ಕಾಂಗ್ರೆಸ್ನವರು ಕೇಂದ್ರ ಅಕ್ಕಿ ಕೊಡಲು ನಿರಾಕರಿಸಿದೆ ಎಂದು ರಾಜ್ಯಾದ್ಯಂತ ಪ್ರತಿಭಟನೆ ನಡೆಸುತ್ತಿದ್ರೆ, ಮತ್ತೊಂದೆಡೆ ವಿದ್ಯುತ್ ದರ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಇದೇ ಕಾರಣಕ್ಕೆ ಧಾರವಾಡ ಬಂದ್ಗೆ ಬಿಜೆಪಿ ಕರೆ ಕೊಟ್ಟಿದ್ದು ಬಹುತೇಕ ಎಲ್ಲ ವಲಯಗಳಿಂದ ಬೆಂಬಲ ವ್ಯಕ್ತವಾಗಿದೆ. ವರ್ತಕರು, ಎಪಿಎಂಸಿ, ಬಟ್ಟೆ ವ್ಯಾಪಾರ, ಸ್ಟೇಷನರಿ, ಹೋಟೆಲ್, ಬೇಕರಿ ಮಾಲೀಕರು, ಹಾರ್ಡ್ವೇರ್ ವ್ಯಾಪಾರಿಗಳ ಸಂಘ, ಬೇಲೂರು ಕೈಗಾರಿಕಾ ಪ್ರದೇಶದ ಉದ್ಯಮಿಗಳು ಬೆಂಬಲ ಸೂಚಿಸಿವೆ.
ಇಂದು ಬೆಳಗ್ಗೆ 11 ಗಂಟೆಗೆ ಅಂಗಡಿ ಮುಂಗಟ್ಟು ಬಂದ್ ಮಾಡಿ ಕೆಸಿಸಿ ಬ್ಯಾಂಕ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ರ್ಯಾಲಿ ನಡೆಯಲಿದೆ.