spot_img
spot_img
spot_img
24 C
Belagavi
Thursday, June 1, 2023
spot_img

ಮೀಸಲಾತಿ ವಿಚಾರ : ತಲೆ ಮೇಲೆ ತುಪ್ಪ ಸುರಿದು ಬಸಣ್ಣ ಟೋಪಿ ಹಾಕಿದ್ದಾರೆ : ಡಿಕೆಶಿ 

ಬೆಂಗಳೂರು: ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯಕ್ಕೆ ಮೀಸಲಾತಿ ಘೋಷಣೆ ಮಾಡಿದ ರಾಜ್ಯ ಸರ್ಕಾರದ ನಡೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ವ್ಯಂಗ್ಯವಾಡಿದ್ದಾರೆ. ತಲೆ ಮೇಲೆ ತುಪ್ಪ ಸುರಿದು ಬಸಣ್ಣ ಟೋಪಿ ಹಾಕಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಮೀಸಲಾತಿ ಘೋಷಣೆ ವಿಚಾರವಾಗಿ ಮಾತನಾಡಿದ ಅವರು , ಸರ್ಕಾರ ತುಪ್ಪವನ್ನು ಮೊಣಕೈಗೂ ಸವರಿಲ್ಲ, ಮೂಗಿಗೂ ಸವರಿಲ್ಲ. ತಲೆ ಮೇಲೆ ತುಪ್ಪ ಸುರಿದರು. ಅದು ನಾಲಿಗೆಗೂ ಸಿಗುತ್ತಿಲ್ಲ. ಜನರಿಗೆ ಟೋಪಿ ಹಾಕಿದ್ದಾರೆ ನಮ್ಮ ಬಸಣ್ಣ ಎಂದು ಅಭಿನಯ ಮಾಡಿ ವ್ಯಂಗ್ಯವಾಡಿದ್ದಾರೆ.

ಪಂಚಮಸಾಲಿ ಸಚಿವರು, ಶಾಸಕರು ರಾಜೀನಾಮೆ ಕೊಡಬೇಕು. ಒಕ್ಕಲಿಗ ಸ್ವಾಮೀಜಿ ತಮ್ಮ ನಿರ್ಧಾರದಿಂದ ಹಿಂದೆ ಸರಿಯುವುದಿಲ್ಲ. ಅವತ್ತು ಸಚಿವ ಆರ್ ಅಶೋಕ್ ಸಭೆಯಲ್ಲಿ ಭರವಸೆ ಕೊಟ್ಟು ಹೋದ್ರು. ಮಾನ ಮರ್ಯಾದೆ ಇದ್ದರೆ .ಆರ್ ಅಶೋಕ್ ರಾಜೀನಾಮೆ ನೀಡಲಿ ಎಂದು ಆಗ್ರಹಿಸಿದರು.

Related News

ಶೆಟ್ಟರ್​, ಲಕ್ಷ್ಮಣ್ ಸವದಿ ನಮ್ಮ ನಾಯಕರು ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ

ಬೆಳಗಾವಿ: ಯಾವ ಸಮಯದಲ್ಲಿ ಏನು ಮಾಡಬೇಕೆಂದು ನಮಗೆ ಗೊತ್ತಿದೆ. ನಾವು ಅವರ ಜೊತೆಗೆ ಇದ್ದೇವೆ, ಇಡೀ ಪಕ್ಷ ಅವರ ಜೊತೆ ಇದೆ. ಜಗದೀಶ್​ ಶೆಟ್ಟರ್, ಲಕ್ಷ್ಮಣ ಸವದಿ ನಮ್ಮ ಪಕ್ಷದ ನಾಯಕರು ಎಂದು...

ರಾಜ್ಯದ ವಿವಿದೆಡೆ ಲೋಕಾಯುಕ್ತ ದಾಳಿ

ಬೆಂಗಳೂರು:  ಅತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು(ಮೇ 31) ಬೆಳ್ಳಂಬೆಳಗ್ಗೆ ಎನ್​ಐಎ ಅಧಿಕಾರಿಗಳು ದಾಳಿ ಮಾಡಿದ್ದರೆ, ಮತ್ತೊಂದೆಡೆ ರಾಜ್ಯದ ವಿವಿದೆಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ತುಮಕೂರಿನ ಕೆಐಎಡಿಬಿ ಅಧಿಕಾರಿ ಮನೆ ಮೇಲೆ ದಾಳಿ ತುಮಕೂರಿನ ಕೆಐಎಡಿಬಿ...

LEAVE A REPLY

Please enter your comment!
Please enter your name here

Latest News

- Advertisement -
- Advertisement -
- Advertisement -
- Advertisement -