬಾಲ ಹಾಗೆ ಡೊಂಕು ಇದನ್ನ ಎಷ್ಟು ಸರಿ ಮಾಡಿದರು ಅದು ಸರಿಯಾಗುವುದಿಲ್ಲ. ಒಸಮಾ ಬಿನ್ ಲಾಡೆನ್ ಅಂತ ಕುಖ್ಯಾತ ಭಯೋತ್ಪಾದಕ ಅಡಗಿಸಿ ಇಟ್ಟುಕೊಂಡಿದ್ದಂತ ಪಾಕಿಸ್ತಾನ ಭಾರತದ ಕುರಿತು ಮಾತನಾಡಬಾರದು ಎಂದು ಕಿಡಿಕಾರಿದ್ದಾರೆ.

ಈ ಸಂದರ್ಭದಲ್ಲಿ ಭಾರತೀಯ ಜನತಾ ಪಕ್ಷದ ಮಹಾನಗರ ಜನರಲ್ ಸೆಕ್ರೆಟರಿ ಆದ ಮುರುಘೇಂದ್ರ ಗೌಡ ಪಾಟೀಲ್ ಮಹಾನಗರ ಪಾಲಿಕೆಯ ಸದಸ್ಯರಗಳಾದ ಹನುಮಂತ ಕೊಂಗಾಲಿ, ಶ್ರೇಯಸ್ ನ ಕಾಡಿ ಹಾಗೂ ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -