spot_img
spot_img
spot_img
36.1 C
Belagavi
Tuesday, June 6, 2023
spot_img

ಗಡಿ ವಿವಾದ : ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕರವೇಯಿಂದ ಪ್ರತಿಭಟನೆಗೆ ಕರೆ 

ಬೆಳಗಾವಿ: ಬೆಳಗಾವಿ ಗಡಿ ವಿವಾದ ತಾರಕಕ್ಕೇರಿದೆ. ಮಹಾರಾಷ್ಟ್ರ ಸಚಿದ್ವಯರು ಬೆಳಗಾವಿ ಭೇಟಿ ರದ್ದುಗೊಂಡ ಬೆನ್ನಲ್ಲೇ, ಗಡಿ ಭಾಗದಲ್ಲಿ ಕರವೇ ಪ್ರತಿಭಟನೆಗೆ ಇಳಿದಿದೆ. ಅಲ್ಲದೇ ನಾಳೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿಯೂ ಕರ್ನಾಟಕ ರಕ್ಷಣಾ ವೇದಿಕೆಯಿಂದ ಪ್ರತಿಭಟನೆ ಕರೆ ನೀಡಲಾಗಿದೆ.

ಮಹರಾಷ್ಟ್ರ ಸರ್ಕಾರದ ವಿರುದ್ಧ ನಾಳೆ ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಕರವೇಯಿಂದ ಪ್ರತಿಭಟನೆ ನಡೆಸಲಾಗುತ್ತದೆ. ಈ ಮೂಲಕ ಮಹಾರಾಷ್ಟ್ರ ಕ್ಯಾತೆಗೆ ತಕ್ಕ ಉತ್ತರವನ್ನು ನೀಡಲಿದ್ದೇವೆ ಎಂದು ಹೇಳಿದರು.

ಮತ್ತೊಂದೆಡೆ ಮಹಾರಾಷ್ಟ್ರ ಸಚಿವರು ಇಂದು ಬೆಳಗಾವಿಗೆ ಆಗಮಿಸುತ್ತೇವೆ ಎಂದು ಘೋಷಿಸಿದ್ದಂತ ಭೇಟಿಯನ್ನು ರದ್ದುಗೊಳಿಸಿರೋದಕ್ಕೆ ಶಿವಸೇನೆ ಸಿಡಿದೆದ್ದಿದೆ. ಹೀಗಾಗಿ ಇಂದು ಸಂಜೆ ಬೆಳಗಾವಿ ಗಡಿಯನ್ನು ಪ್ರವೇಶಿಸುವುದಾಗಿ ಹೇಳಿದೆ.

ಈ ಬಗ್ಗೆ ಮಾತನಾಡಿರುವಂತ ಕೊಲ್ಹಾಪುರದ ಶಿವಸೇನೆ ಜಿಲ್ಲಾಧ್ಯಕ್ಷ ವಿಜಯ್ ದೇವಣೆ ಅವರು, ಇಂದು ಸಂಜೆ 5 ಗಂಟೆಗೆ ಕೊನಗನೋಳ್ಳಿ ಚೆಕ್ ಪೋಸ್ಟ್ ಗೆ ಬರುತ್ತೇವೆ. ಸಚಿವರು ಎರಡು ಬಾರಿ ಬೆಳಗಾವಿಗೆ ಬರೋದಾಗಿ ಹೇಳಿ, ರದ್ದು ಮಾಡಿದ್ದಾರೆ. ಮಹಾ ಸಚಿದ್ವಯರ ನಿಲುವು ಸಂಶಯಾಸ್ವದವಾಗಿದೆ. ಈ ಹಿನ್ನಲೆಯಲ್ಲಿಯೇ ಇಂದು ಸಂಜೆ ನಾವು ಟೋಲ್ ಗೇಟ್ ಬಳಿ ಬರುತ್ತೇವೆ ಎಂದು ತಿಳಿಸಿದ್ದಾರೆ.

Related News

ಸ್ಲೀಪರ್ ಕೋಚ್ ಬಸ್ಸಿನಲ್ಲಿ ವಿಷ ಕುಡಿದು ಪ್ರೇಮಿಗಳು ಪ್ರಿಯತಮೆ ಸಾವು

ಹಾವೇರಿ: ಸ್ಲೀಪರ್ ಕೋಚ್ ಬಸ್ಸಿ ನಲ್ಲಿ ವಿಷ ಕುಡಿದು ಪ್ರೇಮಿಗಳು ಮಲಗಿದ್ದು, ಯುವತಿ ಮೃತಪಟ್ಟ ಘಟನೆ ರಾಣೆಬೆನ್ನೂರು ನಗರದ ಚಳಗೇರಿ ಟೋಲ್ ಬಳಿ ಇರುವ ಗ್ರೀನ್ ಪ್ಯಾಲೇಸ್ ಹೋಟೆಲ್ ಬಳಿ ನಡೆದಿದೆ. ಹೇಮಾ ರಾಮಕೃಷ್ಣಪ್ಪ (20)...

ಎಲ್ಲ ನಾಯಕರ ಸಹಮತದ ಆಧಾರದ ಮೇಲೆ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು

ಬೆಳಗಾವಿ: ಅಭಿವೃದ್ಧಿ ದೃಷ್ಟಿಯಿಂದ ಅಖಂಡ ಬೆಳಗಾವಿ ಜಿಲ್ಲಾ ವಿಭಜನೆ ಆಗಬೇಕು. ಆದರೆ ಜಿಲ್ಲೆಯ ಎಲ್ಲ ನಾಯಕರ ಸಹಮತದ ಆಧಾರದ ಮೇಲೆ ಜಿಲ್ಲಾ ವಿಭಜನೆ ಆಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -