spot_img
spot_img
spot_img
spot_img
spot_img
spot_img
spot_img
18.8 C
Belagavi
Tuesday, December 5, 2023
spot_img

ಕಾಮಗಾರಿ ವಿಳಂಬ: ಬಾಗಲಕೋಟೆ ನಗರದ ವ್ಯಾಪಾರಸ್ಥರು ಆಕ್ರೋಶ

ಬಾಗಲಕೋಟೆ: ನಗರದ ವಿದ್ಯಾಗಿರಿಯ 19ನೇ ಕ್ರಾಸ್ ನಲ್ಲಿ ನಡೆಯುತ್ತಿರುವ ರಸ್ತೆ ಅಭಿವೃದ್ಧಿ ಕಾಮಗಾರಿ ಅತೀ ಮಂದಗತಿಯಲ್ಲಿ ಸಾಗುತ್ತಿರುವುದಕ್ಕೆ ನಗರದ ವ್ಯಾಪಾರಸ್ಥರು ಆಕ್ರೋಶ ವ್ಯಕ್ತಪಡಿಸಿ ಬಾಗಲಕೋಟೆ  ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ನೀಡಿದ್ದಾರೆ.

ಬಾಗಲಕೋಟೆಯ ವಿದ್ಯಾಗಿರಿಯ 19ನೇ ಕ್ರಾಸ್‌ನಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿ ಸುಮಾರು ಐದು ತಿಂಗಳಿನಿಂದ ಮಂದಗತಿಯಲ್ಲಿ ನಡೆಯುತ್ತಿದೆ. ಅಂದಾಜು 1 ಕಿಲೋ ಮೀಟರ್ ಅಂತರದ ಈ ರಸ್ತೆ ನಿರ್ಮಾಣ ಕಾಮಗಾರಿ ಸುಮಾರು ಐದು ತಿಂಗಳಾದರೂ ಪೂರ್ಣಗೊಂಡಿಲ್ಲ. ಇದರಿಂದ ನಮ್ಮ ವ್ಯಾಪಾರ ವಹಿವಾಟಿಗೆ ಸಮಸ್ಯೆಯಾಗುತ್ತಿದೆ ಎಂದು ವ್ಯಾಪಾರಸ್ಥರು ಗುತ್ತಿಗೆದಾರರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ನಿತ್ಯ ನಾವು ವ್ಯಾಪಾರ- ವಹಿವಾಟನ್ನೇ ಅವಲಂಬಿಸಿ ಬದುಕು ಸಾಗಿಸುತ್ತಿದ್ದೇವೆ. ಸದ್ಯ ರಸ್ತೆ ಕಾಮಗಾರಿಯಿಂದ ಅಂಗಡಿಗಳು ಬಂದ್ ಆಗಿ ವ್ಯಾಪಾರವಿಲ್ಲದೇ ನಮ್ಮ ಬದುಕು ದುಸ್ತರವಾಗಿದೆ. ನಾವೆಂದೂ ಅಭಿವೃದ್ಧಿಗೆ ಅಡ್ಡಿಪಡಿಸಿಲ್ಲ. ಸಾರ್ವಜನಿಕರ ಉದ್ದೇಶಕ್ಕಾಗಿ ನಡೆಯುವ ಅಭಿವೃದ್ದಿ ಕಾಮಗಾರಿಗೆ ಸಹಕರಿಸಬೇಕೆಂಬ ಕಾರಣಕ್ಕಾಗಿಯೇ ಕಳೆದ ಐದಾರು ತಿಂಗಳಿನಿಂದ ಸಹಕರಿಸುತ್ತಾ ಬಂದಿದ್ದೇವೆ. ಆದರೆ ಈಗ ರಸ್ತೆ ಮಾಡುವುದಕ್ಕಾಗಿ ಕಳೆದ 20 ದಿನಗಳಿಂದ ರಸ್ತೆಯನ್ನು ಬಂದ್ ಮಾಡಿದ್ದರಿಂದ ನಮ್ಮ ವ್ಯಾಪಾರ- ವಹಿವಾಟು ಸಂಪೂರ್ಣ ಸ್ಥಗಿತವಾಗಿದೆ ಎಂದು ದೂರಿದ್ದಾರೆ.

