spot_img
spot_img
spot_img
32.1 C
Belagavi
Tuesday, June 6, 2023
spot_img

ಗಡಿಯಲ್ಲಿ ಅಶಾಂತಿ ಮೂಡಿಸಲು ಬಿಜೆಪಿ ಆಡುತ್ತಿರುವ ನಾಟಕ: ಡಿ ಕೆ ಶಿವಕುಮಾರ್

ಬೆಳಗಾವಿ:  ಹಳ್ಳಿಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂಬ ಮಹಾರಾಷ್ಟ್ರದ ನಿರ್ಣಯವನ್ನು ಕಾಂಗ್ರೆಸ್ ಪಕ್ಷ ಹಾಗೂ ಇಡೀ ಕರ್ನಾಟಕ ತೀವ್ರವಾಗಿ ಖಂಡಿಸಿ ವಿರೋಧಿಸುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

ಬೆಳಗಾವಿ ಸುವರ್ಣಸೌಧದ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ನಮ್ಮ ರಾಜ್ಯದ ಒಂದೂ ಹಳ್ಳಿಯನ್ನು ಮಹಾರಾಷ್ಟ್ರಕ್ಕೆ ನೀಡಲು ನಾವು ತಯಾರಿಲ್ಲ. ಅವರ ಒಂದು ಹಳ್ಳಿಯೂ ನಮಗೆ ಬೇಡ. ಎರಡೂ ರಾಜ್ಯಗಳ ಗಡಿ ಅಂತಿಮವಾಗಿದ್ದು, ನಮ್ಮ ಜನ ಅದರಂತೆ ಬದುಕುತ್ತಿದ್ದಾರೆ.

ಚುನಾವಣೆ ಸಂದರ್ಭದಲ್ಲಿ ಬಿಜೆಪಿಯ ಕುತಂತ್ರದಿಂದ ಅಲ್ಲಿನ ಸಚಿವರು ಇದನ್ನು ಆರಂಭಿಸಿದ್ದು, ಈಗ ಎಲ್ಲಾ ಪಕ್ಷದವರು ಇದಕ್ಕೆ ಸೇರಿಕೊಂಡಿದ್ದಾರೆ. ನಾವೆಲ್ಲರೂ ಒಗ್ಗಟ್ಟಿನಿಂದ ನಮ್ಮ ರಾಜ್ಯವನ್ನು ಕಾಪಾಡಬೇಕು. ನಮ್ಮ ಪಕ್ಷ ಮುಂದಾಳತ್ವ ತೆಗೆದುಕೊಳ್ಳಲಿದೆ. ನಮ್ಮ ಭಾಷೆ, ನೆಲ, ಜಲ ಕಾಪಾಡುವುದು ನಮ್ಮ ಕರ್ತವ್ಯ. ಇದಕ್ಕೆ ಅಗತ್ಯ ಸಹಕಾರ ನೀಡಲು ನಾವು ಸಿದ್ಧ.ಮಹಾರಾಷ್ಟ್ರದ ತೀರ್ಮಾನಕ್ಕೆ ನಮ್ಮ ವಿರೋಧವಿದೆ. ಸದನದಲ್ಲಿ ನಾವು ಈ ವಿಚಾರವನ್ನು ಪ್ರಸ್ತಾಪ ಮಾಡುತ್ತೇವೆ.

ಇದು ಅಶಾಂತಿ ಮೂಡಿಸಲು ಬಿಜೆಪಿ ಉದ್ದೇಶಪೂರ್ವಕವಾಗಿ ಆಡುತ್ತಿರುವ ನಾಟಕ. ಇಲ್ಲಿನ ಜನರ ಭಾವನೆ ಕೆದಕಿ, ಅವರ ಬದುಕಿನಲ್ಲಿ ದ್ವೇಷ ಹಾಗೂ ಅಸೂಯೆ ಮೂಡಿಸುವ ಪ್ರಯತ್ನ ಇದಾಗಿದೆ. ಎಲ್ಲ ಕನ್ನಡಪರ ಸಂಘಟನೆಗಳು ಒಟ್ಟಾಗಿ ಯಾವುದೇ ಅಳುಕಿಲ್ಲದೆ ಇದನ್ನು ಪ್ರತಿಭಟಿಸೋಣ, ರಾಜ್ಯದ ಗೌರವ ಉಳಿಸಿಕೊಳ್ಳೋಣ.

ಕೇಂದ್ರದಲ್ಲಿ, ಮಹಾರಾಷ್ಟ್ರ ಹಾಗೂ ಕರ್ನಾಟಕದಲ್ಲಿ ಬಿಜೆಪಿ ಸರ್ಕಾರವಿದೆ. ಚುನಾವಣೆ ಸಮಯದಲ್ಲಿ ಇವರ ರಾಜಕೀಯ ಹಿತಾಸಕ್ತಿಗಾಗಿ ಇದಕ್ಕೆ ಕುಮ್ಮಕ್ಕು ನೀಡಿದ್ದಾರೆ. ರಾಜ್ಯದಲ್ಲಿರುವ ಮರಾಠಿ ಭಾಷಿಗರೂ ನಮ್ಮವರೇ. ಎಲ್ಲರೂ ಶಾಂತಿಯುತವಾಗಿ ಬದುಕಲು ಬಯಸುತ್ತಾರೆ. ಈ ಭಾಗದ ಜನರ ಹಕ್ಕು, ಹಿತಾಸಕ್ತಿ ಕಾಪಾಡಲು ಇಲ್ಲಿ ಸುವರ್ಣಸೌಧ ನಿರ್ಮಾಣ ಮಾಡಲಾಗಿದೆ. ಮಹಾರಾಷ್ಟ್ರ ಸರ್ಕಾರದ ಇಂತಹ ನಿರ್ಣಯ ನಾಚಿಕೆಗೇಡಿನ ವಿಚಾರವಾಗಿದ್ದು, ನಾವು ಇದನ್ನು ಖಂಡಿಸುತ್ತೇವೆ.

Related News

ಬೆಳಗಾವಿಯಲ್ಲಿ ಬ್ರಿಡ್ಜ್ ಮೇಲಿಂದ ಉರುಳಿಬಿದ್ದ ಟ್ಯಾಂಕರ್ ಅದೃಷ್ಟವಶಾತ್ ಬದುಕುಳಿದ ಚಾಲಕ

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿದ ಕ್ಯಾಂಟರ್ ವಾಹನವೊಂದು ಮಲಪ್ರಭಾ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಮೇಲಿಂದ ಬಿದ್ದಿರುವ ಘಟನೆ ಎಂ.ಕೆ ಹುಬ್ಬಳ್ಳಿ ಸಮೀಪದಲ್ಲಿ ನಡೆದಿದೆ. ಅಪಘಾತದಲ್ಲಿ ಅದೃಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಹಾರಾಷ್ಟ್ರ ಮೂಲದ ರಾಮದಾಸ್...

ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿ ಐವರ ಸಾವು

ಯಾದಗಿರಿ: ನಿಂತಿದ್ದ ಲಾರಿಗೆ ಕ್ರೂಸರ್ ಡಿಕ್ಕಿಯಾಗಿ ಸ್ಥಳದಲ್ಲೇ ಮೃತಪಟ್ಟ ಘಟನೆ ಯಾದಗಿರಿ ತಾಲೂಕಿನ ಬಳಿಚಕ್ರ ಗ್ರಾಮದ ರಾಷ್ಟ್ರೀಯ ಹೆದ್ದಾರಿ 150 (ಚಿ) ನಲ್ಲಿ ನಡೆದಿದೆ. ಮುನೀರ್(40), ನಯಾಮತ್ (40), ಮುದ್ದತ್ ಶಿರ್ (12), ರಮಿಜಾ ಬೇಗಂ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -