ಬೆಳಗಾವಿ: ಪ್ರಚೋದನಕಾರಿ ವಾಟ್ಸಾಪ್ ಸಂದೇಶಗಳನ್ನು ಹರಿಬಿಟ್ಟ ಆರೋಪದ ಮೇಲೆ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮೂವರ ವಿರುದ್ಧ ದೂರು ದಾಖಲಾಗಿದೆ.
ಸೋಷಿಯಲ್ ಮೀಡಿಯಾದಲ್ಲಿ ಮೇಸೆಜ್ ಹಾಕಿ ಪ್ರಚೋದನೆ ನೀಡುತ್ತಿದ್ದ ಆರೋಪದ ಹಿನ್ನೆಲೆ ಮಾರ್ಕೆಟ್ ಠಾಣೆಯಲ್ಲಿ ಇಬ್ಬರು ಹಾಗೂ ಗ್ರಾಮೀಣ ಠಾಣೆಯಲ್ಲಿ ಒರ್ವನ ವಿರುದ್ಧ ದೂರು ದಾಖಲಾಗಿದೆ.
ಕಾನೂನು ಸುವ್ಯವಸ್ಥೆಗೆ ಭಂಗ ತರುವ ರೀತಿಯಲ್ಲಿ ಸೋಷಿಯಲ್ ಮೀಡಿಯಾದಲ್ಲಿ ವಾಟ್ಸಪ್, ಫೇಸ್ಬುಕ್, ಟ್ವಿಟರ್ಗಳಲ್ಲಿ ಅವಹೇಳನಕಾರಿ ಪೋಸ್ಟ್ಗಳನ್ನು ಹಾಕಬಾರದು, ಪ್ರಚೋದನಕಾರಿ ಸಂದೇಶಗಳನ್ನು ಹಾಕಿದರೇ ಹಾಗೂ ಬಂದ ಸಂದೇಶಗಳನ್ನು ಬೇರೆಯವರಿಗೆ ಕಳುಹಿಸಿದರೇ ಅಂಥವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೆಳಗಾವಿ ಮಹಾನಗರ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ತಿಳಿಸಿದ್ದಾರೆ.
ಪ್ರಚೋದನಕಾರಿ ಸಂದೇಶಗಳನ್ನು ಹರಿಬಿಟ್ಟು ಶಾಂತಿ ಕದಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಾಗುವುದು.
ಧರ್ಮ ಮತ್ತು ಭಾಷಿಕರ ಮಧ್ಯೆ ಜಗಳ ಹಚ್ಚುವ ಕೆಲಸ ಯಾರೂ ಮಾಡಬಾರದು. ಬೆಳಗಾವಿ ಜನ ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾನೂನು ಸುವ್ಯವಸ್ಥೆಗೆ ಭಂಗ ತರುವ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ.