ಬೆಳಗಾವಿ : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದದ ಹೊತ್ತಲ್ಲೇ ಮಹಾರಾಷ್ಟ್ರ ಗಡಿ ಸಲಹಾ ಸಮಿತಿ ಅಧ್ಯಕ್ಷ ಧೈರ್ಯಶೀಲ ಮಾನೆ ನಾಳೆ ಬೆಳಗಾವಿಗೆ ಭೇಟಿ ನೀಡಲಿದ್ದು, ಮಹಾ ಮೇಳಾವ್ ನಲ್ಲಿ ಭಾಗಿಯಾಗಲಿದ್ದಾರೆ.
ನಾಳೆಯಿಂದ ಚಳಿಗಾಲದ ಅಧಿವೇಶನ ನಡೆಯಲಿದ್ದು, ಈ ಹೊತ್ತಲ್ಲೇ ಮಹಾರಾಷ್ಟ್ರ ಏಕೀಕರಣ ಸಮಿತಿಯಿಂದ ಮಹಾ ಮೇಳಾವ್ ಆಯೋಜಿಸಲಾಗಿದೆ. ಮಹಾ ಮೇಳಾವ್ ನಲ್ಲಿ ಸಂಸದ ಧೈರ್ಯಶೀಲ ಮಾನೆ ಭಾಗಿಯಾಗಲಿದ್ದಾರೆ.
ಬೆಳಗಾವಿ ನಗರದ ವಾಕ್ಸಿನ್ ಡಿಪೋದಲ್ಲಿ ಮಹಾ ಮೇಳಾವ್ ಕಾರ್ಯಕ್ರಮ ಆಯೋಜಿಸಲಾಗಿದ್ದು, ಸಮಾವೇಶದಲ್ಲಿ ಮಾನೆ ಭಾಷಣ ಮಾಡಲಿದ್ದಾರೆ. ಹೀಗಾಗಿ ತಮಗೆ ವೈ ಪ್ಲಸ್ ಭದ್ರತೆ ನೀಡುವಂತೆ ಬೆಳಗಾವಿ ನಗರ ಪೊಲೀಸ್ ಕಮಿಷನರ್ ಗೆ ಅರ್ಜಿ ಸಲ್ಲಿಸಿದ್ದಾರೆ.