ಪ್ರಮುಖ ರಸ್ತೆಯನ್ನು ಬಂದ್ ಮಾಡಿ ಕೆಲಸ ಮಾಡುವಾಗ ವೇಗದಲ್ಲಿ ಕಾಮಗಾರಿ ಮುಂದುವರಿಯಲಿ ಎಂದು ನಾವು ಭಾವಿಸಿದ್ದೆವು. ಆದರೆ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವುದರಿಂದ ಇತ್ತೀಚಿಗಿನ ಗಣೇಶ ಚತುರ್ಥಿಯ ವ್ಯಾಪಾರವನ್ನು ಈ ಕಾಮಗಾರಿ ಈಗಾಗಲೇ ನುಂಗಿ ಹಾಕಿದೆ. ಈಗಲೂ ಕಾಮಗಾರಿ ವಿಳಂಬವಾದರೆ ಮುಂಬರುವ ಸಾಲು, ಸಾಲು ಹಬ್ಬಗಳಿಗೂ ನಮಗೆ ವ್ಯಾಪಾರ ಇಲ್ಲದಂತಾಗುತ್ತದೆ. ಅದಕ್ಕಾಗಿ ಕಾಮಗಾರಿಗೆ ವೇಗ ನೀಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ಗುತ್ತಿಗೆದಾರರಿಗೆ ಸೂಚನೆ ನೀಡಬೇಕು ಎಂದು ಜಿಲ್ಲಾಧಿಕಾರಿ ಕೆ. ಜಾನಕಿಯವರಿಗೆ ನಗರದ ವ್ಯಾಪಾರಸ್ಥರು ಮನವಿ ಮಾಡಿದರು.

Related News

2030 ರೊಳಗೆ ಅಪೌಷ್ಠಿಕತೆ ಗಣನೀಯ ಪ್ರಮಾಣದಲ್ಲಿ ನಿಯಂತ್ರಣ-ಸಚಿವ ದಿನೇಶ್ ಗುಂಡೂರಾವ್

ಸುವರ್ಣ ಸೌಧ ಬೆಳಗಾವಿ: ಮಹಿಳೆಯರು ಮತ್ತು ಮಕ್ಕಳಲ್ಲಿರುವ ರಕ್ತಹೀನತೆ(ಅನೀಮಿಯಾ)ವನ್ನು 2030 ರೊಳಗೆ ಸಂಪೂರ್ಣವಾಗಿ ನಿವಾರಿಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ವಿಧಾನಪರಿಷತ್ತಿನ ಶೂನ್ಯ ವೇಳೆಯಲ್ಲಿ ಸದಸ್ಯ ನಾಗರಾಜ್...

ಆನೆ ಹಾವಳಿ ನಿಯಂತ್ರಣ ಸಿಬ್ಬಂದಿಗೆ ಹೆಚ್ಚಿನ ತರಬೇತಿ-ಸಚಿವ ಈಶ್ವರ ಖಂಡ್ರೆ

ಸುವರ್ಣ ಸೌಧ ಬೆಳಗಾವಿ: ರಾಜ್ಯದಲ್ಲಿ ಈಗಾಗಲೇ ಏಳು ಆನೆ ಕಾರ್ಯಪಡೆ ತಂಡಗಳನ್ನು ರಚಿಸಲಾಗಿದ್ದು, ಆನೆ ಹಿಡಿಯಲು ನಿಯೋಜಿಸಿರುವ ಸಿಬ್ಬಂದಿಗಳಿಗೆ ಹೆಚ್ಚಿನ ತರಬೇತಿ ನೀಡಲಾಗುವುದ ಎಂದು ಅರಣ್ಯ ,ಜೈವಿಕ ಮತ್ತು ಪರಿಸರ ಸಚಿವ ಈಶ್ವರ...

Latest News

- Advertisement -
- Advertisement -
- Advertisement -
- Advertisement -