spot_img
spot_img
spot_img
36.1 C
Belagavi
Tuesday, June 6, 2023
spot_img

ದೇವರಲ್ಲಿ ಭಕ್ತಿ, ಜನರಲ್ಲಿ ಪ್ರೀತಿ ಇದ್ದಾಗ ಜೀವನ ಸಾರ್ಥಕ : ಚನ್ನರಾಜ ಹಟ್ಟಿಹೊಳಿ

ಬೆಳಗಾವಿ : ದೇವರಲ್ಲಿ ಭಕ್ತಿ, ಜನರಲ್ಲಿ ಪ್ರೀತಿ ಇದ್ದಾಗ ಜೀವನ ಸಾರ್ಥಕವಾಗಲಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹೇಳಿದರು.

ಮರಡಿನಾಗಲಾಪೂರ ಗ್ರಾಮದ ಶ್ರೀ ಅಕ್ಕನಾಗಲಾಂಬಿಕೆ ದೇವಸ್ಥಾನದ ಮಹಾದ್ವಾರ ಅಳವಡಿಕೆಯ ಸಲುವಾಗಿ ಕೈಗೊಂಡ ಭೂಮಿ ಪೂಜೆಯಲ್ಲಿ ಭಾಗಿಯಾಗಿ ಅವರು ಮಾತನಾಡಿದರು.

ಮನುಷ್ಯನಿಗೆ ದೈವ ಭಕ್ತಿ ಅತ್ಯಂತ ಅಗತ್ಯ. ಸಮಾಜ ಸುಲಲಿತವಾಗಿ ಸಾಗಬೇಕಾದರೆ ದೇವರ ಅನುಗ್ರಹ ಇರಬೇಕು. ಹಾಗೆಯೇ ನಮ್ಮ ಸುತ್ತಮುತ್ತ ಇರುವ ಜನರನ್ನು ಪ್ರೀತಿಸಬೇಕು. ಎಲ್ಲರ ಪ್ರೀತಿ, ವಿಸ್ವಾಸ ಗಳಿಸಿದಾಗ ಮನುಷ್ಯ ಜೀವನಕ್ಕೆ ನಿಜವಾದ ಅರ್ಥಬರುತ್ತದೆ ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ರೋಹಿಣಿ ಬಾ ಪಾಟೀಲ, ಯಲ್ಲಪ್ಪ ಕರವಿನಕೊಪ್ಪ, ನಾಗೇಶ ಶಿಂಧೆ, ಸುರೇಶ ಮೇಕಲಮರಡಿ, ಉದ್ದಪ್ಪ ವನ್ನೂರ, ವೀರಪ್ಪ ದೇಶನೂರ ಹಾಗೂ ದೇವಸ್ಥಾನ ಟ್ರಸ್ಟ್ ಕಮೀಟಿಯವರು ಉಪಸ್ಥಿತರಿದ್ದರು.

Related News

ಅಂತೆ ಕಂತೆಗಳಿಗೆ ಕಿವಿಗೊಡಬೇಡಿ, ಸರಕಾರ ನಿಮ್ಮ ಜೊತೆಗಿದೆ – ಜನರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅಭಯ

ಬೆಳಗಾವಿ: ಭರವಸೆ ನೀಡಿದಂತೆ ಎಲ್ಲ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಲಾಗುವುದು. ಯಾವುದೇ ಅಂತೆ ಕಂತೆಗಳಿಗೆ ಕಿವಿಗೊಡಬೇಡಿ. ಸರಕಾರ ನಿಮ್ಮ ಜೊತೆಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಹಿರಿಯ ನಾಗರಿಕರು ಮತ್ತು...

ಪ್ರಿಯತಮೆಯನ್ನು ಕೊಲೆ ಮಾಡಿ ಎಸ್ಕೇಪ್ ಆದ ಪ್ರಿಯಕರ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರಿಯಕರನೇ ತನ್ನ ಪ್ರಿಯತಮೆಯನ್ನು ಕೊಲೆ ಮಾಡಿ ಬಳಿಕ ಎಸ್ಕೇಪ್ ಆದ ಘಟನೆ ನಡೆದಿದೆ. ಬೆಂಗಳೂರಿನ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಹೈದರಾಬಾದ್ ಮೂಲದ ಆಕಾಂಕ್ಷಾ ಮೃತ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -