spot_img
spot_img
spot_img
32.1 C
Belagavi
Tuesday, June 6, 2023
spot_img

ಗಡಿ ವಿವಾದ ವಾದ – ವಿವಾದ : ವಿರೋಧ ಪಕ್ಷಗಳಿಗೆ ಸಿಎಂ ಪತ್ರ 

ಬೆಂಗಳೂರು: ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ ಮತ್ತೆ ತಾರಕಕ್ಕೇರಿದೆ. ಸ್ವಾತಂತ್ರ್ಯ ನಂತರ ಶುರುವಾದ ಬೆಳಗಾವಿ ಮಹಾರಾಷ್ಟ್ರ ಗಡಿ ವಿವಾದ ಸಂಬಂಧ ಇಂದು ಸುಪ್ರೀಂಕೋರ್ಟ್ ನಲ್ಲಿ ವಿಚಾರಣೆ ನಡೆಯಲಿದೆ.

ಈ ಹಿನ್ನೆಲೆ ವಿಪಕ್ಷನಾಯಕರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪತ್ರ ಬರೆದಿದ್ದು ಸುಪ್ರೀಂ ಕೋರ್ಟ್ ವಿಚಾರಣೆಯ ಬಳಿಕ ಶೀಘ್ರ ಸಭೆ ನಿಗದಿಗೆ ಚಿಂತಿಸಿದ್ದಾರೆ.

ಬೊಮ್ಮಾಯಿ ವಿಧಾನಸಭೆಯ ವಿಪಕ್ಷ ನಾಯಕರಾದ ಸಿದ್ದರಾಮಯ್ಯ ಹಾಗೂ ಪರಿಷತ್ ವಿಪಕ್ಷನಾಯಕ ಹರಿಪ್ರಸಾದ್‌ಗೆ ಬರೆದ ಪತ್ರದಲ್ಲಿ ಸರ್ಕಾರ ತೆಗೆದುಕೊಂಡ‌ ನಿಲುವು, ವಕೀಲರ ತಂಡ ರಚನೆ ಹಾಗೂ ಕೈಗೊಂಡ ಕ್ರಮ ಕುರಿತು ಪತ್ರದ ಮೂಲಕ ಲಿಖಿತ ಮಾಹಿತಿ ನೀಡಿದ್ದಾರೆ.

ಸತತ 18 ವರ್ಷಗಳ ಬಳಿಕ ಮತ್ತೆ ಕಾನೂನು ಸಮರ ಶುರುವಾಗಿದೆ. 1956ರಿಂದಲೂ ಮಹಾರಾಷ್ಟ್ರ ಸರ್ಕಾರ ನಾಡದ್ರೋಹಿ ಎಂಇಎಸ್​ಗೆ ಪ್ರಚೋದನೆ ನೀಡುತ್ತಲೇ ಬಂದಿದೆ. ಬೆಳಗಾವಿ ಸೇರಿ ಕರ್ನಾಟಕದ 4 ಜಿಲ್ಲೆಯ 865 ಹಳ್ಳಿಗಳು ಮಹಾರಾಷ್ಟ್ರಕ್ಕೆ ಸೇರಬೇಕು ಎಂದು 2004ರಲ್ಲಿ ಮಹಾರಾಷ್ಟ್ರ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಈ ಪ್ರಕರಣದ ಅಂತಿಮ ವಿಚಾರಣೆ ಇಂದು ಸುಪ್ರೀಂಕೋರ್ಟ್‌ನಲ್ಲಿ ನಡೆಯಲಿದೆ. ಕರ್ನಾಟಕ ಹಾಗೂ ಮಹಾರಾಷ್ಟ್ರ ಎರಡೂ ಸರ್ಕಾರಗಳ ವಾದ ಪ್ರತಿವಾದವನ್ನು ಇಂದು ಸುಪ್ರೀಂಕೋರ್ಟ್‌ ಆಲಿಸಲಿದೆ.

ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂಧೆ ಅಧಿಕಾರಕ್ಕೆ ಬರುತ್ತಿದ್ದಂತೆ ಬೆಳಗಾವಿ ಗಡಿ ಕ್ಯಾತೆ ಕೆಣಕಿದ್ರು. ಕಾನೂನು ಹೋರಾಟದ ಸುಳಿವು ನೀಡಿದ್ದರು. ಇದೀಗ ಮಹಾರಾಷ್ಟ್ರ ಪರ ವಾದಿಸಲು ಕಾನೂನು ತಜ್ಞ ವೈದ್ಯನಾಥನ್​ರನ್ನ ನೇಮಿಸಿದ್ದಾರೆ.

ಇತ್ತ ಕರ್ನಾಟಕವೂ ಸಕಲ ಸಿದ್ಧತೆ ಮಾಡಿಕೊಂಡಿದೆ. ಕಾನೂನು ಹೋರಾಟದಲ್ಲಿ ಮಹಾರಾಷ್ಟ್ರಕ್ಕೆ ವಿರುದ್ಧ ವಾದ ಮಾಡಲು ಸಿದ್ದತೆ ಮಾಡಿಕೊಂಡಿದೆ.

ಕಳೆದ ಸೋಮವಾರ ಮುಖ್ಯಮಂತ್ರಿ ಬೊಮ್ಮಾಯಿ ತುರ್ತು ಸಭೆ ನಡೆಸಿದ್ರು. ಸಭೆಯಲ್ಲಿ ಗಡಿ ವಿವಾದ ಕುರಿತಂತೆ ರಾಜ್ಯದ ಪರ ಸಮರ್ಥವಾಗಿ ವಾದ ಮಂಡಿಸಲು ಬಲಿಷ್ಠ ಕಾನೂನು ತಂಡ ರಚಿಸಲಾಗಿದೆ. ಹಿರಿಯ ವಕೀಲರಾದ ಮುಕುಲ್‌ ರೋಹಟಗಿ, ಶಾಮ್‌ ದಿವಾನ್‌, ಉದಯ್‌ ಹೊಳ್ಳ ಹಾಗೂ ಮಾರುತಿ ಜಿರಲೆ ಅವರು ತಂಡದಲ್ಲಿದ್ದಾರೆ.

Related News

ಬೆಳಗಾವಿಯಲ್ಲಿ ಬ್ರಿಡ್ಜ್ ಮೇಲಿಂದ ಉರುಳಿಬಿದ್ದ ಟ್ಯಾಂಕರ್ ಅದೃಷ್ಟವಶಾತ್ ಬದುಕುಳಿದ ಚಾಲಕ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ಮೂಲದ ರಾಮದಾಸ್...

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಐವರ ಸಾವು

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ) ನಲ್ಲಿ ನಡೆದಿದೆ. ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -