spot_img
spot_img
spot_img
21.3 C
Belagavi
Sunday, October 1, 2023
spot_img

ತಂದೆಯಿಂದಲೇ ಮಗಳ ಮರ್ಯಾದಾ ಹತ್ಯೆ, ಪ್ರೇಮಕಥೆಗೊಂದು ದುರಂತ ಕೊನೆ

ಕೋಲಾರ: ತಂದೆಯಿಂದಲೇ ಹೆತ್ತ ಮಗಳ ಕೊಲೆಯಾಗಿರುವ ಘಟನೆ ಕೋಲಾರದ ತೊಟ್ಲಿ ಗ್ರಾಮದಲ್ಲಿ ನಡೆದಿದೆ. ರಮ್ಯಾ (19) ಕೊಲೆಯಾದ ಯುವತಿ.

ಅನ್ಯ ಜಾತಿಯ ಯುವಕನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಮಗಳನ್ನು ಕೊಲೆ ಮಾಡಲಾಗಿದೆ. ಯುವತಿಗೆ ಎಷ್ಟೇ ಬುದ್ದಿವಾದ ಹೇಳಿದರೂ ಕೇಳದೇ ಹೋಗಿದ್ದರಿಂದ ಆಕೆಯ ತಂದೆ ವೆಂಟೇಶಗೌಡ ಮಗಳ ಹತ್ಯೆ ನಡೆಸಿದ್ದಾನೆ.

ಆಗಸ್ಟ್ 25ರಂದು ಮಗಳ ಹತ್ಯೆ ನಡೆಸಿದ ಬಳಿಕ, ಸದ್ದಿಲ್ಲದೆ ಹೆತ್ತವರು ಆಕೆಯ ಅಂತ್ಯಸಂಸ್ಕಾರ ಮುಗಿಸಿದ್ದರು. ಬಳಿಕ ಊರಿನಲ್ಲಿ ಯುವತಿಯನ್ನು ಕೊಲೆ ಮಾಡಿರುವ ಬಗ್ಗೆ ಸುದ್ದಿ ಹಬ್ಬಿದ್ದರಿಂದ ಪೊಲೀಸರು ಆಕೆಯ ತಂದೆಯನ್ನು ಕರೆಸಿ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮರ್ಯಾದಾ ಹತ್ಯೆಯಾಗಿರುವುದು ಬೆಳಕಿಗೆ ಬಂದಿದೆ.

ಭಾನುವಾರ ಬೆಳಗ್ಗೆ ತಹಶೀಲ್ದಾರ್ ಹರ್ಷವರ್ಧನ್ ಅವರ ಸಮ್ಮುಖದಲ್ಲಿ ಕೊಲೆಯಾದ ಯುವತಿಯ ಶವವನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ. ಘಟನೆ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related News

ಸರಕಾರದ ಜೊತೆ ಎಲ್ಲ ಸಮಾಜದವರೂ ಇದ್ದಾರೆ – ಲಕ್ಷ್ಮೀ ಹೆಬ್ಬಾಳಕರ್

ಬೆಂಗಳೂರು: ಕಾಂಗ್ರೆಸ್ ಪಕ್ಷಕ್ಕೆ ಎಲ್ಲಾ ಸಮುದಾಯದ ಬೆಂಬಲ ಸಿಕ್ಕಿದೆ. ಕೇವಲ ಒಂದು ಸಮುದಾಯದ ಬೆಂಬಲದಿಂದ ಅಧಿಕಾರಕ್ಕೇರಿಲ್ಲ. ಎಲ್ಲಾ ಸಮಾಜದವರೂ ಸರಕಾರದೊಂದಿಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್...

ನಿಮ್ಮ ಆಸ್ತಿಗಳ ಮೌಲ್ಯಗಳನ್ನು ಅಪಮೌಲ್ಯ ಮಾಡಬೇಡಿ ನೈಜ್ಯ ಬೆಲೆಗೆ ವ್ಯವಹಾರ ಮಾಡಿ

ಬೆಳಗಾವಿ: ಕರ್ನಾಟಕ ರಾಜ್ಯ ಸರ್ಕಾರ ಸ್ಥಿರ ಆಸ್ತಿಗಳು ಮಾರ್ಗಸೂಚಿ ಬೆಲೆ ಪರಿಷ್ಕರಣೆ ಅಕ್ಟೋಬರ್ ಒಂದರಿಂದ ಶೆ. 10%ರಿಂದ 30%ವರೆಗೆ ಹೆಚ್ಚಳ ಮಾಡುವುದಾಗಿ ಆದೇಶ ಹೊರಡಿಸಿದೆ. ಅದರ ಅಂಗವಾಗಿ ಬೆಳಗಾವಿ ನೋಂದಣಿ ಮತ್ತು ಮುದ್ರಾಂಕ ಇಲಾಖೆ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -