spot_img
spot_img
spot_img
32.1 C
Belagavi
Tuesday, June 6, 2023
spot_img

ಚಿರತೆ ಕಾರ್ಯಾಚರಣೆ ಹೆಚ್ಚಿನ ಸಿಬ್ಬಂದಿಗಳ ನಿಯೋಜನೆ : ಸಚಿವ ಉಮೇಶ ಕತ್ತಿ

ಬೆಳಗಾವಿ : ಜಿಲ್ಲೆಯಲ್ಲಿ ಕಳೆದ 20 ದಿನಗಳಿಂದ ಚಿರತೆ ಹಾವಳಿ ಕಂಡುಬಂದಿವೆ. ಈಗಾಗಲೇ ಅಧಿಕಾರಿಗಳು 24*7 ಚಿರತೆ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದು, 3 ರಿಂದ 4 ದಿನಗಳಲ್ಲಿ ಚಿರತೆ ಕಾರ್ಯಾಚರಣೆ ಯಶಸ್ವಿಗೊಳಿಸಲಾಗುವುದು. ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ಅರಣ್ಯ, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರಾದ ಉಮೇಶ ಕತ್ತಿ ಅವರು ತಿಳಿಸಿದರು.

ನಗರದ ಅರಣ್ಯ ಇಲಾಖೆಯ ಸಭಾಂಗಣದಲ್ಲಿ ಸೋಮವಾರ (ಆ.21) ನಡೆದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲೆಯಲ್ಲಿ ಚಿರತೆ ಹಾವಳಿ ಕಾರ್ಯಾಚರಣೆಯ ಕುರಿತು ಅವರು ಮಾಹಿತಿ ನೀಡಿದರು.

ಕಳೆದ 20 ದಿನಗಳಿಂದ ಜಿಲ್ಲೆಯಲ್ಲಿ 4 ಚಿರತೆಗಳು ಕಾಣ ಸಿಕೊಂಡಿವೆ. ಅಥಣಿ  ಭಾಗದಲ್ಲಿ ಕಂಡಿರುವ ಚಿರತೆ ಮಹಾರಾಷ್ಟ್ರದ ಗಡಿಯ ಕಾಡಿನತ್ತ ಹೋಗಿರುತ್ತದೆ ಎಂದು ಮಾಹಿತಿ ಸಿಕ್ಕಿದೆ. ಸವದತ್ತಿ ಹಾಗೂ ಮೂಡಲಗಿ ಭಾಗದಲ್ಲಿ ಕಂಡುಬಂದಿರುವ ಚಿರತೆಗಳು ಈ ವರೆಗೆ ಮತ್ತೆ ಕಾಣ ಸಿಕೊಂಡಿಲ್ಲ ಎಂದು ತಿಳಿಸಿದರು.

ನಗರದಲ್ಲಿ ಕಂಡುಬಂದಿರುವ ಚಿರತೆ ಹಿಡಿಯಲು ಈಗಾಗಲೇ 24*7 ನಿರಂತರ ಕಾರ್ಯಾಚರಣೆ ನಡೆಸಲಾಗುತ್ತಿದೆ. 22 ಬೋನು ಗಳನ್ನು ಇರಿಸಲಾಗಿದೆ. ಇನ್ನೂ ಹೆಚ್ಚಿನ ಮಟ್ಟದಲ್ಲಿ ಕಾರ್ಯಾಚರಣೆ ಚುರುಕುಗೊಳಿಸಲು ತರಬೇತಿ ಪಡೆದಿರುವ 2 ಆನೆಗಳನ್ನು ತರಿಸಲಾಗುತ್ತಿದೆ ಎಂದು ಹೇಳಿದರು.

ಹೆಚ್ಚಿನ ಸಿಬ್ಬಂದಿಗಳ ನಿಯೋಜನೆ:

ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ, ಯಾವುದೇ ರೀತಿಯ ಮಾನವ ಹಾಗೂ ನಾಯಿ, ಬೀದಿ ದನಗಳು ಸೇರಿದಂತೆ ಬೇರೆ ಪ್ರಾಣ ಗಳ ಪ್ರಾಣ ಹಾನಿಯಾಗಿಲ್ಲ. ನಿರಂತರ ಕಾರ್ಯಾಚರಣೆಯಲ್ಲಿ ಅರಣ್ಯ ಇಲಾಖೆಯ ಸಿಬ್ಬಂದಿಗಳು ತೊಡಗಿಕೊಂಡಿದ್ದಾರೆ. ಇನ್ನೂ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಈ ಹಿಂದೆ ಚಿರತೆ, ಹುಲಿ ಸೇರಿದಂತೆ ಯಾವುದೇ ಕಾಡು ಪ್ರಾಣ ಗಳ ಹಾವಳಿ ಕಂಡು ಬಂದಿಲ್ಲ. ಕ್ಯಾಂಪ್, ಗಾಲ್ಫ್ ಮೈದಾನದ ಆವರಣ ಹೆಚ್ಚು ವಿಸ್ತೀರ್ಣ ಇರುವುದರಿಂದ ಚಿರತೆ ಹೆಚ್ಚಾಗಿ ಕಾಣ ಸಿಕೊಂಡಿಲ್ಲ. ಕಾರ್ಯಾಚರಣೆ ಚುರುಕುಗೊಳಿಸಿ 3 ರಿಂದ 4 ದಿನಗಳಲ್ಲಿ ಚಿರತೆ ಕಾರ್ಯಚರಣೆ ಯಶಸ್ವಿಗೊಳಿಸಲಾಗುವುದು ಎಂದು ಸಚಿವ ಉಮೇಶ ಕತ್ತಿ ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

Related News

ಅಂತೆ ಕಂತೆಗಳಿಗೆ ಕಿವಿಗೊಡಬೇಡಿ, ಸರಕಾರ ನಿಮ್ಮ ಜೊತೆಗಿದೆ – ಜನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ

ಬೆಳಗಾವಿ: ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು...

ಪ್ರಿಯತಮೆಯನ್ನು ಕೊಲೆ ಮಾಡಿ ಎಸ್ಕೇಪ್ ಆದ ಪ್ರಿಯಕರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಎಸ್ಕೇಪ್ ಆದ ಘಟನೆ ನಡೆದಿದೆ. ಬೆಂಗಳೂರಿನ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ಮೂಲದ ಆಕಾಂಕ್ಷಾ ಮೃತ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -